AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಕ್ರೌರ್ಯ; ಪಾಕ್ ಪ್ರವಾಸಕ್ಕೆ ಹಿಂದೇಟು ಹಾಕುತ್ತಿದ್ದಾರೆ ನ್ಯೂಜಿಲೆಂಡ್, ಇಂಗ್ಲೆಂಡ್ ಕ್ರಿಕೆಟಿಗರು

ಅಫ್ಘಾನಿಸ್ತಾನದ ಪರಿಸ್ಥಿತಿಯಿಂದಾಗಿ, ಕೆಲವು ನ್ಯೂಜಿಲ್ಯಾಂಡ್ ಕ್ರಿಕೆಟಿಗರು ಪಾಕಿಸ್ತಾನ ಪ್ರವಾಸಕ್ಕೆ ಹಿಂದೇಟು ಹಾಕಿರುವುದಾಗಿ ವರದಿಯಾಗಿದೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಕ್ರೌರ್ಯ; ಪಾಕ್ ಪ್ರವಾಸಕ್ಕೆ ಹಿಂದೇಟು ಹಾಕುತ್ತಿದ್ದಾರೆ ನ್ಯೂಜಿಲೆಂಡ್, ಇಂಗ್ಲೆಂಡ್ ಕ್ರಿಕೆಟಿಗರು
ಪಾಕಿಸ್ತಾನ ಕ್ರಿಕೆಟ್ ಮಂಡಳಿ
TV9 Web
| Edited By: |

Updated on: Aug 21, 2021 | 5:44 PM

Share

ತಾಲಿಬಾನ್ ಅಫ್ಘಾನಿಸ್ತಾನದ ಮೇಲೆ ಹಿಡಿತ ಸಾಧಿಸಿದ ನಂತರ ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ವಿಶ್ವದ ಗಮನ ಅಫ್ಘಾನಿಸ್ತಾನದ ಮೇಲೆ ಕೇಂದ್ರೀಕೃತವಾಗಿದ್ದರೂ, ಇದೆಲ್ಲವೂ ಅಫ್ಘಾನಿಸ್ತಾನದ ನೆರೆಯ ಪಾಕಿಸ್ತಾನದ ಮೇಲೂ ಪರಿಣಾಮ ಬೀರಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಇವೆಲ್ಲವುಗಳಿಂದ ತೊಂದರೆಗೆ ಒಳಗಾಗಿದೆ ಮತ್ತು ಮುಂಬರುವ ಪ್ರಮುಖ ತಂಡಗಳಾದ ನ್ಯೂಜಿಲ್ಯಾಂಡ್ ಮತ್ತು ಇಂಗ್ಲೆಂಡ್ ಪಾಕಿಸ್ತಾನಕ್ಕೆ ಪ್ರವಾಸವನ್ನು ಪ್ರಶ್ನಿಸಲಾಗಿದೆ. ಅಫ್ಘಾನಿಸ್ತಾನದ ಪರಿಸ್ಥಿತಿಯಿಂದಾಗಿ, ಕೆಲವು ನ್ಯೂಜಿಲ್ಯಾಂಡ್ ಕ್ರಿಕೆಟಿಗರು ಪಾಕಿಸ್ತಾನ ಪ್ರವಾಸಕ್ಕೆ ಹಿಂದೇಟು ಹಾಕಿರುವುದಾಗಿ ವರದಿಯಾಗಿದೆ. ಏತನ್ಮಧ್ಯೆ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಅಧ್ಯಕ್ಷ ಎಹ್ಸಾನ್ ಮಣಿ ಅವರು ನ್ಯೂಜಿಲ್ಯಾಂಡ್ ಮತ್ತು ಇಂಗ್ಲೆಂಡ್ ತಂಡಗಳು ಪಾಕಿಸ್ತಾನ ಪ್ರವಾಸಕ್ಕೆ ಖಂಡಿತವಾಗಿಯೂ ಬರುತ್ತವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಎಹ್ಸಾನ್ ಮಣಿ, ನ್ಯೂಜಿಲ್ಯಾಂಡ್ ಸೆಪ್ಟೆಂಬರ್‌ನಲ್ಲಿ ಮತ್ತು ಅಕ್ಟೋಬರ್‌ನಲ್ಲಿ ಇಂಗ್ಲೆಂಡ್ ತಂಡಗಳು ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿವೆ. ಪಾಕಿಸ್ತಾನವು ಎರಡೂ ಪ್ರವಾಸಗಳಿಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತದೆ ಮತ್ತು ಈ ಬಾರಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದಿದ್ದಾರೆ.

ಪಾಕಿಸ್ತಾನದ ನ್ಯೂಜಿಲೆಂಡ್ ಪ್ರವಾಸ ನ್ಯೂಜಿಲೆಂಡ್ ತಂಡ ಸೆಪ್ಟೆಂಬರ್ 11 ರಂದು ಪಾಕಿಸ್ತಾನಕ್ಕೆ ಆಗಮಿಸಲಿದ್ದು, ಈ ಪ್ರವಾಸದಲ್ಲಿ 3 ಏಕದಿನ ಪಂದ್ಯಗಳು ಮತ್ತು 5 ಟಿ 20 ಪಂದ್ಯಗಳು ನಡೆಯಲಿವೆ. ಈ ಎಲ್ಲಾ ಪಂದ್ಯಗಳು ರಾವಲ್ಪಿಂಡಿ ಮತ್ತು ಲಾಹೋರ್ ಮೈದಾನದಲ್ಲಿ ಅಕ್ಟೋಬರ್ 3 ರವರೆಗೆ ನಡೆಯಲಿವೆ. 19 ವರ್ಷಗಳ ನಂತರ ಮೊದಲ ಬಾರಿಗೆ ನ್ಯೂಜಿಲೆಂಡ್ ತಂಡ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದೆ.

ನ್ಯೂಜಿಲೆಂಡ್ ನಂತರ, ಇಂಗ್ಲೆಂಡ್ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದೆ ನ್ಯೂಜಿಲೆಂಡ್ ಪ್ರವಾಸದ ನಂತರ ಇಂಗ್ಲೆಂಡ್ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ಆಗಮಿಸಲಿದೆ. ಇಂಗ್ಲೆಂಡ್ ನ ಪುರುಷರ ಮತ್ತು ಮಹಿಳೆಯರ ತಂಡಗಳು ಈ ಬಾರಿ ಪ್ರವಾಸದಲ್ಲಿರುತ್ತವೆ. ಈ ಬಾರಿ ಪುರುಷರ ತಂಡ 2 ಟಿ 20 ಸರಣಿಯನ್ನು ಆಡಲಿದೆ. 2005 ರ ನಂತರ ಇದು ಇಂಗ್ಲೆಂಡ್‌ನ ಮೊದಲ ಪಾಕಿಸ್ತಾನದ ಪ್ರವಾಸವಾಗಿದೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ