AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್ ಆಫ್ರಿಕಾ ವಿರುದ್ಧ ಅಫ್ಘಾನಿಸ್ತಾನ್ ತಂಡಕ್ಕೆ ಐತಿಹಾಸಿಕ ಗೆಲುವು

Afghanistan vs South Africa: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಪಾಕಿಸ್ತಾನ್, ನ್ಯೂಝಿಲೆಂಡ್, ವೆಸ್ಟ್ ಇಂಡೀಸ್ ತಂಡಗಳಿಗೆ ಸೋಲುಣಿಸಿರುವ ಅಫ್ಘಾನಿಸ್ತಾನ್ ಪಡೆ ಇದೀಗ ಸೌತ್ ಆಫ್ರಿಕಾ ವಿರುದ್ಧ ಕೂಡ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಬಲಿಷ್ಠ ಪಡೆಗಳ ವಿರುದ್ಧ ತನ್ನ ಅದ್ಭುತ ಪ್ರದರ್ಶನವನ್ನು ಅಫ್ಘಾನಿಸ್ತಾನ್ ತಂಡ ಮುಂದುವರೆಸಿದೆ.

ಸೌತ್ ಆಫ್ರಿಕಾ ವಿರುದ್ಧ ಅಫ್ಘಾನಿಸ್ತಾನ್ ತಂಡಕ್ಕೆ ಐತಿಹಾಸಿಕ ಗೆಲುವು
Afghanistan
ಝಾಹಿರ್ ಯೂಸುಫ್
|

Updated on: Sep 19, 2024 | 8:14 AM

Share

ಸೌತ್ ಆಫ್ರಿಕಾ ವಿರುದ್ಧ ಅಫ್ಘಾನಿಸ್ತಾನ್ ತಂಡವು ಐತಿಹಾಸಿಕ ಗೆಲುವು ದಾಖಲಿಸಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಅಫ್ಘಾನ್ ಪಡೆ 6 ವಿಕೆಟ್​ಗಳ ಜಯ ಸಾಧಿಸಿತು. ಇದು ಸೌತ್ ಆಫ್ರಿಕಾ ವಿರುದ್ಧದ ಅಫ್ಘಾನ್ ತಂಡದ ಮೊದಲ ಗೆಲುವು ಎಂಬುದು ವಿಶೇಷ. ಇದಕ್ಕೂ ಮುನ್ನ  ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಆದರೆ ಸೌತ್ ಆಫ್ರಿಕಾ ನಾಯಕನ ನಿರ್ಧಾರ ತಪ್ಪು ಎಂಬುದನ್ನು ಅಫ್ಘಾನಿಸ್ತಾನ್ ಬೌಲರ್​ಗಳು ಪವರ್​ಪ್ಲೇನಲ್ಲೇ ನಿರೂಪಿಸಿದ್ದರು. ಆರಂಭದಿಂದಲೇ ಕರಾರುವಾಕ್ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾದ ಫಝಲ್​ಹಕ್ ಫಾರೂಖಿ ಮೂರನೇ ಓವರ್​ನ ಕೊನೆಯ ಎಸೆತದಲ್ಲಿ ಆರಂಭಿಕ ಆಟಗಾರ ರೀಝ ಹೆಂಡ್ರಿಕ್ಸ್ (9) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು.

ಇದರ ಬೆನ್ನಲ್ಲೇ ಐಡೆನ್ ಮಾರ್ಕ್ರಾಮ್ (2) ಸಹ ಫಾರೂಖಿ ಎಸೆತದಲ್ಲಿ ಬೌಲ್ಡ್ ಆಗಿ ನಿರ್ಗಮಿಸಿದರು. ಇನ್ನು ಟೋನಿ ಡಿ ಝೋರ್ಝಿ 11 ರನ್​ಗಳಿಸಿ ಫಝಲ್​ಹಕ್ ಫಾರೂಖಿಗೆ ವಿಕೆಟ್ ಒಪ್ಪಿಸಿದರು. ಈ ಆರಂಭಿಕ ಆಘಾತದಿಂದ ಪಾರಾಗುವ ಮುನ್ನವೇ ಅಲ್ಲಾ ಗಾಝನ್ಫರ್ ಸೌತ್ ಆಫ್ರಿಕಾ ತಂಡಕ್ಕೆ ಮತ್ತೊಂದು ಆಘಾತ ನೀಡಿದ್ದರು.

ಯುವ ಸ್ಪೋಟಕ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ (0) ರನ್ನು ಶೂನ್ಯಕ್ಕೆ ಔಟ್ ಮಾಡಿದ ಅಲ್ಲಾ ಗಾಝನ್ಫರ್, ಆ ಬಳಿಕ ಜೇಸನ್ ಸ್ಮಿತ್ (0) ಹಾಗೂ ಕೈಲ್ ವೆರೆನ್ನೆ (11) ಗೆ ಪೆವಿಲಿಯನ್ ಹಾದಿ ತೋರಿಸಿದರು. ಪರಿಣಾಮ ಸೌತ್ ಆಫ್ರಿಕಾ ತಂಡವು ಕೇವಲ 36 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡಿತು.

ಈ ಹಂತದಲ್ಲಿ ಫೆಹ್ಲುಕ್ವಾಯೊ (0) ಕೂಡ ರನೌಟ್ ಆದರು. ಇದರ ನಡುವೆ ವಿಯಾನ್ ಮುಲ್ಡರ್ 84 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 52 ರನ್​ ಕಲೆಹಾಕಿದರು. ಈ ಏಕಾಂಗಿ ಹೋರಾಟದಿಂದಾಗಿ ಸೌತ್ ಆಫ್ರಿಕಾ ತಂಡದ ಸ್ಕೋರ್ 100ರ ಗಡಿದಾಟಿತು. ಅತ್ತ ಮುಲ್ಡರ್ ವಿಕೆಟ್ ಸಿಗುತ್ತಿದ್ದಂತೆ ಮತ್ತೆ ಸಾಂಘಿಕ ದಾಳಿ ಸಂಘಟಿಸಿದ ಅಫ್ಘಾನಿಸ್ತಾನ್ ತಂಡವು  33.2 ಓವರ್​ಗಳಲ್ಲಿ ಸೌತ್ ಆಫ್ರಿಕಾ ತಂಡವನ್ನು 106 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು.

ಅಫ್ಘಾನಿಸ್ತಾನ್ ಪರ ಎಡಗೈ ವೇಗಿ ಫಝಲ್​ಹಕ್ ಫಾರೂಖಿ 7 ಓವರ್​ಗಳಲ್ಲಿ 35 ರನ್ ನೀಡಿ 4 ವಿಕೆಟ್ ಪಡೆದರೆ, ಅಲ್ಲಾ ಗಾಝನ್ಫರ್ 10 ಓವರ್​ಗಳಲ್ಲಿ 20 ರನ್ ನೀಡಿ 3 ವಿಕೆಟ್ ಕಬಳಿಸಿದರು. ಹಾಗೆಯೇ ರಶೀಧ್ ಖಾನ್ 8.3 ಓವರ್​ಗಳಲ್ಲಿ 30 ರನ್ ನೀಡಿ 2 ವಿಕೆಟ್ ಪಡೆದರು.

107 ರನ್​ಗಳ ಸುಲಭ ಗುರಿ:

50 ಓವರ್​ಗಳಲ್ಲಿ 107 ರನ್​ಗಳ ಗುರಿ ಪಡೆದ ಅಫ್ಘಾನಿಸ್ತಾನ್ ತಂಡವು ಮೊದಲ ಓವರ್​ನಲ್ಲೇ ರಹಮಾನುಲ್ಲಾ ಗುರ್ಬಾಝ್ (0) ವಿಕೆಟ್ ಕಳೆದುಕೊಂಡಿತು. ಇದರ ಬೆನ್ನಲ್ಲೇ ರಹಮತ್ ಶಾ (8) ಕೂಡ ಔಟಾದರು. ಇನ್ನು ಯುವ ಆರಂಭಿಕ ಬ್ಯಾಟರ್ ರಿಯಾಝ್ ಹಸನ್ ಕೇವಲ 16 ರನ್​ಗಳಿಸಲಷ್ಟೇ ಶಕ್ತರಾದರು. ನಾಯಕ ಹಶ್ಮತುಲ್ಲಾ ಶಾಹಿದಿ (16) ಕೂಡ ಬಂದ ವೇಗದಲ್ಲೇ ಹಿಂತಿರುಗಿದರು.

ಕೇವಲ 60 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಅಫ್ಘಾನಿಸ್ತಾನ್ ತಂಡಕ್ಕೆ ಗುಲ್ಬುದ್ದೀನ್ ನೈಬ್ (34) ಹಾಗೂ ಒಮರ್​ಝೈ (25) ಆಸರೆಯಾಗಿ ನಿಂತರು. ಅಲ್ಲದೆ 26 ಓವರ್​ಗಳಲ್ಲಿ ತಂಡವನ್ನು ಗುರಿ ತಲುಪಿಸುವ ಮೂಲಕ ಅಫ್ಘಾನಿಸ್ತಾನ್ ತಂಡಕ್ಕೆ 6 ವಿಕೆಟ್​ಗಳ ಜಯ ತಂದುಕೊಟ್ಟರು. ಈ ಮೂಲಕ ಸೌತ್ ಆಫ್ರಿಕಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಚೊಚ್ಚಲ ಜಯ ಸಾಧಿಸುವಲ್ಲಿ ಅಫ್ಘಾನಿಸ್ತಾನ್ ತಂಡ ಯಶಸ್ವಿಯಾಗಿದೆ.

ಅಫ್ಘಾನಿಸ್ತಾನ್ ಪ್ಲೇಯಿಂಗ್ 11: ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್) , ರಿಯಾಝ್ ಹಸನ್ , ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ) , ಮೊಹಮ್ಮದ್ ನಬಿ , ಅಜ್ಮತುಲ್ಲಾ ಒಮರ್​ಝೈ , ಗುಲ್ಬದಿನ್ ನೈಬ್ , ರಶೀದ್ ಖಾನ್ , ಅಲ್ಲಾ ಗಾಝನ್ಫರ್ , ಫಝಲ್​ಹಕ್ ಫಾರೂಕಿ , ನಂಗೆಯಾ ಖಾರೋಟೆ.

ಇದನ್ನೂ ಓದಿ: IPL 2025: ಈ ಸಲ ಕಪ್ ನಮ್ದೆ… ಇದುವೇ ಕೆಎಲ್ ರಾಹುಲ್ ಇಚ್ಛೆ..!

ಸೌತ್ ಆಫ್ರಿಕಾ ಪ್ಲೇಯಿಂಗ್ 11: ರೀಝ ಹೆಂಡ್ರಿಕ್ಸ್ , ಟೋನಿ ಡಿ ಝೋರ್ಝಿ , ಐಡೆನ್ ಮಾರ್ಕ್ರಾಮ್ (ನಾಯಕ) ಟ್ರಿಸ್ಟನ್ ಸ್ಟಬ್ಸ್ , ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್) , ಜೇಸನ್ ಸ್ಮಿತ್ , ವಿಯಾನ್ ಮುಲ್ಡರ್ , ಆಂಡಿಲ್ ಫೆಹ್ಲುಕ್ವಾಯೊ , ಜೋರ್ನ್ ಫೋರ್ಚುಯಿನ್ , ಲುಂಗಿ ಎನ್ಗಿಡಿ , ನಾಂಡ್ರೆ ಬರ್ಗರ್.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ