Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan Cricket: ಇತಿಹಾಸ ರಚಿಸಿದ ಕ್ರಿಕೆಟ್ ಶಿಶುಗಳು: ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಅರ್ಹತೆ ಪಡೆದ ಅಫ್ಘಾನಿಸ್ತಾನ

Champions Trophy 2025: ಒಟ್ಟು ಎಂಟು ತಂಡಗಳು ಮಾತ್ರ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಬಹುದು. ಆತಿಥೇಯ ರಾಷ್ಟ್ರವಾಗಿರುವುದರಿಂದ ಪಾಕಿಸ್ತಾನ ಸ್ವಯಂಚಾಲಿತವಾಗಿ ಅರ್ಹತೆ ಪಡೆಯುತ್ತದೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವನ್ನು ಹೊರತುಪಡಿಸಿ, ಭಾರತ, ದಕ್ಷಿಣ ಆಫ್ರಿಕಾ, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾಗಳು ಚಾಂಪಿಯನ್ಸ್ ಟ್ರೋಫಿ 2025 ಈವೆಂಟ್‌ನಲ್ಲಿ ಭಾಗವಹಿಸಲಿದೆ.

Afghanistan Cricket: ಇತಿಹಾಸ ರಚಿಸಿದ ಕ್ರಿಕೆಟ್ ಶಿಶುಗಳು: ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಅರ್ಹತೆ ಪಡೆದ ಅಫ್ಘಾನಿಸ್ತಾನ
ಅಫ್ಘಾನಿಸ್ತಾನ ತಂಡ
Follow us
Vinay Bhat
|

Updated on: Nov 07, 2023 | 2:34 PM

ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ 2025 ಕ್ಕೆ (Champions Trophy 2025) ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಅರ್ಹತೆ ಪಡೆದುಕೊಂಡಿದೆ. ಐಸಿಸಿ ಏಕದಿನ ವಿಶ್ವಕಪ್‌ 2023ರಲ್ಲಿ ಬಾಂಗ್ಲಾದೇಶದ ವಿರುದ್ಧ ಶ್ರೀಲಂಕಾ ಸೋತ ನಂತರ ಅಫ್ಘಾನಿಸ್ತಾನ ಚಾಂಪಿಯನ್ಸ್ ಟ್ರೋಫಿ ಈವೆಂಟ್‌ನಲ್ಲಿ ಭಾಗವಹಿಸುವುದು ಖಚಿತವಾಯಿತು. ಅಫ್ಘಾನ್ ತಂಡ ಇದುವರೆಗೆ ಚಾಂಪಿಯನ್ಸ್ ಟ್ರೋಫಿ ಆಡಿಲ್ಲ. ಚೊಚ್ಚಲ ಬಾರಿಗೆ ಪ್ರವೇಶ ಪಡೆದಿರುವ ಅಫ್ಘಾನಿಸ್ತಾನ ಸದ್ಯ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಂದ್ಯವನ್ನು ಆಡುತ್ತಿದೆ.

ಒಟ್ಟು ಎಂಟು ತಂಡಗಳು ಮಾತ್ರ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಬಹುದು. ಆತಿಥೇಯ ರಾಷ್ಟ್ರವಾಗಿರುವುದರಿಂದ ಪಾಕಿಸ್ತಾನ ಸ್ವಯಂಚಾಲಿತವಾಗಿ ಆಯ್ಕೆ ಆಗುತ್ತದೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವನ್ನು ಹೊರತುಪಡಿಸಿ, ಭಾರತ, ದಕ್ಷಿಣ ಆಫ್ರಿಕಾ, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಚಾಂಪಿಯನ್ಸ್ ಟ್ರೋಫಿ 2025 ಈವೆಂಟ್‌ನಲ್ಲಿ ಭಾಗವಹಿಸಲಿದೆ. ಇನ್ನೂ ಎರಡು ಸ್ಥಾನಗಳು ಯಾವುದು ಎಂಬುದು ಫೈನಲ್ ಆಗಬೇಕಿದೆ.

ಇಂಗ್ಲೆಂಡ್, ನೆದರ್ಲೆಂಡ್ಸ್, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಇನ್ನೂ ಚಾಂಪಿಯನ್ಸ್ ಟ್ರೋಫಿ ಆಡಲು ಸ್ಪರ್ಧೆಯಲ್ಲಿದೆ. ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಎಂಟು ಸ್ಥಾನ ಪಡೆದಿರುವ ತಂಡ ಚಾಂಪಿಯನ್ಸ್ ಟ್ರೋಫಿ 2025 ಅನ್ನು ಆಡುತ್ತವೆ.

ಇದನ್ನೂ ಓದಿ
Image
ಅಫ್ಘಾನಿಸ್ತಾನ ಪ್ರ್ಯಾಕ್ಟೀಸ್ ಸೆಷನ್​ನಲ್ಲಿ ಸಚಿನ್ ತೆಂಡೂಲ್ಕರ್
Image
ಬಿಸಿಸಿಐ ಮಾಸ್ಟರ್ ಪ್ಲಾನ್: 1 ವರ್ಷದ ಬಳಿಕ ಟೀಮ್ ಇಂಡಿಯಾಕ್ಕೆ ಕಮ್​ಬ್ಯಾಕ್
Image
ಚೊಚ್ಚಲ ಬಾರಿಗೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಎತ್ತಿ ಹಿಡಿದ ಪಂಜಾಬ್
Image
ಬೆಂಗಳೂರಿಗೆ ಆಗಮಿಸಿದ ಟೀಮ್ ಇಂಡಿಯಾ: ರೋಹಿತ್ ಪಡೆಗೆ ಅದ್ಧೂರಿ ಸ್ವಾಗತ

IND vs NED, ICC World Cup: ಬೆಂಗಳೂರಿಗೆ ಆಗಮಿಸಿದ ಟೀಮ್ ಇಂಡಿಯಾ ಆಟಗಾರರು: ರೋಹಿತ್ ಪಡೆಗೆ ಅದ್ಧೂರಿ ಸ್ವಾಗತ

ಅಫ್ಘಾನಿಸ್ತಾನ ಈ ಬಾರಿಯ ವಿಶ್ವಕಪ್​ನಲ್ಲಿ ನಿರೀಕ್ಷೆಗೂ ಮೀರಿದ ಪ್ರದರ್ಶನ ತೋರಿದೆ. ಹಶ್ಮತುಲ್ಲಾ ಶಾಹಿದಿ ನೇತೃತ್ವದ ತಂಡವು ವಿಶ್ವಕಪ್‌ನ 2015 ಮತ್ತು 2019 ಆವೃತ್ತಿಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿತ್ತು. ಆದರೆ, ಈ ಬಾರಿ ಅಫ್ಘನ್ನರು ಇಂಗ್ಲೆಂಡ್, ಪಾಕಿಸ್ತಾನ ಮತ್ತು ನೆದರ್ಲೆಂಡ್ಸ್ ತಂಡಗಳನ್ನು ಸೋಲಿಸಿ ವಿಶ್ವಕಪ್ ಸೆಮಿ ಫೈನಲ್ ರೇಸ್​ನಲ್ಲಿ ಕಾಣಿಸಿಕೊಂಡಿದೆ.

ಅಫ್ಘಾನಿಸ್ತಾನ ತಂಡ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಇನ್ನೂ ಎರಡು ಪಂದ್ಯಗಳನ್ನು ಆಡಲಿದೆ. ಈ ಪೈಕಿ ಇಂದು ಆಸೀಸ್ ವಿರುದ್ಧ ಪಂದ್ಯವನ್ನು ಆಡುತ್ತಿದೆ. ಸೆಮೀಸ್ ಸ್ಥಾನ ಖಚಿತಪಡಿಸಿಕೊಳ್ಳಲು ಈ ಎರಡೂ ಪಂದ್ಯಗಳನ್ನು ಗೆಲ್ಲಬೇಕಾಗಿದೆ. 8 ಅಂಕಗಳೊಂದಿಗೆ ಅಫ್ಘಾನಿಸ್ತಾನವು ಪ್ರಸ್ತುತ ಆರನೇ ಸ್ಥಾನದಲ್ಲಿದ್ದು, ಮುಂದಿನ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾವನ್ನು ಮಣಿಸಿದರೆ ಸೆಮಿಫೈನಲ್‌ನಲ್ಲಿ ಸ್ಥಾನ ಪಡೆಯಲಿದೆ. ಆದರೆ ಅಫ್ಘಾನಿಸ್ತಾನ ತನ್ನ ಒಂದು ಅಥವಾ ಎರಡರ ಪಂದ್ಯಗಳಲ್ಲಿ ಸೋತರೆ, ನ್ಯೂಝಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಮುಂದಿನ ಪಂದ್ಯಗಳನ್ನು ಭಾರೀ ಅಂತರದಿಂದ ಸೋಲಬೇಕು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ