AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಎನಲ್ಲಿ ಇಬ್ಬರು ಬಿಜೆಪಿ ನಾಯಕರ ಒಳಜಗಳ: ಎರಡು ತಂಡಗಳಾದ ಬಿಹಾರ್ ಕ್ರಿಕೆಟ್​

ಬಿಹಾರ್ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ರಾಕೇಶ್ ತಿವಾರಿ, ನಾವು 135 ಕಿರಿಯ ಆಟಗಾರರನ್ನು ಶಾರ್ಟ್ ಲಿಸ್ಟ್ ಮಾಡಿದ್ದು ಸೆಪ್ಟೆಂಬರ್ 14ರ ಕ್ಯಾಂಪ್ ಮುಗಿದ ಬಳಿಕ ತಂಡವನ್ನು ಪ್ರಕಟಿಸುತ್ತೇವೆ ಎಂದು ಹೇಳಿದ್ದಾರೆ. ಆದರೆ, ಇದಕ್ಕೂ ಮುನ್ನವೇ ಪಟೇಲ್ ಬಿಹಾರ್ ಅಂಡರ್-19 ತಂಡವನ್ನು ಬಿಸಿಸಿಐಗೆ ಮೇಲ್ ಮಾಡಿದ್ದಾರೆ.

ಬಿಸಿಎನಲ್ಲಿ ಇಬ್ಬರು ಬಿಜೆಪಿ ನಾಯಕರ ಒಳಜಗಳ: ಎರಡು ತಂಡಗಳಾದ ಬಿಹಾರ್ ಕ್ರಿಕೆಟ್​
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 07, 2021 | 12:10 PM

Share

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ವಿನೂ ಮಂಕಡ್ ಟ್ರೋಫಿಗೆ (Vinoo Mankad Trophy) ಸಿದ್ಧತೆ ನಡೆಸುತ್ತಿದ್ದರೆ, ಇತ್ತ ಬಿಹಾರ್ ಕ್ರಿಕೆಟ್ ಸಂಸ್ಥೆ ರಾಜಕೀಯ ನಾಯಕರ ಗಾಳಕ್ಕೆ ಸಿಲುಕಿದೆ. ಬಿಹಾರದ ಮಾಜಿ ಬಿಜೆಪಿ ಖಜಾಂಚಿ ಮತ್ತು ಬಿಹಾರ್ ಕ್ರಿಕೆಟ್ (Bihar cricket) ಸಂಸ್ಥೆಯ ಅಧ್ಯಕ್ಷ ರಾಕೇಶ್ ತಿವಾರಿ ಮತ್ತು ಮಾಜಿ ಶಾಸಕ ಹಾಗೂ ಬಿಹಾರ್ ಬಿಜೆಪಿ ವಕ್ತಾರ ಪ್ರೇಮ್ ರಂಜನ್ ಪಟೇಲ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಆಟಗಾರರ ಆಯ್ಕೆ ಪ್ರಕ್ರಿಯೆ ಗೊಂದಲವಾಗಿ ಉಳಿದಿದೆ.

ಬಿಹಾರ್ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ರಾಕೇಶ್ ತಿವಾರಿ, ಈಗಾಗಲೇ ನಾವು 135 ಕಿರಿಯ ಆಟಗಾರರನ್ನು ಶಾರ್ಟ್ ಲಿಸ್ಟ್ ಮಾಡಿದ್ದು ಸೆಪ್ಟೆಂಬರ್ 14ರ ಕ್ಯಾಂಪ್ ಮುಗಿದ ಬಳಿಕ ತಂಡವನ್ನು ಪ್ರಕಟಿಸುತ್ತೇವೆ ಎಂದು ಹೇಳಿದ್ದಾರೆ. ಆದರೆ, ಇದಕ್ಕೂ ಮುನ್ನವೇ ಪ್ರೇಮ್ ರಂಜನ್ ಪಟೇಲ್ ಬಿಹಾರ್ ಅಂಡರ್-19 ತಂಡವನ್ನು ಬಿಸಿಸಿಐಗೆ ಮೇಲ್ ಮಾಡಿದ್ದಾರೆ.

ಈ ಬಗ್ಗೆ ಇಂಡಿಯನ್ ಎಕ್ಸ್​ಪ್ರೆಸ್ ಜೊತೆ ಮಾತನಾಡಿರುವ ತಿವಾರಿ, “ಬಿಹಾರ್ ಕ್ರಿಕೆಟ್ ಸಂಸ್ಥೆಗೂ ಪ್ರೇಮ್ ರಂಜನ್​ಗೂ ಯಾವುದೇ ಸಂಬಂಧವಿಲ್ಲ. ಅವರು ಹೆಸರಿಸಿದ ಆಟಗಾರನ್ನು ಬಿಸಿಎ ನೋಂದಾಯಿಲ್ಲ. ಅವರಿಗೆ ಯಾವುದೇ ಮಾನ್ಯತೆ ಇಲ್ಲ, ಕಚೇರಿ ಇಲ್ಲ ಮತ್ತು ಅಧಿಕೃತ ಇಮೇಲ್ ವಿಳಾಸ ಕೂಡ ಇಲ್ಲ. ಅವರ ಚುನಾವಣೆ ಯಾವಾಗ ನಡೆಯಿತು? ಅವರ ಸದಸ್ಯರು ಯಾರು? ಇಲ್ಲಿ ಕೇವಲ ಗೊಂದಲಗಳನ್ನು ಸೃಷ್ಟಿಸಲು ಅಂತವರಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಇನ್ನೂ ಇದರ ಬೆನ್ನಲ್ಲೆ ಪ್ರತಿಕ್ರಿಯೆ ನೀಡಿರುವ ಪಟೇಲ್, “ಕಳೆದ ವರ್ಷ 38 ಜಿಲ್ಲೆಗಳಿಂದ 28 ಸದಸ್ಯರು ಒಟ್ಟುಗೂಡಿ ತುರ್ತು ಸಭೆ ನಡೆಸಿದ್ದೆವು. ಆ ಸಭೆಯಲ್ಲಿ ತಿವಾರಿ ಅವರನ್ನು ಬಿಸಿಎ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದ್ದೇವೆ. ಮತ್ತು ನನ್ನನ್ನು ಬಿಹಾರ್ ಕ್ರಿಕೆಟ್​ನ ಅಧ್ಯಕ್ಷನಾಗಿ ನೇಮಿಸಲಾಗಿತ್ತು” ಎಂದು ಹೇಳಿದ್ದಾರೆ.

“ನಾವು ಪ್ರತಿ ಜಿಲ್ಲೆಯಿಂದ ಆಟಗಾರರನ್ನು ಕರೆದು ಟ್ರಯಲ್ ಮಾಡಿ ಮುಗಿಸಿದ್ದೇವೆ. ನಮ್ಮ ಎಲ್ಲ ಕಾರ್ಯದ ಬಗ್ಗೆ ಬಿಸಿಸಿಐಗೂ ಮಾಹಿತಿಯನ್ನು ನೀಡಿದ್ದೇವೆ. ನಾನು ಬಿಸಿಎ ಅಧ್ಯಕ್ಷ, ಇದು ನನ್ನ ಕೆಲಸ, ಅದನ್ನು ನಾನು ಮಾಡುತ್ತಿದ್ದೇನೆ. ಬಿಹಾರ್ ಅಂಡರ್-19 ತಂಡವನ್ನು ಬಿಸಿಸಿಐಗೆ ಕಳುಹಿಸಿದ್ದೇನೆ. ಅವರು ಏನು ತೀರ್ಮಾನ ಮಾಡುತ್ತಾರೆ ಎಂಬುದು ಕಾದುನೋಡಬೇಕಿದೆ” ಎಂದು ಪ್ರೇಮ್ ರಂಜನ್ ಪಟೇಲ್ ಹೇಳಿದ್ದಾರೆ.

ಇನ್ನೂ ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜೈ ಶಾ, ನಾವು ಈ ವಿಚಾರದ ಬಗ್ಗೆ ಗಮನ ಹರಿಸುತ್ತೇವೆ ಎಂದಿದ್ದಾರೆ.

Virat Kohli: ‘ಬಾಲ್ ಟರ್ನ್ ಆಗಲು ಶುರುವಾದಾಗ ಆತ ಬಂದು ನಾನು ಬೌಲಿಂಗ್ ಮಾಡುತ್ತೇನೆ ಎಂದ’: ವಿರಾಟ್ ಕೊಹ್ಲಿ

India vs England: ಇಂಗ್ಲೆಂಡ್ ಜೊತೆ ಪಾಕಿಸ್ತಾನವನ್ನೂ ಬಗ್ಗು ಬಡಿದ ಭಾರತ: ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅಗ್ರಸ್ಥಾನ

(Ahead of Vinoo Mankad Trophy two BJP leaders queer Bihar cricket pitch My team vs your team)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ