AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ 2022 ಪಾಯಿಂಟ್ ಟೇಬಲ್​ನಲ್ಲಿ ದೊಡ್ಡ ಬದಲಾವಣೆ: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಕೈಯಲ್ಲಿದೆ?

Updated points table IPL 2022: 15ನೇ ಆವೃತ್ತಿಯ ಐಪಿಎಲ್ ಆರಂಭವಾಗಿ ಒಂದು ವಾರ ಕಳೆದಿದ್ದು ಟೂರ್ನಿ ರೋಚಕತೆ ಪಡೆಯುತ್ತಿದೆ. ಹಾಗಾದ್ರೆ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

IPL 2022: ಐಪಿಎಲ್ 2022 ಪಾಯಿಂಟ್ ಟೇಬಲ್​ನಲ್ಲಿ ದೊಡ್ಡ ಬದಲಾವಣೆ: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಕೈಯಲ್ಲಿದೆ?
IPL 2022
TV9 Web
| Updated By: Vinay Bhat|

Updated on: Apr 03, 2022 | 10:47 AM

Share

15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ಆರಂಭವಾಗಿ ಒಂದು ವಾರ ಕಳೆದಿದ್ದು ಟೂರ್ನಿ ರೋಚಕತೆ ಪಡೆಯುತ್ತಿದೆ. ದುರ್ಬಲ ಅಂದುಕೊಂಡಿದ್ದ ತಂಡವೆಲ್ಲ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಗೆಲುವಿಗಾಗಿ ಹಾತೊರೆಯುತ್ತಿದೆ. ಸತತ ಎರಡು ಸೋಲಿನ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ಮತ್ತೊಂದು ಅಗ್ನಿ ಪರೀಕ್ಷೆಗೆ ಸಜ್ಜಾಗಿದೆ. ಎರಡು ಹೊಸ ತಂಡಗಳಾದ ಲಖನೌ ಸೂಪರ್ ಜೇಂಟ್ಸ್ ಮತ್ತು ಗುಜರಾತ್ ಟೈಟನ್ಸ್ ಟೀಮ್ ಕೂಡ ನಿರೀಕ್ಷೆಗೆ ತಕ್ಕ ಆಟವಾಡುತ್ತಿದೆ. ಲೀಗ್ ಪಂದ್ಯಗಳು ಮುಕ್ತಾಯಗೊಂಡ ಬಳಿಕ ಪಾಯಿಂಟ್ ಪಟ್ಟಿಯಲ್ಲಿರುವ ಮೊದಲ ನಾಲ್ಕು ತಂಡಗಳು ಟೂರ್ನಿಯ ಪ್ಲೇ-ಆಫ್‌ನಲ್ಲಿ ಆಡುವ ಅವಕಾಶವನ್ನು ಪಡೆಯುತ್ತವೆ. ಅದರ ನಂತರ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯ ಇರುತ್ತದೆ. ವಿಜೇತ ತಂಡವು ಪ್ರತಿ ಪಂದ್ಯದಲ್ಲಿ 2 ಅಂಕಗಳನ್ನು ಪಡೆಯುತ್ತದೆ. ಇದರ ಜೊತೆಗೆ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಪಾಯಿಂಟ್ ಟೇಬಲ್:

  • ಎರಡನೇ ಸ್ಥಾನದಲ್ಲಿದ್ದ ಸಂಸಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಅಮೋಘ ಗೆಲುವಿನ ಬಳಿಕ ಇದೀಗ ನಂಬರ್ ಒನ್ ಸ್ಥಾನಕ್ಕೇರಿದೆ. ಆಡಿದ ಎರಡು ಪಂದ್ಯಗಳ ಪೈಕಿ ಎರಡರಲ್ಲೂ ಗೆಲುವು ಸಾಧಿಸಿ ಒಟ್ಟು 4 ಅಂಕದೊಂದಿಗೆ +2.100 ರನ್​​ರೇಟ್​ನೊಂದಿಗೆ ಟಾಪ್​ನಲ್ಲಿದೆ.
  • ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎರಡನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಗೆಲುವು, ಒಂದರಲ್ಲಿ ಸೋಲು ಕಂಡು ಒಟ್ಟು 4 ಅಂಕದೊಂದಿಗೆ +0.843 ರನ್​​ರೇಟ್​ನೊಂದಿಗೆ ಟಾಪ್​ನಲ್ಲಿದೆ.
  • ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಪಾಯಿಂಟ್ ಪಟ್ಟಿಯಲ್ಲಿ ಮೇಲಕ್ಕೇರಿ ನಾಲ್ಕನೇ ಸ್ಥಾನದಲ್ಲಿದೆ. ಆಡಿದ ಎರಡು ಪಂದ್ಯದಲ್ಲಿ ಎರಡರಲ್ಲೂ ಗೆದ್ದು ಬೀಗಿದೆ. ಗುಜರಾತ್ ನಿವ್ವಳ ರನ್ ರೇಟ್ +0.495.
  • ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಲೀಗ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ದೆಹಲಿಯ ನಿವ್ವಳ ರನ್ ರೇಟ್ +0.65 ಆಗಿದೆ.
  • ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ಲೀಗ್ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಲಖನೌದ ನಿವ್ವಳ ರನ್ ರೇಟ್ -0.011.
  • ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರನೇ ಸ್ಥಾನದಲ್ಲಿದೆ. ಎರಡು ಅಂಕದೊಂದಿಗೆ RCB ನಿವ್ವಳ ರನ್ ರೇಟ್ -0.048.
  • ಕೆಕೆಆರ್ ವಿರುದ್ಧದ ಸೋಲಿನ ಬಳಿಕ ಮೂರನೇ ಸ್ಥಾನದಲ್ಲಿದ್ದ ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಏಳನೇ ಸ್ಥಾನಕ್ಕೆ ಕುಸಿದಿದೆ. ಪಂಜಾಬ್ ನಿವ್ವಳ ರನ್ ರೇಟ್ -1.183 ಆಗಿದೆ.
  • ಎಂಟನೇ ಸ್ಥಾನದಲ್ಲಿ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಇದೆ. ಆಡಿದ ಎರಡೂ ಪಂದ್ಯಗಳಲ್ಲಿ ಸೋಲುಂಡಿರುವ CSK ನಿವ್ವಳ ರನ್ ರೇಟ್ -0.528.
  • ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ ಎರಡೂ ಪಂದ್ಯದಲ್ಲಿ ಸೋಲುಂಡಿದೆ. ಮುಂಬೈ ನಿವ್ವಳ ರನ್ ರೇಟ್ -1.029.
  • ಕೆನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ಸದ್ಯಕ್ಕೆ ಲೀಗ್ ಟೇಬಲ್‌ನಲ್ಲಿ ಕೊನೆಯ ಸ್ಥಾನದಲ್ಲಿದೆ. ಹೈದರಾಬಾದ್ ನಿವ್ವಳ ರನ್ ರೇಟ್ – 3.050.

ಆರೆಂಜ್ ಕ್ಯಾಪ್:

ಆಡಿದ ಎರಡೂ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ತೋರಿರುವ ಮುಂಬೈ ಇಂಡಿಯನ್ಸ್ ಬ್ಯಾಟರ್ ಇಶಾನ್ ಕಿಶನ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಒಟ್ಟು 135 ರನ್ ಸಿಡಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಆಕರ್ಷಕ ಶತಕ ಸಿಡಿಸಿದ ಜೋಸ್ ಬಟ್ಲರ್ ಇದ್ದು ಇವರು ಕೂಡ 2 ಪಂದ್ಯಗಳಿಂದ 135 ರನ್ ಕಲೆಹಾಕಿದ್ದಾರೆ. ಆಂಡ್ರೆ ರಸೆಲ್ ಒಟ್ಟು 95 ರನ್ ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ 93 ರನ್ ಸಿಡಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಐದನೇ ಸ್ಥಾನದಲ್ಲಿ ಸಂಜು ಸ್ಯಾಮ್ಸನ್ (85 ರನ್) ಇದ್ದಾರೆ.

ಪರ್ಪಲ್ ಕ್ಯಾಪ್:

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಉಮೇಶ್ ಯಾದವ್ ಅಗ್ರಸ್ಥಾನದಲ್ಲಿ ಭದ್ರವಾಗಿದ್ದಾರೆ. ಆಡಿದ ಮೂರು ಪಂದ್ಯಗಳಲ್ಲಿ ಇವರು ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 8 ವಿಕೆಟ್ ಕಬಳಿಸಿದ್ದಾರೆ. ಎರಡನೇ ಸ್ಥಾನದಲ್ಲಿ ರಾಜಸ್ಥಾನ್ ತಂಡದ ಯುಜ್ವೇಂದ್ರ ಚಹಲ್ ಇದ್ದು 5 ವಿಕೆಟ್ ಕಬಳಿಸಿದ್ದಾರೆ. ಇವರ ಜೊತೆಗೆ ಮೊಹಮ್ಮದ್ ಶಮಿ, ಕೆಕೆಆರ್ ತಂಡದ ಟಿಮ್ ಸೌಥೀ, ಆರ್‌ಸಿಬಿ ತಂಡದ ಪ್ರಮುಖ ಆಲ್‌ರೌಂಡರ್ ವನಿಂದು ಹಸರಂಗ ಕೂಡ 5 ವಿಕೆಟ್ ಕಿತ್ತು ಕ್ರಮವಾಗಿ ನಂತರದ ಸ್ಥಾನದಲ್ಲಿದ್ದಾರೆ.

Rishabh Pant: ಸೋಲಿಗೆ ಅಚ್ಚರಿಯ ಕಾರಣ ತಿಳಿಸಿದ ರಿಷಭ್ ಪಂತ್: ಪಂದ್ಯದ ಬಳಿಕ ಏನಂದ್ರು ಕೇಳಿ

CSK vs PBKS: ಐಪಿಎಲ್​ನಲ್ಲಿಂದು ಚೆನ್ನೈ–ಪಂಜಾಬ್ ಮುಖಾಮುಖಿ: ಹ್ಯಾಟ್ರಿಕ್ ಸೋಲಿಂದ ಪಾರಾಗುತ್ತಾ ಸಿಎಸ್​​ಕೆ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?