AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ಗೆ ಅಫ್ಘಾನಿಸ್ತಾನ್ ಪ್ರಾಥಮಿಕ ತಂಡ ಪ್ರಕಟ

Asia Cup 2025: ಏಷ್ಯಾಕಪ್​ 2025 ರಲ್ಲಿ ಅಫ್ಘಾನಿಸ್ತಾನ್ ತಂಡವನ್ನು ರಶೀದ್ ಖಾನ್ ಮುನ್ನಡೆಸಲಿದ್ದಾರೆ. ಈ ಹಿಂದೆ ಟಿ20 ವಿಶ್ವಕಪ್​ನಲ್ಲಿ ಅಫ್ಘಾನ್ ಪಡೆಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ರಶೀದ್ ಈ ಬಾರಿ ಕೂಡ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿಯುವ ಸೂಚನೆ ನೀಡಿದ್ದಾರೆ. ಇದಕ್ಕಾಗಿ 22 ಸದಸ್ಯರ ತಂಡವೊಂದನ್ನು ರಚಿಸಿದ್ದು, ಈ ಮೂಲಕ ಏಷ್ಯಾಕಪ್​ಗಾಗಿ ಸಿದ್ಧತೆಗಳನ್ನು ಆರಂಭಿಸಲಿದೆ.

ಏಷ್ಯಾಕಪ್​ಗೆ ಅಫ್ಘಾನಿಸ್ತಾನ್ ಪ್ರಾಥಮಿಕ ತಂಡ ಪ್ರಕಟ
Afghanistan
ಝಾಹಿರ್ ಯೂಸುಫ್
|

Updated on: Aug 07, 2025 | 10:56 AM

Share

ಸೆಪ್ಟೆಂಬರ್ 9 ರಿಂದ 28 ರವರೆಗೆ ಯುಎಇಯಲ್ಲಿ ನಡೆಯಲಿರುವ 2025 ರ ಏಷ್ಯಾಕಪ್ ಟೂರ್ನಿಗೆ ಅಫ್ಘಾನಿಸ್ತಾನ್ 22 ಸದಸ್ಯರ ಪ್ರಾಥಮಿಕ ತಂಡವನ್ನು ಪ್ರಕಟಿಸಿದೆ. ಈ ತಂಡವು ಪಾಕಿಸ್ತಾನ್ ಹಾಗೂ ಯುಎಇ ಒಳಗೊಂಡ ತ್ರಿಕೋನ ಸರಣಿ ಆಡಲಿದ್ದು, ಈ ಸರಣಿಯ ಬಳಿಕ 22 ಆಟಗಾರರಿಂದ ಏಷ್ಯಾಕಪ್​ಗೆ 15 ಮಂದಿಯನ್ನು ಆಯ್ಕೆ ಮಾಡಲಾಗುವುದು ಎಂದು ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.

ಇನ್ನು ಈ 22 ಸದಸ್ಯರ ತಂಡದಲ್ಲಿ  ಭರವಸೆಯ ಯುವ ಸ್ಪಿನ್ನರ್ ಅಲ್ಲಾ ಗಝನ್‌ಫರ್ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಫ್ಘಾನ್ ತಂಡದಲ್ಲಿ ಕಾಣಿಸಿಕೊಂಡಿದ್ದ ಗಝನ್​ಫರ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದರು. ಇದೀಗ ಸಂಪೂರ್ಣ ಫಿಟ್​​ನೆಸ್​ನೊಂದಿಗೆ ಯುವ ಸ್ಪಿನ್ನರ್ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದಾರೆ. 

2025 ರ ಟಿ20 ಬ್ಲಾಸ್ಟ್‌ನಲ್ಲಿ ಡರ್ಬಿಶೈರ್‌ ಪರ ಕಣಕ್ಕಿಳಿದಿದ್ದ ಗಝನ್​ಫರ್ 16 ವಿಕೆಟ್ ಉರುಳಿಸಿ, ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿದ್ದರು.  ಅಲ್ಲದೆ ಇದೇ ವೇಳೆ ಕೇವಲ 7.05 ರ ಎಕಾನಮಿ ರೇಟ್​ನಲ್ಲಿ ಮಾತ್ರ ರನ್ ನೀಡಿದ್ದರು. ಹೀಗಾಗಿಯೇ ಮುಂಬರುವ ಟಿ20 ಸರಣಿಗೆ ಅಲ್ಲಾ ಗಝನ್​ಫರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಸಿಬಿ ತಿಳಿಸಿದೆ.

ಇತ್ತ ಅಲ್ಲಾ ಗಝನ್​ಫರ್  ಅವರ ಮರಳುವಿಕೆಯು ಅಫ್ಘಾನಿಸ್ತಾನದ ಸ್ಪಿನ್ ಅಸ್ತ್ರವನ್ನು ಮತ್ತಷ್ಟು ಬಲಪಡಿಸಿದೆ. ಏಕೆಂದರೆ ಈಗಾಗಲೇ ತಂಡದಲ್ಲಿ ಅನುಭವಿ ಸ್ಪಿನ್ನರ್​ಗಳಾದ ರಶೀದ್ ಖಾನ್ ಹಾಗೂ ಮುಜೀಬ್ ಉರ್ ರೆಹಮಾನ್ ಇದ್ದು, ಇವರೊಂದಿಗೆ ಯುವ ಸ್ಪಿನ್ನರ್​ಗಳಾಗಿ ಅಲ್ಲಾ ಗಝನ್​ಫರ್ ಹಾಗೂ ನೂರ್ ಅಹ್ಮದ್ ಸೇರಿಕೊಂಡಿದ್ದಾರೆ. ಹೀಗಾಗಿ ಮುಂಬರುವ ಏಷ್ಯಾಕಪ್​ನಲ್ಲಿ ಅಫ್ಘಾನ್ ಕಡೆಯಿಂದ ಸ್ಪಿನ್ ಅಸ್ತ್ರಗಳ ಪ್ರಯೋಗವನ್ನು ನಿರೀಕ್ಷಿಸಬಹುದು.

ತ್ರಿಕೋನ ಸರಣಿ:

ಏಷ್ಯಾಕಪ್​ಗೂ ಮೊದಲು ಅಫ್ಘಾನಿಸ್ತಾನ್ ತ್ರಿಕೋನ ಸರಣಿ ಆಡಲಿದೆ. ಆಗಸ್ಟ್ 29 ರಿಂದ ಶಾರ್ಜಾದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಅಫ್ಘಾನಿಸ್ತಾನ್, ಪಾಕಿಸ್ತಾನ್ ಹಾಗೂ ಯುಎಇ ತಂಡಗಳು ಕಣಕ್ಕಿಳಿಯಲಿವೆ. ಈ ಸರಣಿಯ ಬಳಿಕ ಅಫ್ಘಾನ್ ಪಡೆ ಏಷ್ಯಾಕಪ್​ ಆಡಲಿದೆ.

ಏಷ್ಯಾಕಪ್​ನಲ್ಲಿ ಅಫ್ಘಾನಿಸ್ತಾನ್ ತಂಡವು ಗ್ರೂಪ್ ಬಿ ನಲ್ಲಿ ಕಾಣಿಸಿಕೊಂಡಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ್ ಹಾಗೂ ಹಾಂಗ್ ಕಾಂಗ್ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳಲ್ಲಿ 2 ಜಯ ಸಾಧಿಸಿದರೆ ಅಫ್ಘಾನಿಸ್ತಾನ್ ತಂಡವು ಸೂಪರ್ 4 ಹಂತಕ್ಕೇರಬಹುದು.

ಇದನ್ನೂ ಓದಿ: KL Rahul: ಭಾರತ ತಂಡದಿಂದ ಕೆಎಲ್ ರಾಹುಲ್ ಔಟ್

ಅತ್ತ ಗ್ರೂಪ್ ಎ ನಲ್ಲಿ ಭಾರತ, ಪಾಕಿಸ್ತಾನ್, ಒಮಾನ್ ಹಾಗೂ ಯುಎಇ ತಂಡಗಳಿವೆ. ಈ ಗ್ರೂಪ್​ನಿಂದ ಟೀಮ್ ಇಂಡಿಯಾ ಸೂಪರ್-4 ಹಂತಕ್ಕೇರಿದರೆ, ದ್ವಿತೀಯ ಸುತ್ತಿನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ಮುಖಾಮುಖಿಯಾಗಲಿದೆ.

ಏಷ್ಯಾ ಕಪ್ ಮತ್ತು ತ್ರಿಕೋನ ಸರಣಿಗೆ ಅಫ್ಘಾನಿಸ್ತಾನ್ ಪ್ರಾಥಮಿಕ ತಂಡ:

ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಸೇದಿಖುಲ್ಲಾ ಅಟಲ್, ವಫಿವುಲ್ಲಾ ತಾರಖಿಲ್, ಇಬ್ರಾಹಿಂ ಝದ್ರಾನ್, ದರ್ವಿಶ್ ರಸೂಲಿ, ಮೊಹಮ್ಮದ್ ಇಶಾಕ್, ಮೊಹಮ್ಮದ್ ನಬಿ, ನಂಗ್ಯಾಲ್ ಖರೋಟಿ, ಶರಫುದ್ದೀನ್ ಅಶ್ರಫ್, ಕರೀಮ್ ಜನ್ನತ್, ಅಝ್ಮತ್ ಒಮರ್​ಝಾಹಿ, ಗುಲ್ಬದ್ದೀನ್ ನೈಬ್,  ಮುಜೀಬ್ ಝದ್ರಾನ್, ಅಲ್ಲಾ ಗಝನ್​ಫರ್, ನೂರ್ ಅಹ್ಮದ್, ಫಝಲ್ಹಕ್ ಫಾರೂಖಿ, ನವೀನ್ ಉಲ್ ಹಕ್, ಫರೀದ್ ಮಲಿಕ್, ಸಲೀಮ್ ಸಫಿ, ಅಬ್ದುಲ್ಲಾ ಅಹ್ಮದ್​ಝಾಹಿ, ಬಶೀರ್ ಅಹ್ಮದ್.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ