AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್ 8 ಹಂತಕ್ಕೆ ಕಾಲಿಟ್ಟ ಅಫ್ಘಾನ್; ಟೂರ್ನಿಯಿಂದಲೇ ಎಲಿಮಿನೇಟ್ ಆದ ನ್ಯೂಜಿಲೆಂಡ್

ಕೇನ್ ವಿಲಿಯಮ್ಸ್ ನೇತೃತ್ವದ ನ್ಯೂಜಿಲೆಂಡ್ ತಂಡ ಅಫ್ಘಾನಿಸ್ತಾನ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಸೋತಿವೆ. ಉಳಿದಿರುವ ಎರಡು ಪಂದ್ಯಗಳಲ್ಲಿ ಗೆಲುವು ಕಂಡರೂ ಯಾವುದೇ ಪ್ರಯೋಜನ ಇಲ್ಲ. ಹೀಗಾಗಿ, ನ್ಯೂಜಿಲೆಂಡ್ ತಂಡ ಟೂರ್ನಿಯಿಂದಲೇ ಔಟ್ ಆಗಿದೆ.

ಸೂಪರ್ 8 ಹಂತಕ್ಕೆ ಕಾಲಿಟ್ಟ ಅಫ್ಘಾನ್; ಟೂರ್ನಿಯಿಂದಲೇ ಎಲಿಮಿನೇಟ್ ಆದ ನ್ಯೂಜಿಲೆಂಡ್
ಸೂಪರ್ 8 ಹಂತಕ್ಕೆ ಕಾಲಿಟ್ಟ ಅಫ್ಘಾನ್; ಟೂರ್ನಿಯಿಂದಲೇ ಎಲಿಮಿನೇಟ್ ಆದ ನ್ಯೂಜಿಲೆಂಡ್
ರಾಜೇಶ್ ದುಗ್ಗುಮನೆ
|

Updated on: Jun 14, 2024 | 12:17 PM

Share

ಇಂದು (ಜೂನ್ 14) ನಡೆದ ಪಪುವಾ ನ್ಯೂಗಿನಿ (Papua New Guinea) ವಿರುದ್ಧದ ಪಂದ್ಯದಲ್ಲಿ ಗೆಲುವು ಕಾಣುವ ಮೂಲಕ ಅಪ್ಘಾನಿಸ್ತಾನ ತಂಡ ಟಿ20 ವಿಶ್ವಕಪ್​ನಲ್ಲಿ ‘ಸೂಪರ್ 8’ ಹಂತಕ್ಕೆ ಕಾಲಿಟ್ಟಿದೆ. ಇದೇ ವೇಳೆ ಟೂರ್ನಿಯಲ್ಲಿ ಎರಡು ಪಂದ್ಯ ಸೋತಿರುವ ನ್ಯೂಜಿಲೆಂಡ್​ ಎಲಿಮಿನೇಟ್ ಆಗಿದೆ. ಈ ಮೂಲಕ ಬಲಿಷ್ಠ ಎನಿಸಿಕೊಂಡ ತಂಡಗಳು ಟೂರ್ನಿಯಿಂದ ಔಟ್ ಆದರೆ, ಸಾಧಾರಾಣ ಎನಿಸಿಕೊಂಡಿದ್ದ ತಂಡಗಳು ಒಳ್ಳೆಯ ಪ್ರದರ್ಶನ ನೀಡುತ್ತಿವೆ.

ಪಪುವಾ ನ್ಯೂಗಿನಿ ತಂಡವು 95 ರನ್​ ಗಳಿಸಿತು. ಈ ಟಾರ್ಗೆಟ್ ಬೆನ್ನು ಹತ್ತಿದ ಅಫ್ಘಾನ್ ತಂಡ ಕೇವಲ 15.1 ಓವರ್​ಗೆ ರನ್​ ಚೇಸ್ ಮಾಡಿತು. ಈ ಮೂಲಕ +4.230 ರನ್​ರೇಟ್​ನೊಂದಿಗೆ ಈ ಟೀಂ ಸಿ ಗ್ರೂಪ್​ನಲ್ಲಿ ಟಾಪ್​ನಲ್ಲಿದೆ. ಈಗಾಗಲೇ ಕೇನ್ ವಿಲಿಯಮ್ಸ್ ನೇತೃತ್ವದ ನ್ಯೂಜಿಲೆಂಡ್ ತಂಡ ಅಫ್ಘಾನಿಸ್ತಾನ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಸೋತಿವೆ. ಉಳಿದಿರುವ ಎರಡು ಪಂದ್ಯಗಳಲ್ಲಿ ಗೆಲುವು ಕಂಡರೂ ಯಾವುದೇ ಪ್ರಯೋಜನ ಇಲ್ಲ. ಹೀಗಾಗಿ, ನ್ಯೂಜಿಲೆಂಡ್ ತಂಡ ಟೂರ್ನಿಯಿಂದಲೇ ಔಟ್ ಆಗಿದೆ.

2014ರಲ್ಲಿ ನ್ಯೂಜಿಲೆಂಡ್ ತಂಡ ಇದೇ ರೀತಿ ಟೂರ್ನಿಯಿಂದ ಹೊರ ಹೋಗಿತ್ತು. 10 ವರ್ಷಗಳ ಬಳಿಕ ಈಗ ಇತಿಹಾಸ ಮತ್ತೆ ಮರುಕಳಿಸಿದೆ. ಅಪ್ಘಾನಿಸ್ತಾನ ಸೂಪರ್​ 8ಗೆ ಕ್ವಾಲಿಫೈ ಆಗಿದೆ. ಈ ಮೂಲಕ ಸೂಪರ್ 8ನಲ್ಲಿ ಭಾರತ ತಂಡವನ್ನೂ ಎದುರಿಸಲಿದೆ. ಜೂನ್ 20ರಂದು ಅಪ್ಘಾನಿಸ್ತಾನ ಹಾಗೂ ಭಾರತ ಮುಖಾಮುಖಿ ಆಗಲಿವೆ.

ಇದನ್ನೂ ಓದಿ: ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯುತ್ತಾ ನ್ಯೂಜಿಲೆಂಡ್?

ಸದ್ಯ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿದ ಮೂರು ಪಂದ್ಯಗಳಲ್ಲಿ ಭಾರತ ಗೆದ್ದು ಬೀಗಿದೆ. ಸೂಪರ್ 8 ಭಾರತದ ಪಾಲಿಗೆ ಪ್ರಮುಖ ಎನಿಸಿಕೊಂಡಿದೆ. ಸೂಪರ್ 8ನಲ್ಲಿ ಗೆದ್ದವರು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ