AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಬಾಲ್​ಗೆ 83 ರನ್ ಬಾರಿಸಿದ ದಿನೇಶ್ ಕಾರ್ತಿಕ್​ಗೆ ವಿಶ್ವಕಪ್​ನಲ್ಲಿ ಸ್ಥಾನ? ಕೋಚ್ ಹೇಳಿದ್ದಿಷ್ಟು

ಈ ಮೊದಲಿನ ಟಿ20 ವಿಶ್ವಕಪ್​ನಲ್ಲಿ ದಿನೇಶ್ ಕಾರ್ತಿಕ್ ಆಟ ಆಡಿದ್ದರು. ಆ ಬಳಿಕ ಅವರು ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿಲ್ಲ. ಈಗ ಅವರಿಗೆ ಮತ್ತೊಮ್ಮೆ ಸ್ಥಾನ ಸಿಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರ್​ಸಿಬಿ ಕೋಚ್ ಆ್ಯಂಡಿ ಫ್ಲವರ್ ಕೂಡ ದಿನೇಶ್ ಆಟವನ್ನು ಮೆಚ್ಚಿಕೊಂಡಿದ್ದಾರೆ

35 ಬಾಲ್​ಗೆ 83 ರನ್ ಬಾರಿಸಿದ ದಿನೇಶ್ ಕಾರ್ತಿಕ್​ಗೆ ವಿಶ್ವಕಪ್​ನಲ್ಲಿ ಸ್ಥಾನ? ಕೋಚ್ ಹೇಳಿದ್ದಿಷ್ಟು
ದಿನೇಶ್ ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on: Apr 16, 2024 | 10:39 AM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ರನ್​ಗಳ ಮಹಾಪೂರವೇ ಹರಿದುಬಂತು. 288 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನು ಹತ್ತಿದ ಆರ್​ಸಿಬಿಗೆ ದಿನೇಶ್ ಕಾರ್ತಿಕ್ ಬೆನ್ನೆಲುಬಾಗಿ ನಿಂತರು. 35 ಬಾಲ್​ಗಳಿಗೆ ಅವರು 83 ರನ್ ಚಚ್ಚಿದರು. ಮಧ್ಯ ಕ್ರಮಾಂಕದ ಆಟಗಾರನಾಗಿ ಅವರು ಈ ರೀತಿಯ ಪರ್ಫಾರ್ಮೆನ್ಸ್ ನೀಡಿರುವುದರಿಂದ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅವರಿಗೆ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಸಿಗಬಹುದು ಎಂದು ಊಹಿಸಲಾಗುತ್ತಿದೆ. ಈ ವಿಚಾರ ಕೇಳಿ ಅವರ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಈ ಮೊದಲಿನ ಟಿ20 ವಿಶ್ವಕಪ್​ನಲ್ಲಿ ದಿನೇಶ್ ಕಾರ್ತಿಕ್ ಆಟ ಆಡಿದ್ದರು. ಆ ಬಳಿಕ ಅವರು ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿಲ್ಲ. ಈಗ ಅವರಿಗೆ ಮತ್ತೊಮ್ಮೆ ಸ್ಥಾನ ಸಿಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರ್​ಸಿಬಿ ಕೋಚ್ ಆ್ಯಂಡಿ ಫ್ಲವರ್ ಕೂಡ ದಿನೇಶ್ ಆಟವನ್ನು ಮೆಚ್ಚಿಕೊಂಡಿದ್ದಾರೆ. ‘ಟಿ20 ವಿಶ್ವಕಪ್​ನಲ್ಲಿ ಸ್ಥಾನ ನೀಡಲೇಬೇಕು ಎನ್ನುವ ರೀತಿಯಲ್ಲಿ ಆಡುತ್ತಿದ್ದೀರಿ. ನೀವು ದಿನ ಕಳೆದಂತೆ ಉತ್ತಮವಾಗುತ್ತಿದ್ದೀರಿ’ ಎಂದಿದ್ದಾರೆ ಅವರು. ಇದನ್ನೂ ಓದಿ: ವಿಶ್ವಕಪ್​ನಲ್ಲಿ ಸ್ಥಾನಪಡೆಯಲು ದಿನೇಶ್ ಕಾರ್ತಿಕ್ ಸ್ಫೋಟಕ ಆಟ? ಹಿಂಟ್ ಕೊಟ್ಟ ರೋಹಿತ್

ಬೆಂಗಳೂರು ಸ್ಟೇಡಿಯಂನಲ್ಲಿ ಎಲ್ಲರೂ ಡಿಕೆ ಡಿಕೆ ಎನ್ನುವ ಘೋಷಣೆ ಕೂಗಿದ್ದರು. ಕಾರ್ತಿಕ್ ಅವರು 5 ಫೋರ್ ಹಾಗೂ 7 ಸಿಕ್ಸ್​ಗಳ ಸಹಾಯದಿಂದ 83 ರನ್ ಕಲೆ ಹಾಕಿದ್ದರು. ಅವರ ಸ್ಟ್ರೈಕ್​ ರೇಟ್ 237.14 ಇದೆ. ಸದ್ಯ ವಿಶ್ವಕಪ್​ನ ವಿಕೆಟ್ ಕೀಪರ್ ರೇಸ್​ನಲ್ಲಿ ರಿಷಭ್ ಪಂತ್, ಇಶಾನ್ ಕಿಶನ್, ಧ್ರುವ್ ಜುರೇಲ್, ಸಂಜು ಸ್ಯಾಮ್​ಸನ್ ಹಾಗೂ ಕೆಎಲ್ ರಾಹುಲ್ ಇದ್ದಾರೆ.

ಆರ್​ಸಿಬಿ ಟ್ವೀಟ್

ಈ ಬಾರಿ ಏಳು ಪಂದ್ಯಗಳನ್ನು ಆಡಿರೋ ಕಾರ್ತಿಕ್ ಅವರು 156 ರನ್ ಕಲೆ ಹಾಕಿದ್ದು, 194 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಹೀಗಾಗಿ ಅವರಿಗೆ ವಿಶ್ವಕಪ್​ನಲ್ಲಿ ಆಡೋಕೆ ಚಾನ್ಸ್ ಇದೆ ಎನ್ನಲಾಗುತ್ತಿದೆ. ಈ ಮೊದಲು ರೋಹಿತ್ ಶರ್ಮಾ ಕೂಡ ಇದೇ ರೀತಿ ಹೇಳಿ ಕಾರ್ತಿಕ್ ಕಾಲೆಳೆದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು