AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಬಾಲ್​ಗೆ 83 ರನ್ ಬಾರಿಸಿದ ದಿನೇಶ್ ಕಾರ್ತಿಕ್​ಗೆ ವಿಶ್ವಕಪ್​ನಲ್ಲಿ ಸ್ಥಾನ? ಕೋಚ್ ಹೇಳಿದ್ದಿಷ್ಟು

ಈ ಮೊದಲಿನ ಟಿ20 ವಿಶ್ವಕಪ್​ನಲ್ಲಿ ದಿನೇಶ್ ಕಾರ್ತಿಕ್ ಆಟ ಆಡಿದ್ದರು. ಆ ಬಳಿಕ ಅವರು ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿಲ್ಲ. ಈಗ ಅವರಿಗೆ ಮತ್ತೊಮ್ಮೆ ಸ್ಥಾನ ಸಿಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರ್​ಸಿಬಿ ಕೋಚ್ ಆ್ಯಂಡಿ ಫ್ಲವರ್ ಕೂಡ ದಿನೇಶ್ ಆಟವನ್ನು ಮೆಚ್ಚಿಕೊಂಡಿದ್ದಾರೆ

35 ಬಾಲ್​ಗೆ 83 ರನ್ ಬಾರಿಸಿದ ದಿನೇಶ್ ಕಾರ್ತಿಕ್​ಗೆ ವಿಶ್ವಕಪ್​ನಲ್ಲಿ ಸ್ಥಾನ? ಕೋಚ್ ಹೇಳಿದ್ದಿಷ್ಟು
ದಿನೇಶ್ ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on: Apr 16, 2024 | 10:39 AM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ರನ್​ಗಳ ಮಹಾಪೂರವೇ ಹರಿದುಬಂತು. 288 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನು ಹತ್ತಿದ ಆರ್​ಸಿಬಿಗೆ ದಿನೇಶ್ ಕಾರ್ತಿಕ್ ಬೆನ್ನೆಲುಬಾಗಿ ನಿಂತರು. 35 ಬಾಲ್​ಗಳಿಗೆ ಅವರು 83 ರನ್ ಚಚ್ಚಿದರು. ಮಧ್ಯ ಕ್ರಮಾಂಕದ ಆಟಗಾರನಾಗಿ ಅವರು ಈ ರೀತಿಯ ಪರ್ಫಾರ್ಮೆನ್ಸ್ ನೀಡಿರುವುದರಿಂದ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅವರಿಗೆ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಸಿಗಬಹುದು ಎಂದು ಊಹಿಸಲಾಗುತ್ತಿದೆ. ಈ ವಿಚಾರ ಕೇಳಿ ಅವರ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಈ ಮೊದಲಿನ ಟಿ20 ವಿಶ್ವಕಪ್​ನಲ್ಲಿ ದಿನೇಶ್ ಕಾರ್ತಿಕ್ ಆಟ ಆಡಿದ್ದರು. ಆ ಬಳಿಕ ಅವರು ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿಲ್ಲ. ಈಗ ಅವರಿಗೆ ಮತ್ತೊಮ್ಮೆ ಸ್ಥಾನ ಸಿಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರ್​ಸಿಬಿ ಕೋಚ್ ಆ್ಯಂಡಿ ಫ್ಲವರ್ ಕೂಡ ದಿನೇಶ್ ಆಟವನ್ನು ಮೆಚ್ಚಿಕೊಂಡಿದ್ದಾರೆ. ‘ಟಿ20 ವಿಶ್ವಕಪ್​ನಲ್ಲಿ ಸ್ಥಾನ ನೀಡಲೇಬೇಕು ಎನ್ನುವ ರೀತಿಯಲ್ಲಿ ಆಡುತ್ತಿದ್ದೀರಿ. ನೀವು ದಿನ ಕಳೆದಂತೆ ಉತ್ತಮವಾಗುತ್ತಿದ್ದೀರಿ’ ಎಂದಿದ್ದಾರೆ ಅವರು. ಇದನ್ನೂ ಓದಿ: ವಿಶ್ವಕಪ್​ನಲ್ಲಿ ಸ್ಥಾನಪಡೆಯಲು ದಿನೇಶ್ ಕಾರ್ತಿಕ್ ಸ್ಫೋಟಕ ಆಟ? ಹಿಂಟ್ ಕೊಟ್ಟ ರೋಹಿತ್

ಬೆಂಗಳೂರು ಸ್ಟೇಡಿಯಂನಲ್ಲಿ ಎಲ್ಲರೂ ಡಿಕೆ ಡಿಕೆ ಎನ್ನುವ ಘೋಷಣೆ ಕೂಗಿದ್ದರು. ಕಾರ್ತಿಕ್ ಅವರು 5 ಫೋರ್ ಹಾಗೂ 7 ಸಿಕ್ಸ್​ಗಳ ಸಹಾಯದಿಂದ 83 ರನ್ ಕಲೆ ಹಾಕಿದ್ದರು. ಅವರ ಸ್ಟ್ರೈಕ್​ ರೇಟ್ 237.14 ಇದೆ. ಸದ್ಯ ವಿಶ್ವಕಪ್​ನ ವಿಕೆಟ್ ಕೀಪರ್ ರೇಸ್​ನಲ್ಲಿ ರಿಷಭ್ ಪಂತ್, ಇಶಾನ್ ಕಿಶನ್, ಧ್ರುವ್ ಜುರೇಲ್, ಸಂಜು ಸ್ಯಾಮ್​ಸನ್ ಹಾಗೂ ಕೆಎಲ್ ರಾಹುಲ್ ಇದ್ದಾರೆ.

ಆರ್​ಸಿಬಿ ಟ್ವೀಟ್

ಈ ಬಾರಿ ಏಳು ಪಂದ್ಯಗಳನ್ನು ಆಡಿರೋ ಕಾರ್ತಿಕ್ ಅವರು 156 ರನ್ ಕಲೆ ಹಾಕಿದ್ದು, 194 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಹೀಗಾಗಿ ಅವರಿಗೆ ವಿಶ್ವಕಪ್​ನಲ್ಲಿ ಆಡೋಕೆ ಚಾನ್ಸ್ ಇದೆ ಎನ್ನಲಾಗುತ್ತಿದೆ. ಈ ಮೊದಲು ರೋಹಿತ್ ಶರ್ಮಾ ಕೂಡ ಇದೇ ರೀತಿ ಹೇಳಿ ಕಾರ್ತಿಕ್ ಕಾಲೆಳೆದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು