Afghanistan: ಬಾಂಗ್ಲಾ ವಿರುದ್ಧ ಅಫ್ಘಾನ್​ಗೆ ಅಮೋಘ ಗೆಲುವು

Bangladesh vs Afghanistan: ಕೇವಲ 76 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಬಾಂಗ್ಲಾದೇಶ್ ತಂಡಕ್ಕೆ ಈ ಹಂತದಲ್ಲಿ ಮುಶ್ಫಿಕುರ್ ರಹೀಮ್ ಹಾಗೂ ಮೆಹದಿ ಹಸನ್ ಆಸರೆಯಾದರು.

Afghanistan: ಬಾಂಗ್ಲಾ ವಿರುದ್ಧ ಅಫ್ಘಾನ್​ಗೆ ಅಮೋಘ ಗೆಲುವು
Afghanistan
Follow us
| Updated By: ಝಾಹಿರ್ ಯೂಸುಫ್

Updated on: Jul 08, 2023 | 9:34 PM

Bangladesh vs Afghanistan: ಚಟ್ಟೊಗ್ರಾಮ್​ನಲ್ಲಿ ನಡೆದ ಆತಿಥೇಯ ಬಾಂಗ್ಲಾದೇಶ್ (Bangladesh) ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ (Afghanistan) ತಂಡವು ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಅಫ್ಘಾನ್ ತಂಡ 2-0 ಅಂತರದಿಂದ ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಅಫ್ಘಾನಿಸ್ತಾನ್ ತಂಡವು 17 ರನ್​ಗಳಿಂದ ಜಯ ಸಾಧಿಸಿತ್ತು. ಇನ್ನು 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ ತಂಡದ ಹಂಗಾಮಿ ನಾಯಕ ಲಿಟ್ಟನ್ ದಾಸ್ ಫೀಲ್ಡಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನಕ್ಕೆ ಆರಂಭಿಕರಾದ ರಹಮಾನುಲ್ಲಾ ಗುರ್ಬಾಝ್ ಹಾಗೂ ಇಬ್ರಾಹಿಂ ಝದ್ರಾನ್ ಭರ್ಜರಿ ಆರಂಭ ಒದಗಿಸಿದ್ದರು.

ಮೊದಲ ವಿಕೆಟ್​ಗೆ 256 ರನ್ ಪೇರಿಸಿದ ಈ ಜೋಡಿಯು ಅಫ್ಘಾನ್ ಪರ ಅತ್ಯಧಿಕ ರನ್ ಕಲೆಹಾಕಿದ ಆರಂಭಿಕ ಜೋಡಿ ಎಂಬ ದಾಖಲೆ ನಿರ್ಮಿಸಿದರು. ಇದರ ನಡುವೆ 100 ಎಸೆತಗಳಲ್ಲಿ ಗುರ್ಬಾಝ್ ಶತಕ ಪೂರೈಸಿದರು. ಇನ್ನು ಶತಕದ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಮುಂದಾದ ರಹಮಾನುಲ್ಲಾ ಗುರ್ಬಾಝ್ 125 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 145 ಬಾರಿಸಿ ಔಟಾದರು.

ಇನ್ನು ಇಬ್ರಾಹಿಂ ಝದ್ರಾನ್ 119 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 19 ಫೋರ್​ನೊಂದಿಗೆ 100 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಎರಡು ವಿಕೆಟ್​ಗಳ ಪತನದೊಂದಿಗೆ ಅಫ್ಘಾನಿಸ್ತಾನ್ ತಂಡವು ದಿಢೀರ್ ಕುಸಿತಕ್ಕೊಳಗಾಯಿತು. ಇದಾಗ್ಯೂ ಅಂತಿಮ ಹಂತದಲ್ಲಿ ಮೊಹಮ್ಮದ್ ನಬಿ 15 ಎಸೆತಗಳಲ್ಲಿ ಅಜೇಯ 25 ಬಾರಿಸಿದರು. ಇದರೊಂದಿಗೆ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಅಫ್ಘಾನಿಸ್ತಾನ್ ತಂಡವು 331 ರನ್ ಕಲೆಹಾಕಿತು.

332 ರನ್​ಗಳ ಬೃಹತ್ ಗುರಿ ಪಡೆದ ಬಾಂಗ್ಲಾದೇಶ್ ತಂಡಕ್ಕೆ ಎಡಗೈ ವೇಗಿ ಫಝಲ್ಹಕ್ ಫಾರೂಖಿ ಆರಂಭಿಕ ಆಘಾತ ನೀಡಿದರು. ಒಂದೆಡೆ ಫಝಲ್ಹಕ್, ಲಿಟ್ಟನ್ ದಾಸ್ (13) ಹಾಗೂ ಮೊಹಮ್ಮದ್ ನಯೀಮ್ (9) ವಿಕೆಟ್ ಪಡೆದರೆ, ಮತ್ತೊಂದೆಡೆ ಮುಜೀಬ್​ ಉರ್ ರೆಹಮಾನ್, ನಜ್ಮುಲ್ ಹೊಸೈನ್ ಶಾಂಟೋ (1) ವಿಕೆಟ್ ಕಬಳಿಸಿದರು.

ಆ ಬಳಿಕ ದಾಳಿಗಿಳಿದ ರಶೀದ್ ಖಾನ್ ಅವರ ಗೂಗ್ಲಿಗೆ ತೌಹಿದ್ ಹೃದಯ್ (16) ಕ್ಲೀನ್ ಬೌಲ್ಡ್ ಆದರು. ಇನ್ನು 25 ರನ್​ಗಳಿಸಿ ತಂಡಕ್ಕೆ ಆಸರೆಯಾಗಿದ್ದ ಶಕೀಬ್ ಅಲ್ ಹಸನ್, ಮೊಹಮ್ಮದ್ ನಬಿಯ ಸ್ಪಿನ್​ಗೆ ಎಲ್​ಬಿಡಬ್ಲ್ಯೂ ಆದರು. ಇನ್ನು ರಶೀದ್ ಖಾನ್, ಆಫೀಸ್ ಹೊಸೈನ್ (0) ​ಗೆ ಪೆವಿಲಿಯನ್ ಹಾದಿ ತೋರಿಸಿದರು.

ಕೇವಲ 76 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಬಾಂಗ್ಲಾದೇಶ್ ತಂಡಕ್ಕೆ ಈ ಹಂತದಲ್ಲಿ ಮುಶ್ಫಿಕುರ್ ರಹೀಮ್ ಹಾಗೂ ಮೆಹದಿ ಹಸನ್ ಆಸರೆಯಾದರು. ಅಲ್ಲದೆ 7ನೇ ವಿಕೆಟ್​ಗೆ 87 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ದಾಳಿಗಿಳಿದ ಮುಜೀಬ್, ಮೆಹದಿ ಹಸನ್ (25) ವಿಕೆಟ್ ಕಬಳಿಸಿ ಅಮೂಲ್ಯ ಯಶಸ್ಸು ತಂದುಕೊಟ್ಟರು.

ಇನ್ನು ಏಕಾಂಗಿ ಹೋರಾಟ ನಡೆಸಿದ್ದ ಮುಶ್ಫಿಕುರ್ ರಹೀಮ್ 69 ರನ್​ಗಳಿಸಿ ಫಝಲ್ಹಕ್ ಫಾರೂಕಿಗೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಮತ್ತೆ ಮೇಲುಗೈ ಸಾಧಿಸಿದ ಅಫ್ಘಾನ್ ಬೌಲರ್​ಗಳು ಬಾಂಗ್ಲಾದೇಶ್ ತಂಡವನ್ನು 43.2 ಓವರ್​ಗಳಲ್ಲಿ 189 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. 142 ರನ್​ಗಳಿಂದ ಅಮೋಘ ಗೆಲುವು ದಾಖಲಿಸಿದ ಅಫ್ಘಾನಿಸ್ತಾನ್ ತಂಡವು ಕೊನೆಯ ಪಂದ್ಯ ಉಳಿದಿರುವಂತೆಯೇ 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಇನ್ನು ಈ ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸಿ ಮಿಂಚಿದ ರಹಮಾನುಲ್ಲಾ ಗುರ್ಬಾಝ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಬಾಂಗ್ಲಾದೇಶ್ ಪ್ಲೇಯಿಂಗ್ 11: ಲಿಟ್ಟನ್ ದಾಸ್ (ಸಿ) , ಮೊಹಮ್ಮದ್ ನಯೀಮ್ , ನಜ್ಮುಲ್ ಹೊಸೈನ್ ಶಾಂಟೋ , ಶಾಕಿಬ್ ಅಲ್ ಹಸನ್ , ತೌಹಿದ್ ಹೃದಯ್ , ಮುಶ್ಫಿಕುರ್ ರಹೀಮ್ (ವಿಕೆಟ್ ಕೀಪರ್) , ಅಫೀಫ್ ಹೊಸೈನ್ , ಮೆಹದಿ ಹಸನ್ ಮಿರಾಜ್ , ಹಸನ್ ಮಹ್ಮದ್ , ಇಬಾದತ್ ಹೊಸೈನ್ , ಮುಸ್ತಾಫ್ ಹುಸೇನ್.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!

ಅಫ್ಘಾನಿಸ್ತಾನ್ ಪ್ಲೇಯಿಂಗ್ 11: ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್) , ಇಬ್ರಾಹಿಂ ಝದ್ರಾನ್ , ರಹಮತ್ ಶಾ , ಹಶ್ಮತುಲ್ಲಾ ಶಾಹಿದಿ (ನಾಯಕ) , ಮೊಹಮ್ಮದ್ ನಬಿ , ನಜೀಬುಲ್ಲಾ ಝದ್ರಾನ್ , ರಶೀದ್ ಖಾನ್ , ಫಝಲ್ಹಕ್ ಫಾರೂಕಿ , ಮುಜೀಬ್ ಉರ್ ರೆಹಮಾನ್ , ಅಜ್ಮತುಲ್ಲಾ ಒಮರ್ಝಾಯ್.

ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!