AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಮದಾಬಾದ್ ವಿಮಾನ ದುರಂತ: ಸಂತಾಪ ಸೂಚಿಸಿದ ಟೀಂ ಇಂಡಿಯಾ; ಡಬ್ಲ್ಯುಟಿಸಿ ಫೈನಲ್​ನಲ್ಲಿ 1 ನಿಮಿಷ ಮೌನಾಚರಣೆ

Ahmedabad Plane Crash: ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಮೂರನೇ ದಿನದಾಟ ಆರಂಭಕ್ಕೂ ಮೊದಲು ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡದ ಆಟಗಾರರು ಅಹಮದಾಬಾದ್ ವಿಮಾನ ಅಪಘಾತದಲ್ಲಿ ಮೃತಪಟ್ಟವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿದವು. ಹಾಗೆಯೇ ಟೀಂ ಇಂಡಿಯಾ ಕೂಡ ಮಡಿದವರಿಗೆ ಸಂತಾಪ ಸೂಚಿಸಿದೆ.

ಅಹಮದಾಬಾದ್ ವಿಮಾನ ದುರಂತ: ಸಂತಾಪ ಸೂಚಿಸಿದ ಟೀಂ ಇಂಡಿಯಾ; ಡಬ್ಲ್ಯುಟಿಸಿ ಫೈನಲ್​ನಲ್ಲಿ 1 ನಿಮಿಷ ಮೌನಾಚರಣೆ
Team India
ಪೃಥ್ವಿಶಂಕರ
|

Updated on:Jun 13, 2025 | 4:27 PM

Share

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025 ರ ಫೈನಲ್ (World Test Championship Final) ಪಂದ್ಯದ ಮೂರನೇ ದಿನ ಆರಂಭವಾಗಿದೆ. ಮೂರನೇ ದಿನದ ಆಟ ಪ್ರಾರಂಭವಾಗುವ ಮೊದಲು, ಎರಡೂ ತಂಡಗಳ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದು 1 ನಿಮಿಷ ಮೌನ ಆಚರಿಸಿದರು. ವಾಸ್ತವವಾಗಿ, ಜೂನ್ 12 ರಂದು ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದಲ್ಲಿ 265 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಈ ದುರಂತದಲ್ಲಿ ಮಡಿದ ಎಲ್ಲರಿಗೂ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾದ (Australia vs South Africa) ಆಟಗಾರರು ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಇತ್ತ ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಕೂಡ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದೆ.

ಶೋಕ ವ್ಯಕ್ತಪಡಿಸಿದ ಟೀಂ ಇಂಡಿಯಾ

ಪ್ರಸ್ತುತ ಟೀಂ ಇಂಡಿಯಾ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಪ್ರವಾಸದಲ್ಲಿದೆ. ಈ ಪ್ರವಾಸ ಆರಂಭಕ್ಕೂ ಮುನ್ನ ಭಾರತ ತಂಡದ ನಡುವೆಯೇ ಇಂಟ್ರಾ-ಸ್ಕ್ವಾಡ್ ಪಂದ್ಯವನ್ನು ಆಡಲಾಗುತ್ತಿದೆ. ಆದಾಗ್ಯೂ, ಈ ಪಂದ್ಯ ಆರಂಭಕ್ಕೂ ಮೊದಲು, ತಂಡದ ಆಟಗಾರರು ಕೈಗೆ ಕಪ್ಪು ಪಟ್ಟಿ ಧರಿಸಿ ಒಂದು ನಿಮಿಷ ಮೌನ ಆಚರಿಸಿ ಮಡಿದವರಿಗೆ ಗೌರವ ವಂದನೆ ಸಲ್ಲಿಸಿದರು.

ಆಸ್ಟ್ರೇಲಿಯಾ- ಆಫ್ರಿಕಾ ಆಟಗಾರರ ಮೌನಾಚರಣೆ

ಲಾರ್ಡ್ಸ್‌ನಲ್ಲಿ ನಡೆಯಲಿರುವ ಡಬ್ಲ್ಯುಟಿಸಿ ಫೈನಲ್ ಪಂದ್ಯದ ಮೂರನೇ ದಿನದ ಆಟ ಆರಂಭವಾಗುವ ಮುನ್ನ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾದ ಆಟಗಾರರು ಅಹಮದಾಬಾದ್ ವಿಮಾನ ಅಪಘಾತದಲ್ಲಿ ಮೃತಪಟ್ಟವರಿಗೆ ಒಂದು ನಿಮಿಷ ಮೌನ ಆಚರಿಸಿದರು. ಹಾಗೆಯೇ ಉಭಯ ತಂಡಗಳ ಆಟಗಾರರು ತಮ್ಮ ತೋಳುಗಳ ಮೇಲೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ.

View this post on Instagram

A post shared by ICC (@icc)

ಪಂದ್ಯದ ಬಗ್ಗೆ ಹೇಳುವುದಾದರೆ, ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾಕ್ಕೆ 250 ಕ್ಕೂ ಹೆಚ್ಚು ರನ್‌ಗಳ ಗುರಿ ನೀಡುವ ಸಾಧ್ಯತೆ ಇದೆ. ಲಾರ್ಡ್ಸ್‌ನ ಇತಿಹಾಸದ ಬಗ್ಗೆ ಹೇಳುವುದಾದರೆ, ಈ ಮೈದಾನದಲ್ಲಿ ಇಲ್ಲಿಯವರೆಗೆ ನಾಲ್ಕನೇ ಇನ್ನಿಂಗ್ಸ್‌ನಲ್ಲಿ 200 ಕ್ಕೂ ಹೆಚ್ಚು ರನ್‌ಗಳ ರನ್ ಚೇಸ್ ಕೇವಲ 4 ಬಾರಿ ಮಾತ್ರ ನಡೆದಿದೆ. ಇದನ್ನು ನೋಡಿದರೆ, ಡಬ್ಲ್ಯುಟಿಸಿ 2025 ರ ಫೈನಲ್​ನಲ್ಲಿ ಯಾವ ತಂಡ ಗೆಲ್ಲಲಿದೆ ಎಂದು ಹೇಳುವುದು ಸಧ್ಯಕ್ಕೆ ಅಸಾಧ್ಯವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Fri, 13 June 25

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?