AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡೊ-ಪಾಕ್ ಗಡಿಯಲ್ಲಿ ಸ್ಟೇಡಿಯಂ ನಿರ್ಮಿಸಿ: ಎಲ್ಲಾ ಸಮಸ್ಯೆಗೂ ಇದುವೇ ಪರಿಹಾರ

Champions trophy 2025: ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯವನ್ನು ಆಡಲು ಬಿಸಿಸಿಐ ನಿರಾಕರಿಸಿತ್ತು. ಅದರಂತೆ ಇದೀಗ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಒಪ್ಪಿಕೊಂಡಿದೆ. ಹಾಗೆಯೇ ಭಾರತದಲ್ಲಿ ನಡೆಯಲಿರುವ ಐಸಿಸಿ ಟೂರ್ನಿಯನ್ನು ಸಹ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಬೇಕೆಂದು ಪಿಸಿಬಿ ಷರತ್ತು ವಿಧಿಸಿದೆ.

ಇಂಡೊ-ಪಾಕ್ ಗಡಿಯಲ್ಲಿ ಸ್ಟೇಡಿಯಂ ನಿರ್ಮಿಸಿ: ಎಲ್ಲಾ ಸಮಸ್ಯೆಗೂ ಇದುವೇ ಪರಿಹಾರ
Ind Vs Pak
ಝಾಹಿರ್ ಯೂಸುಫ್
|

Updated on: Dec 21, 2024 | 1:55 PM

Share

ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ಬಿಕ್ಕಟ್ಟು ಕೊನೆಗೂ ಇತ್ಯರ್ಥವಾಗಿದೆ. 2025ರ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಒಪ್ಪಿಕೊಂಡಿದ್ದು, ಅದರಂತೆ ಮುಂಬರುವ ಐಸಿಸಿ ಟೂರ್ನಿಯು ಪಾಕ್​ನಲ್ಲೇ ಆಯೋಜನೆಗೊಳ್ಳಲಿದೆ. ಅಲ್ಲದೆ ಭಾರತ ಪಂದ್ಯಗಳು ತಟಸ್ಥ ಸ್ಥಳದಲ್ಲಿ ನಡೆಯಲಿದೆ.

ಇಲ್ಲಿ ಟೀಮ್ ಇಂಡಿಯಾದ ಪಂದ್ಯಗಳನ್ನು ದುಬೈ ಅಥವಾ ಶ್ರೀಲಂಕಾದಲ್ಲಿ ಆಯೋಜಿಸಲು ಐಸಿಸಿ ಸಲಹೆ ನೀಡಿದ್ದು, ಇದಕ್ಕೆ ಪಿಸಿಬಿ ಕೂಡ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಶೀಘ್ರದಲ್ಲೇ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿ ಪ್ರಕಟವಾಗಲಿದೆ.

ಆದರೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜನೆಗೆ ಒಪ್ಪಿಕೊಂಡಿರುವ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ, ಐಸಿಸಿ ಮುಂದೆ ಕೆಲ ಷರತ್ತುಗಳನ್ನು ಮುಂದಿಟ್ಟಿದೆ. ಈ ಷರತ್ತುಗಳಂತೆ ಭಾರತದಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲೇ ಆಯೋಜಿಸಬೇಕಾಗುತ್ತದೆ.

ಅಂದರೆ ಇಲ್ಲಿ ಪಾಕಿಸ್ತಾನ್ ತಂಡವು ಇನ್ಮುಂದೆ ಭಾರತದಲ್ಲಿ ಪಂದ್ಯವಾಡುವುದಿಲ್ಲ. ಬದಲಾಗಿ ಪಾಕ್ ಪಂದ್ಯಗಳನ್ನು ಯುಎಇ ಅಥವಾ ಶ್ರೀಲಂಕಾದಲ್ಲಿ ಆಯೋಜಿಸಬೇಕಾಗುತ್ತದೆ. ಆದರೆ ಹೀಗೆ ಪ್ರತಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವುದು ತರವಲ್ಲ ಎಂದಿದ್ದಾರೆ ಪಾಕಿಸ್ತಾನ್ ಆಟಗಾರ ಅಹಮದ್ ಶೆಹಝಾದ್.

ಎರಡು ದೇಶಗಳು ಪರಸ್ಪರ ಎದುರಾಳಿ ದೇಶಗಳಿಗೆ ಭೇಟಿ ನೀಡುವುದಿಲ್ಲ ಎನ್ನುವುದು ಸರಿಯಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಅದರಂತೆ ಎರಡು ಮಂಡಳಿಗಳು ಸೇರಿ ಭಾರತ ಮತ್ತು ಪಾಕಿಸ್ತಾನ್ ಗಡಿಯಲ್ಲಿ ಸ್ಟೇಡಿಯಂ ನಿರ್ಮಿಸುವುದು ಉತ್ತಮ ಎಂದು ಅಹಮದ್ ಶೆಹಝಾದ್ ಅಭಿಪ್ರಾಯಪಟ್ಟಿದ್ದಾರೆ.

ಗಡಿಯಲ್ಲಿ ಸ್ಟೇಡಿಯಂ ನಿರ್ಮಿಸಿ ಪಾಕಿಸ್ತಾನದವರಿಗೆ ಪಾಕ್​ ಗಡಿಯಿಂದ ಎಂಟ್ರಿ ಕೊಡಿ, ಭಾರತೀಯರಿಗೆ ಭಾರತದ ಗಡಿಯಲ್ಲಿ ಎಂಟ್ರಿ ಗೇಟ್ ನಿರ್ಮಿಸಿ. ಇದರಿಂದ ವೀಸಾ ಸಮಸ್ಯೆ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬಹುದು.

ಈ ಮೂಲಕ ಭಾರತ ಪಾಕಿಸ್ತಾನಕ್ಕೆ ಭೇಟಿ ನೀಡುವುದಿಲ್ಲ, ಪಾಕಿಸ್ತಾನ್ ಭಾರತಕ್ಕೆ ನೀಡುವುದಿಲ್ಲ ಎಂಬ ವಿಚಾರಗಳನ್ನೇ ತೆಗೆದು ಹಾಕಬಹುದು. ಹಾಗೆಯೇ ಸ್ಟೇಡಿಯಂ ಎರಡು ದೇಶಗಳ ಗಡಿಯಲ್ಲಿರುವುದರಿಂದ ಪಾಕಿಸ್ತಾನದ ಅಭಿಮಾನಿಗಳಿಗೆ ವೀಸಾ ಪಡೆಯುವ ಸಮಸ್ಯೆ ಉದ್ಭವಿಸುವುದಿಲ್ಲ. ಹಾಗೆಯೇ ಭಾರತೀಯರು ಕೂಡ ಪಾಕಿಸ್ತಾನಕ್ಕೆ ಬರಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಮೂಲಕ ಇಂಡೊ-ಪಾಕ್ ಕ್ರಿಕೆಟ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು ಎಂದು ಅಹಮದ್ ಶೆಹಝಾದ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 11 ಆಟಗಾರರು ನಿವೃತ್ತಿ..!

33 ವರ್ಷದ ಅಹಮದ್ ಶೆಹಝಾದ್ ಒಂದು ಕಾಲದಲ್ಲಿ ಪಾಕಿಸ್ತಾನದ ಸ್ಟಾರ್ ಆಟಗಾರ. ಆದಾಗ್ಯೂ, ಶೀಘ್ರದಲ್ಲೇ ಅವರ ವೃತ್ತಿಜೀವನವು ಕೊನೆಗೊಂಡಿತು. ಪಾಕಿಸ್ತಾನ್ ಪರ 13 ಟೆಸ್ಟ್ ಪಂದ್ಯಗಳನ್ನಾಡಿರುವ ಶೆಹಝಾದ್ 3 ಶತಕಗಳೊಂದಿಗೆ 982 ರನ್ ಕಲೆಹಾಕಿದ್ದಾರೆ. ಇನ್ನು 81 ಏಕದಿನ ಪಂದ್ಯಗಳಿಂದ 6 ಶತಕಗಳೊಂದಿಗೆ 2605 ರನ್​ ಗಳಿಸಿದ್ದಾರೆ. ಹಾಗೆಯೇ 59 ಟಿ20 ಪಂದ್ಯಗಳಲ್ಲೂ ಪಾಕ್ ತಂಡವನ್ನು ಪ್ರತಿನಿಧಿಸಿರುವ ಅಹಮದ್ ಶೆಹಝಾದ್ 1471 ರನ್​ಗಳಿಸಿದ್ದಾರೆ.

ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?