AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗುಜರಾತ್ ಟೈಟಾನ್ಸ್ ತಂಡಕ್ಕೆ ಸಾಲು ಸಾಲು ಆಘಾತ; ಅಪಘಾತಕ್ಕೀಡಾದ ಯುವ ಕ್ರಿಕೆಟಿಗ

IPL 2024: 17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಲೀಗ್​ನಲ್ಲಿ ಸತತ ಎರಡು ಬಾರಿ ಫೈನಲ್ ಪ್ರವೇಶಿಸಿದ್ದ ಗುಜರಾತ್ ಟೈಟಾನ್ಸ್ ತಂಡಕ್ಕೆ ಸಾಲು ಸಾಲು ಆಘಾತಗಳು ಎದುರಾಗುತ್ತಿವೆ. ಸ್ಟಾರ್ ಕ್ರಿಕೆಟಿಗರ ಅಲಭ್ಯತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಯುವ ಬ್ಯಾಟರ್ ಅಪಘಾತಕ್ಕೀಡಾಗಿರುವುದು ಮತ್ತೊಂದು ಹಿನ್ನಡೆಯನ್ನುಂಟು ಮಾಡಿದೆ.

IPL 2024: ಗುಜರಾತ್ ಟೈಟಾನ್ಸ್ ತಂಡಕ್ಕೆ ಸಾಲು ಸಾಲು ಆಘಾತ; ಅಪಘಾತಕ್ಕೀಡಾದ ಯುವ ಕ್ರಿಕೆಟಿಗ
ರಾಬಿನ್ ಮಿಂಜ್
ಪೃಥ್ವಿಶಂಕರ
|

Updated on:Mar 03, 2024 | 3:35 PM

Share

17ನೇ ಆವೃತ್ತಿಯ ಐಪಿಎಲ್ (IPL 2024) ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಲೀಗ್​ನಲ್ಲಿ ಸತತ ಎರಡು ಬಾರಿ ಫೈನಲ್ ಪ್ರವೇಶಿಸಿದ್ದ ಗುಜರಾತ್ ಟೈಟಾನ್ಸ್ (Gujarat Titans) ತಂಡಕ್ಕೆ ಸಾಲು ಸಾಲು ಆಘಾತಗಳು ಎದುರಾಗುತ್ತಿವೆ. ಲೀಗ್ ಆರಂಭಕ್ಕೂ ಮುನ್ನ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಗುಜರಾತ್ ಫ್ರಾಂಚೈಸಿಯನ್ನು ತೊರೆದು ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡಿದ್ದರು. ಆ ಬಳಿಕ ತಂಡದ ಬೌಲಿಂಗ್ ಜೀವಾಳ ಮೊಹಮ್ಮದ್ ಶಮಿ (Mohammed Shami) ಇಂಜುರಿಯಿಂದಾಗಿ ಇಡೀ ಲೀಗ್​ನಿಂದಲೇ ಹೊರಬಿದ್ದಿದ್ದರು. ಶಮಿ ಹೊರತಾಗಿ ತಂಡದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಕೂಡ ಇಂಜುರಿಯಿಂದಾಗಿ ಲೀಗ್ ಆಡುವ ಬಗ್ಗೆ ಇನ್ನು ಮಾಹಿತಿ ಸಿಕ್ಕಿಲ್ಲ. ಈ ನಡುವೆ ತಂಡದ ಯುವ ಆಟಗಾರ ಅಪಘಾತಕ್ಕೀಡಾಗಿದ್ದಾನೆ. ಇದು ತಂಡದ ಸಂಯೋಜನೆಗೆ ಸಾಕಷ್ಟು ಹಿನ್ನಡೆಯನ್ನುಂಟು ಮಾಡಿದೆ.

ರಾಬಿನ್​ಗೆ ಹೆಚ್ಚು ಗಾಯಗಳಾಗಿಲ್ಲ

ಸಿಕ್ಕಿರುವ ಮಾಹಿತಿ ಪ್ರಕಾರ 21 ವರ್ಷದ ರಾಬಿನ್ ಮಿಂಜ್ ತಮ್ಮ ಕವಾಸಕಿ ಸೂಪರ್ ಬೈಕ್​ನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಮತ್ತೊಂದು ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ರಾಬಿನ್​ಗೆ ಹೆಚ್ಚಿನ ಗಾಯಗಳಾಗಿಲ್ಲ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೈಕ್ ಸಂಪೂರ್ಣ ಜಖಂಗೊಂಡಿದೆ. ೀ ಅಪಘಾತದ ಬಗ್ಗೆ ಮಾಹಿತಿ ನೀಡಿರುವ ರಾಬಿನ್ ಅವರ ತಂದೆ, ರಾಬಿನ್​ ಸ್ಥಿತಿ ಗಂಭೀರವಾಗಿಲ್ಲ. ಪ್ರಸ್ತುತ ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಬೈಕ್‌ನ ಮುಂಭಾಗಕ್ಕೆ ಹಾನಿಯಾಗಿದ್ದು, ಮಿಂಜ್ ಅವರ ಬಲ ಮೊಣಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದಿದ್ದಾರೆ.

ಬ್ರಿಸ್ಬೇನ್ ಹೀಟ್ ತಂಡಕ್ಕೆ ಬಿಗ್ ಬ್ಯಾಷ್ ಲೀಗ್‌ ಕಿರೀಟ; ಫೈನಲ್​ನಲ್ಲಿ ಮಿಂಚಿದ ಗುಜರಾತ್ ಟೈಟಾನ್ಸ್ ವೇಗಿ

3.6 ಕೋಟಿಗೆ ಖರೀದಿಸಿದ್ದ ಗುಜರಾತ್

ಕೆಲವು ತಿಂಗಳ ಹಿಂದೆ ದುಬೈನಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಈ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್​ರನ್ನು ಗುಜರಾತ್ ಟೈಟಾನ್ಸ್‌ ಫ್ರಾಂಚೈಸಿ ಬರೋಬ್ಬರಿ 3.6 ಕೋಟಿ ರೂಪಾಯಿ ನೀಡಿ ಖರೀದಿಸಿತ್ತು. ಕೆಲವು ದಿನಗಳ ಹಿಂದೆ ನಡೆದ ಸಿಕೆ ನಾಯುಡು ಟ್ರೋಫಿಯಲ್ಲಿ ಜಾರ್ಖಂಡ್ ತಂಡವನ್ನು ಪ್ರತಿನಿಧಿಸಿದ್ದ ರಾಬಿನ್, ಕರ್ನಾಟಕ ವಿರುದ್ಧದ ಕ್ವಾರ್ಟರ್-ಫೈನಲ್‌ ಪಂದ್ಯದಲ್ಲಿ 137 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಆ ನಂತರ ಮನೆಗೆ ಮರಳಿದ್ದ ರಾಬಿನ್, ಐಪಿಎಲ್ ಆರಂಭಕ್ಕೂ ಮುನ್ನ ಗುಜರಾತ್ ಫ್ರಾಂಚೈಸಿ ಆಯೋಜಿಸಿರುವ ಅಭ್ಯಾಸ ಶಿಬಿರದಲ್ಲಿ ಭಾಗಿಯಾಗಬೇಕಿತ್ತು. ಆದರೀಗ ಅಪಘಾತಕ್ಕೀಡಾಗಿರುವ ಅವರು ಈ ಶಿಬಿರದಲ್ಲಿ ಭಾಗವಹಿಸುವುದು ವಿಳಂಬವಾಗುತ್ತದೆಯೇ ಅಥವಾ ಇಲ್ಲವೇ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.

ರಾಬಿನ್ ತಂದೆಯನ್ನು ಭೇಟಿಯಾಗಿದ್ದ ಗಿಲ್

ವಾಸ್ತವವಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ನ ನಂತರ ರಾಂಚಿಯಿಂದ ಫ್ಲೈಟ್ ಹತ್ತುವಾಗ ಗುಜರಾತ್ ತಂಡದ ಕ್ಯಾಪ್ಟನ್ ಶುಭ್​ಮನ್ ಗಿಲ್‌, ರಾಬಿನ್ ತಂದೆ ಫ್ರಾನ್ಸಿಸ್ ಮಿಂಜ್ ಅವರನ್ನು ಭೇಟಿಯಾಗಿದ್ದರು. ರಾಂಚಿ ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಫ್ರಾನ್ಸಿಸ್ ಮಿಂಜ್ ಅವರು ಎಲ್ಲಾ ಭಾರತೀಯ ಕ್ರಿಕೆಟಿಗರೊಂದಿಗೆ ಸಂವಾದ ನಡೆಸಿದರು. ಐಪಿಎಲ್‌ನಲ್ಲಿ ನಾಯಕ ಗಿಲ್ ಅವರನ್ನು ಅವರ ಮಗ ಭೇಟಿಯಾದ ಫೋಟೋಗಳು ಅಂತರ್ಜಾಲದಲ್ಲಿ ವೈರಲ್ ಆಗಿದ್ದವು. ರಾಬಿನ್ ಅವರ ತಂದೆ ಫ್ರಾನ್ಸಿಸ್ ಕ್ಸೇವಿಯರ್ ಮಿಂಜ್ ಅವರು ಸುಮಾರು ಎರಡು ದಶಕಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದರು, ಪ್ರಸ್ತುತ ವಿಮಾನ ನಿಲ್ದಾಣದಲ್ಲಿ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Sun, 3 March 24

ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!