AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಅಫ್ಘಾನಿಸ್ತಾನ್ ಟೆಸ್ಟ್ ತಂಡ ಪ್ರಕಟ: ರಶೀದ್ ಖಾನ್ ಔಟ್..!

Afghanistan vs Sri Lanka: ಅಫ್ಘಾನಿಸ್ತಾನ್ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಪಂದ್ಯವು ಫೆಬ್ರವರಿ 2 ರಿಂದ ಶುರುವಾಗಲಿದೆ. ಲಂಕಾದ ಸಿಂಘಲೀಸ್ ಸ್ಪೋರ್ಟ್ಸ್ ಕ್ಲಬ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಅಫ್ಘಾನಿಸ್ತಾನ್ ತಂಡವನ್ನು ಘೋಷಿಸಲಾಗಿದೆ.

Afghanistan: ಅಫ್ಘಾನಿಸ್ತಾನ್ ಟೆಸ್ಟ್ ತಂಡ ಪ್ರಕಟ: ರಶೀದ್ ಖಾನ್ ಔಟ್..!
Afghanistan
TV9 Web
| Edited By: |

Updated on: Jan 30, 2024 | 1:58 PM

Share

ಶ್ರೀಲಂಕಾ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಅಫ್ಘಾನಿಸ್ತಾನ್ ತಂಡವನ್ನು (Afghanistan squad) ಪ್ರಕಟಿಸಲಾಗಿದೆ. 16 ಸದಸ್ಯರ ಈ ತಂಡವನ್ನು ಇಬ್ರಾಹಿಂ ಝದ್ರಾನ್ ಮುನ್ನಡೆಸಲಿದ್ದಾರೆ. ಹಾಗೆಯೇ ಉಪನಾಯಕರಾಗಿ ರಹಮತ್ ಶಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಬಳಗದಲ್ಲಿ ಸ್ಟಾರ್ ಆಟಗಾರ ರಶೀದ್ ಖಾನ್ ಕಾಣಿಸಿಕೊಂಡಿಲ್ಲ.

ಬೆನ್ನು ನೋವಿನ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ರಶೀದ್ ಖಾನ್ ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹಾಗೆಯೇ ರಶೀದ್ ಖಾನ್ ಸ್ಥಾನದಲ್ಲಿ ಮತ್ತೋರ್ವ ಸ್ಪಿನ್ನರ್ ಖೈಸ್ ಅಹ್ಮದ್​ಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

ಇನ್ನು ಈ ತಂಡದಲ್ಲಿ ನಾಲ್ವರು ಹೊಸ ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ. ನೂರ್ ಅಲಿ ಝದ್ರಾನ್, ಬಲಗೈ ಸೀಮರ್ ನವೀದ್ ಝದ್ರಾನ್ ಮತ್ತು ಕೀಪರ್-ಬ್ಯಾಟ್ಸ್‌ಮನ್ ಮೊಹಮ್ಮದ್ ಇಶಾಕ್ ಅವರು ಇದೇ ಮೊದಲ ಬಾರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಝಿಯಾ ಉರ್​ ರೆಹಮಾನ್ ಕೂಡ ಅಫ್ಘಾನ್ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Shubman Gill: ಶುಭ್​ಮನ್ ಗಿಲ್, ಅಹಮದಾಬಾದ್​ ಪಿಚ್​ನಲ್ಲಿ ಹುಲಿ, ಇತರೆಡೆ…

ಫೆಬ್ರವರಿ 2 ರಿಂದ ಅಫ್ಘಾನಿಸ್ತಾನ್ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಪಂದ್ಯ ಶುರುವಾಗಲಿದ್ದು, ಈ ಪಂದ್ಯಕ್ಕೆ ಲಂಕಾದ ಸಿಂಘಲೀಸ್ ಸ್ಪೋರ್ಟ್ಸ್ ಕ್ಲಬ್ ಕ್ರಿಕೆಟ್ ಮೈದಾನ ಆತಿಥ್ಯವಹಿಸಲಿದೆ. ಈ ಪಂದ್ಯಕ್ಕಾಗಿ ಆಯ್ಕೆಯಾದ ಅಫ್ಘಾನಿಸ್ತಾನ್ ಟೆಸ್ಟ್ ತಂಡ ಈ ಕೆಳಗಿನಂತಿದೆ…

ಅಫ್ಘಾನಿಸ್ತಾನ್ ಟೆಸ್ಟ್ ತಂಡ : ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮತ್ ಶಾ (ಉಪನಾಯಕ), ಇಕ್ರಮ್ ಅಲಿಖೈಲ್ (ವಿಕೆಟ್ ಕೀಪರ್), ಮೊಹಮ್ಮದ್ ಇಶಾಕ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ನೂರ್ ಅಲಿ ಝದ್ರಾನ್, ಅಬ್ದುಲ್ ಮಲಿಕ್, ಬಹೀರ್ ಶಾ, ನಾಸಿರ್ ಜಮಾಲ್, ಖೈಸ್ ಅಹ್ಮದ್, ಝಹೀರ್ ಖಾನ್, ಝಿಯಾ ಉರ್ ರೆಹಮಾನ್ ಅಕ್ಬರ್, ಯಾಮಿನ್ ಅಹ್ಮದ್ಝೈ, ನಿಝತ್ ಮಸೂದ್, ಮೊಹಮ್ಮದ್ ಸಲೀಮ್ ಸಫಿ ಮತ್ತು ನವೀದ್ ಝದ್ರಾನ್.

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ