AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shoaib Akhtar: ಭಾರತೀಯ ಆಟಗಾರರೇ ನಮನ್ನ ಅಪ್ಪಿ-ಪಪ್ಪಿ ಕೊಡ್ತಾರೆ, ನಿಮ್ಮ ವರ್ತನೆ?

India vs Pakistan: ಭಾರತ-ಪಾಕ್ ಆಟಗಾರರ ನಡುವಿನ ಸ್ನೇಹವನ್ನು ಉಲ್ಲೇಖಿಸಿ ಅಫ್ಘಾನಿಸ್ತಾನ್ ತಂಡವನ್ನು ತರಾಟೆಗೆ ತೆಗೆದುಕೊಂಡಿರುವ ಅಖ್ತರ್ ಆಟಗಾರರ ನಡೆಯನ್ನು ಪ್ರಶ್ನಿಸಿದ್ದಾರೆ.

Shoaib Akhtar: ಭಾರತೀಯ ಆಟಗಾರರೇ ನಮನ್ನ ಅಪ್ಪಿ-ಪಪ್ಪಿ ಕೊಡ್ತಾರೆ, ನಿಮ್ಮ ವರ್ತನೆ?
India vs Pakistan-Afghanistan
TV9 Web
| Edited By: |

Updated on: Sep 08, 2022 | 5:32 PM

Share

ಏಷ್ಯಾಕಪ್​ನ ಮದಗಜಗಳ ಕಾಳಗ ಎಂದು ಬಿಂಬಿತವಾಗಿದ್ದ ಭಾರತ-ಪಾಕಿಸ್ತಾನ್ (India vs Pakistan) ನಡುವಣ ಪಂದ್ಯಕ್ಕಿಂತ ಈ ಬಾರಿ ಹೆಚ್ಚು ಸದ್ದು ಮಾಡಿದ್ದು ಬೇರೆ ತಂಡಗಳು ಎಂಬುದು ವಿಶೇಷ. ಮೊದಲ ಸುತ್ತಿನಲ್ಲಿ ಬಾಂಗ್ಲಾದೇಶ್ ಹಾಗೂ ಶ್ರೀಲಂಕಾ ನಡುವಣ ಪೈಪೋಟಿ ತಾರಕ್ಕೇರಿದರೆ, ಸೂಪರ್-4 ಹಂತದಲ್ಲಿ ಅಫ್ಘಾನಿಸ್ತಾನ್-ಪಾಕಿಸ್ತಾನ್ ಜಿದ್ದಾಜಿದ್ದಿನ ಪೈಪೋಟಿ ನಡೆಸಿತ್ತು. ಆದರೆ ಈ ವೇಳೆ ಆಟಗಾರರು ಕ್ರೀಡಾ ಸ್ಪೂರ್ತಿಯನ್ನೇ ಮರೆತಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಪಾಕಿಸ್ತಾನ್ ಆಟಗಾರ ಆಸಿಫ್ ಅಲಿ ಹಾಗೂ ಅಫ್ಘಾನ್ ವೇಗಿ ಫರೀದ್ ಅಹ್ಮದ್ ನಡುವಣ ಜಿದ್ದಾಜಿದ್ದಿ ಕೈ ಮಿಲಾಯಿಸುವ ತನಕ ಹೋಗಿದ್ದು ವಿಪರ್ಯಾಸ.

ಒಂದೆಡೆ ಫರೀದ್ ಕೆಣಕಿದ್ದರಿಂದ ಆಸಿಫ್ ಬ್ಯಾಟ್​ನಿಂದ ಹೊಡೆಯಲು ಮುಂದಾಗಿದ್ದರು ಎಂಬ ವಾದವಾದರೆ, ಇನ್ನೊಂದೆಡೆ ಆಸಿಫ್ ಔಟಾದ ಸಿಟ್ಟಿನಲ್ಲಿ ಬೌಲರ್​ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಆರೋಪಗಳು ಕೂಡ ಕೇಳಿ ಬರುತ್ತಿವೆ. ಅದೇನಿದ್ದರೂ, ಇದೀಗ ಈ ಘಟನೆಯ ಬಳಿಕ ಪಾಕಿಸ್ತಾನದ ಮಾಜಿ ಆಟಗಾರ ಶೊಯೇಬ್ ಅಖ್ತರ್ ನೀಡಿರುವ ಹೇಳಿಕೆಯೊಂದು ಎಲ್ಲರ ಗಮನ ಸೆಳೆದಿದೆ.

ಪಾಕಿಸ್ತಾನದ ಜೊತೆ ಅಫ್ಘಾನಿಸ್ತಾನ್ ಆಟಗಾರರ ವರ್ತನೆಯ ಬಗ್ಗೆ ನಿರಾಶೆ ವ್ಯಕ್ತಪಡಿಸಿರುವ ಅಖ್ತರ್, ಫರೀದ್ ಮಾಡಿದ ತಪ್ಪಿನಿಂದಾಗಿ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಪ್ರತಿ ಬಾರಿಯು ಪಾಕಿಸ್ತಾನ್-ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾದಾಗ, ಅಫ್ಘಾನ್ ಆಟಗಾರರ ನಡವಳಿಕೆಯು ಸರಿಯಾಗಿರಲ್ಲ ಎಂದು ಶೊಯೇಬ್ ಅಖ್ತರ್ ಟೀಕಿಸಿದ್ದಾರೆ. ಈ ಟೀಕೆಗಳ ನಡುವೆ ರಾವಲ್ಪಿಂಡಿ ಎಕ್ಸ್​ಪ್ರೆಸ್ ಟೀಮ್ ಇಂಡಿಯಾ ಆಟಗಾರರನ್ನು ಸಹ ಉಲ್ಲೇಖಿಸಿರುವುದು ವಿಶೇಷ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಸಾಂಪ್ರದಾಯಿಕ ಎದುರಾಳಿಗಳಾಗಿ ಕಣಕ್ಕಿಳಿಯುತ್ತಿರುವ ಭಾರತ-ಪಾಕಿಸ್ತಾನ್ ನಡುವಣ ಕಾದಾಟವನ್ನೇ ನಾವು ವೈಯಕ್ತಿಕಗೊಳಿಸುವುದಿಲ್ಲ. ನಾವು ಅವರೊಂದಿಗೆ ತುಂಬಾ ಚೆನ್ನಾಗಿ ವರ್ತಿಸುತ್ತೇವೆ. ಭಾರತೀಯ ಕ್ರಿಕೆಟಿಗರು ನಮ್ಮ ಆಟಗಾರರನ್ನು ಅಪ್ಪಿಕೊಳ್ಳುತ್ತಾರೆ, ಮುತ್ತಿಕ್ಕುತ್ತಾರೆ. ಅದು ಸೋಲಿರಲಿ, ಗೆಲುವಿರಲಿ. ವೈಯುಕ್ತಿಕವಾಗಿ ತೆಗೆದುಕೊಳ್ಳಬಾರದು ಎಂದು ಅಖ್ತರ್ ಹೇಳಿದ್ದಾರೆ.

ಅಷ್ಟೇ ಅಲ್ಲದೆ ಭಾರತ-ಪಾಕ್ ಆಟಗಾರರ ನಡುವಿನ ಸ್ನೇಹವನ್ನು ಉಲ್ಲೇಖಿಸಿ ಅಫ್ಘಾನಿಸ್ತಾನ್ ತಂಡವನ್ನು ತರಾಟೆಗೆ ತೆಗೆದುಕೊಂಡಿರುವ ಅಖ್ತರ್, ಈಗ ನೀವೆಲ್ಲಿದ್ದೀರಿ ಎಂದು ಯೋಚಿಸಿ. ನಾವು ನಿಮ್ಮನ್ನು ನಮ್ಮ ಸಹೋದರರು ಎಂದು ಪರಿಗಣಿಸುತ್ತೇವೆ. ನೀವು ಸಹ ನಮ್ಮ ನೆರೆಯ ರಾಷ್ಟ್ರದವರು. ನಾವು ಪ್ರೀತಿಸುತ್ತೇವೆ ಮತ್ತು ಕಾಳಜಿ ವಹಿಸುತ್ತೇವೆ. ಆದರೆ ಮೈದಾನದಲ್ಲಿ ನೀವು ತೋರಿಸಿದ್ದು ನಿರ್ಲಜ್ಜತನ. ಇದು ಸ್ವೀಕಾರಾರ್ಹವಲ್ಲ ಎಂದು ಶೊಯೇಬ್ ಅಖ್ತರ್ ಹೇಳಿದ್ದಾರೆ.

ಮತ್ತೊಂದೆಡೆ ಅಫ್ಘಾನಿಸ್ತಾನ್ ಹಾಗೂ ಪಾಕಿಸ್ತಾನ್ ಅಭಿಮಾನಿಗಳು ಶಾರ್ಜಾ ಸ್ಟೇಡಿಯಂನಲ್ಲಿ ಹೊಡೆದಾಡಿಕೊಂಡ ಘಟನೆ ಕೂಡ ನಡೆದಿದೆ. ತಮ್ಮ ತಂಡ ಗೆಲ್ಲುತ್ತಿದ್ದಂತೆ ಅಫ್ಘಾನಿಸ್ತಾನ್ ಅಭಿಮಾನಿಗಳನ್ನು ಪಾಕ್ ಫ್ಯಾನ್ಸ್​ ಹೀಯಾಳಿಸಿದ್ದರು. ಇದರಿಂದ ರೊಚ್ಚಿಗೆದ್ದ ಅಫ್ಘಾನಿಸ್ತಾನ್ ಅಭಿಮಾನಿಗಳು ಸ್ಟೇಡಿಯಂನಲ್ಲೇ ಪಾಕಿಸ್ತಾನ್ ಫ್ಯಾನ್ಸ್​ಗಳ ಮೇಲೆ ಹಲ್ಲೆ ಮಾಡಿದ್ದಾರೆ. ಇದರ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​