AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan vs New Zealand: ಅಫ್ಘಾನ್ vs ನ್ಯೂಜಿಲೆಂಡ್, ಯಾರು ಬಲಿಷ್ಠ? ಇಲ್ಲಿ ಅಂಕಿ ಅಂಶಗಳೇ ಅಚ್ಚರಿ

T20 World Cup 2021: ಅಫ್ಘಾನ್ ತಂಡವು ರಶೀದ್ ಖಾನ್, ಮೊಹಮ್ಮದ್ ನಬಿ ಹಾಗೂ ಮುಜೀಬುರ್ ರೆಹಮಾನ್ ಅವರನ್ನು ಅವಲಂಭಿಸಿದ್ದು, ಇವರ ಸ್ಪಿನ್ ಮೋಡಿ ನಡೆದರೆ ನ್ಯೂಜಿಲೆಂಡ್ ತಂಡವನ್ನು ಕಡಿಮೆ ಮೊತ್ತಕ್ಕೆ ನಿಯಂತ್ರಿಸಬಹುದು.

Afghanistan vs New Zealand: ಅಫ್ಘಾನ್ vs ನ್ಯೂಜಿಲೆಂಡ್, ಯಾರು ಬಲಿಷ್ಠ? ಇಲ್ಲಿ ಅಂಕಿ ಅಂಶಗಳೇ ಅಚ್ಚರಿ
Afghanistan vs New Zealand
TV9 Web
| Edited By: |

Updated on: Nov 06, 2021 | 7:13 PM

Share

ಐಸಿಸಿ ಟಿ20 ವಿಶ್ವಕಪ್​ನ 40ನೇ ಪಂದ್ಯವು ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಅಫ್ಘಾನಿಸ್ತಾನ್ ಮುಖಾಮುಖಿಯಾಗುತ್ತಿದ್ದರೂ, ಇದರ ಫಲಿತಾಂಶವನ್ನು ಎದುರು ನೋಡುತ್ತಿರುವುದು ಭಾರತ ತಂಡ ಎಂಬುದು ವಿಶೇಷ. ಅಂದರೆ ಅಫ್ಘಾನ್​ ವಿರುದ್ದ ನ್ಯೂಜಿಲೆಂಡ್ ಸೋತರೆ ಮಾತ್ರ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಹೀಗಾಗಿ ಭಾನುವಾರ ನಡೆಯಲಿರುವ ಈ ಪಂದ್ಯದವು ಇದೀಗ ಇಡೀ ಕ್ರಿಕೆಟ್ ಪ್ರೇಮಿಗಳ ಕೇಂದ್ರ ಬಿಂದುವಾಗಿದೆ.

ಇಲ್ಲಿ ಮತ್ತೊಂದು ಅಚ್ಚರಿಯ ಅಂಶವೆಂದರೆ ಇದುವರೆಗೆ ಉಭಯ ತಂಡಗಳು ಟಿ20 ಕ್ರಿಕೆಟ್​ನಲ್ಲಿ ಮುಖಾಮುಖಿಯಾಗಿಲ್ಲ ಎಂಬುದು. ಅಂದರೆ ಭಾನುವಾರ ಅಬುಧಾಬಿಯಲ್ಲಿ ನಡೆಯಲಿರುವ ಪಂದ್ಯದ ಮೂಲಕ ಎರಡೂ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದೆ. ಹೀಗಾಗಿ ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ ಎಂದು ನಿರ್ಧರಿಸಲಾಗುವುದಿಲ್ಲ.

ಇನ್ನು ನ್ಯೂಜಿಲೆಂಡ್ ಹಾಗೂ ಅಫ್ಘಾನಿಸ್ತಾನ್ ಈ ಮೊದಲು ಎರಡು ಪಂದ್ಯಗಳನ್ನಾಡಿದೆ. ಅದು ಕೂಡ ಏಕದಿನ ವಿಶ್ವಕಪ್​ನಲ್ಲಿ ಎಂಬುದು ವಿಶೇಷ. ಅಂದರೆ 2015 ರಲ್ಲಿ ಹಾಗೂ 2019 ರಲ್ಲಿ ಏಕದಿನ ವಿಶ್ವಕಪ್​ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿತ್ತು. ಈ ಎರಡೂ ಪಂದ್ಯಗಳಲ್ಲೂ ನ್ಯೂಜಿಲೆಂಡ್ ಗೆಲುವು ದಾಖಲಿಸಿತ್ತು. ಆದರೆ ಏಕದಿನ ಪಂದ್ಯಕ್ಕೂ ಟಿ20 ಕ್ರಿಕೆಟ್​ಗೂ ಅಜಗಜಾಂತರ ವ್ಯತ್ಯಾಸವಿದೆ. ಅದರಲ್ಲೂ ಚುಟುಕು ಕ್ರಿಕೆಟ್​ನಲ್ಲಿ ಅಫ್ಘಾನಿಸ್ತಾನ್ ಆಟಗಾರರು ಬಲಿಷ್ಠರು ಎಂದೇ ಹೇಳಬಹುದು.

ಅಫ್ಘಾನ್ ತಂಡವು ರಶೀದ್ ಖಾನ್, ಮೊಹಮ್ಮದ್ ನಬಿ ಹಾಗೂ ಮುಜೀಬುರ್ ರೆಹಮಾನ್ ಅವರನ್ನು ಅವಲಂಭಿಸಿದ್ದು, ಇವರ ಸ್ಪಿನ್ ಮೋಡಿ ನಡೆದರೆ ನ್ಯೂಜಿಲೆಂಡ್ ತಂಡವನ್ನು ಕಡಿಮೆ ಮೊತ್ತಕ್ಕೆ ನಿಯಂತ್ರಿಸಬಹುದು. ಅಷ್ಟೇ ಅಲ್ಲದೆ ಬ್ಯಾಟಿಂಗ್​ನಲ್ಲಿ ಝಝೈ, ನಜೀಬ್, ಶೆಹಝಾದ್ ಹಾಗೂ ನಬಿ ಎಂತಹ ಬೌಲರುಗಳನ್ನು ಎದುರಿಸುವ ಸಾಮರ್ಥ್ಯ ಹೊಂದಿರುವ ಆಟಗಾರರು. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ದ ನ್ಯೂಜಿಲೆಂಡ್​ಗೆ ಗೆಲುವು ಸುಲಭವಲ್ಲ ಎಂದೇ ಹೇಳಬಹುದು.

ಒಟ್ಟಿನಲ್ಲಿ ಇಲ್ಲಿ ನ್ಯೂಜಿಲೆಂಡ್ ತಂಡವೇ ಬಲಿಷ್ಠವಾಗಿದ್ದರೂ, ಯಾವುದೇ ಹಂತದಲ್ಲೂ ತಿರುಗಿ ಬೀಳುವ ಸಾಮರ್ಥ್ಯ ಅಫ್ಘಾನಿಸ್ತಾನ್ ತಂಡಕ್ಕಿದೆ. ಹೀಗಾಗಿ ಅಬುಧಾಬಿಯ ಶೇಖ್​ ಝಾಯೆದ್ ಸ್ಟೇಡಿಯಂನಲ್ಲಿ ಭಾನುವಾರ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇದನ್ನೂ ಓದಿ: ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: T20 World Cup 2021: ಸೆಹ್ವಾಗ್-ಗಂಭೀರ್ ದಾಖಲೆ ಮುರಿದ ಕೆಎಲ್ ರಾಹುಲ್-ರೋಹಿತ್ ಶರ್ಮಾ

(Afghanistan vs New Zealand Head to Head T20 Records)

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ