AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಬಾಲ್​ಗೆ 83 ರನ್ ಬಾರಿಸಿದ ದಿನೇಶ್ ಕಾರ್ತಿಕ್​ಗೆ ವಿಶ್ವಕಪ್​ನಲ್ಲಿ ಸ್ಥಾನ? ಕೋಚ್ ಹೇಳಿದ್ದಿಷ್ಟು

ಈ ಮೊದಲಿನ ಟಿ20 ವಿಶ್ವಕಪ್​ನಲ್ಲಿ ದಿನೇಶ್ ಕಾರ್ತಿಕ್ ಆಟ ಆಡಿದ್ದರು. ಆ ಬಳಿಕ ಅವರು ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿಲ್ಲ. ಈಗ ಅವರಿಗೆ ಮತ್ತೊಮ್ಮೆ ಸ್ಥಾನ ಸಿಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರ್​ಸಿಬಿ ಕೋಚ್ ಆ್ಯಂಡಿ ಫ್ಲವರ್ ಕೂಡ ದಿನೇಶ್ ಆಟವನ್ನು ಮೆಚ್ಚಿಕೊಂಡಿದ್ದಾರೆ

35 ಬಾಲ್​ಗೆ 83 ರನ್ ಬಾರಿಸಿದ ದಿನೇಶ್ ಕಾರ್ತಿಕ್​ಗೆ ವಿಶ್ವಕಪ್​ನಲ್ಲಿ ಸ್ಥಾನ? ಕೋಚ್ ಹೇಳಿದ್ದಿಷ್ಟು
ದಿನೇಶ್ ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on: Apr 16, 2024 | 10:39 AM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ರನ್​ಗಳ ಮಹಾಪೂರವೇ ಹರಿದುಬಂತು. 288 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನು ಹತ್ತಿದ ಆರ್​ಸಿಬಿಗೆ ದಿನೇಶ್ ಕಾರ್ತಿಕ್ ಬೆನ್ನೆಲುಬಾಗಿ ನಿಂತರು. 35 ಬಾಲ್​ಗಳಿಗೆ ಅವರು 83 ರನ್ ಚಚ್ಚಿದರು. ಮಧ್ಯ ಕ್ರಮಾಂಕದ ಆಟಗಾರನಾಗಿ ಅವರು ಈ ರೀತಿಯ ಪರ್ಫಾರ್ಮೆನ್ಸ್ ನೀಡಿರುವುದರಿಂದ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅವರಿಗೆ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಸಿಗಬಹುದು ಎಂದು ಊಹಿಸಲಾಗುತ್ತಿದೆ. ಈ ವಿಚಾರ ಕೇಳಿ ಅವರ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಈ ಮೊದಲಿನ ಟಿ20 ವಿಶ್ವಕಪ್​ನಲ್ಲಿ ದಿನೇಶ್ ಕಾರ್ತಿಕ್ ಆಟ ಆಡಿದ್ದರು. ಆ ಬಳಿಕ ಅವರು ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿಲ್ಲ. ಈಗ ಅವರಿಗೆ ಮತ್ತೊಮ್ಮೆ ಸ್ಥಾನ ಸಿಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರ್​ಸಿಬಿ ಕೋಚ್ ಆ್ಯಂಡಿ ಫ್ಲವರ್ ಕೂಡ ದಿನೇಶ್ ಆಟವನ್ನು ಮೆಚ್ಚಿಕೊಂಡಿದ್ದಾರೆ. ‘ಟಿ20 ವಿಶ್ವಕಪ್​ನಲ್ಲಿ ಸ್ಥಾನ ನೀಡಲೇಬೇಕು ಎನ್ನುವ ರೀತಿಯಲ್ಲಿ ಆಡುತ್ತಿದ್ದೀರಿ. ನೀವು ದಿನ ಕಳೆದಂತೆ ಉತ್ತಮವಾಗುತ್ತಿದ್ದೀರಿ’ ಎಂದಿದ್ದಾರೆ ಅವರು. ಇದನ್ನೂ ಓದಿ: ವಿಶ್ವಕಪ್​ನಲ್ಲಿ ಸ್ಥಾನಪಡೆಯಲು ದಿನೇಶ್ ಕಾರ್ತಿಕ್ ಸ್ಫೋಟಕ ಆಟ? ಹಿಂಟ್ ಕೊಟ್ಟ ರೋಹಿತ್

ಬೆಂಗಳೂರು ಸ್ಟೇಡಿಯಂನಲ್ಲಿ ಎಲ್ಲರೂ ಡಿಕೆ ಡಿಕೆ ಎನ್ನುವ ಘೋಷಣೆ ಕೂಗಿದ್ದರು. ಕಾರ್ತಿಕ್ ಅವರು 5 ಫೋರ್ ಹಾಗೂ 7 ಸಿಕ್ಸ್​ಗಳ ಸಹಾಯದಿಂದ 83 ರನ್ ಕಲೆ ಹಾಕಿದ್ದರು. ಅವರ ಸ್ಟ್ರೈಕ್​ ರೇಟ್ 237.14 ಇದೆ. ಸದ್ಯ ವಿಶ್ವಕಪ್​ನ ವಿಕೆಟ್ ಕೀಪರ್ ರೇಸ್​ನಲ್ಲಿ ರಿಷಭ್ ಪಂತ್, ಇಶಾನ್ ಕಿಶನ್, ಧ್ರುವ್ ಜುರೇಲ್, ಸಂಜು ಸ್ಯಾಮ್​ಸನ್ ಹಾಗೂ ಕೆಎಲ್ ರಾಹುಲ್ ಇದ್ದಾರೆ.

ಆರ್​ಸಿಬಿ ಟ್ವೀಟ್

ಈ ಬಾರಿ ಏಳು ಪಂದ್ಯಗಳನ್ನು ಆಡಿರೋ ಕಾರ್ತಿಕ್ ಅವರು 156 ರನ್ ಕಲೆ ಹಾಕಿದ್ದು, 194 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಹೀಗಾಗಿ ಅವರಿಗೆ ವಿಶ್ವಕಪ್​ನಲ್ಲಿ ಆಡೋಕೆ ಚಾನ್ಸ್ ಇದೆ ಎನ್ನಲಾಗುತ್ತಿದೆ. ಈ ಮೊದಲು ರೋಹಿತ್ ಶರ್ಮಾ ಕೂಡ ಇದೇ ರೀತಿ ಹೇಳಿ ಕಾರ್ತಿಕ್ ಕಾಲೆಳೆದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ