AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್ ಟೀಮ್ ಇಂಡಿಯಾಗೆ ನಾಯಕನಾಗಬಾರದು ಎಂದ ಮಾಜಿ ಕ್ರಿಕೆಟಿಗ

Ajay Jadeja: ಭಾರತ ಕ್ರಿಕೆಟ್ ತಂಡದ ನಾಯಕನಾಗಲು ನಿಮ್ಮ ಸ್ವಂತ ಆಲೋಚನೆ ಮತ್ತು ನಾಯಕತ್ವದ ಸಾಮರ್ಥ್ಯವನ್ನು ಹೊಂದಿರಬೇಕು. ಆದರೆ ಕೆಎಲ್ ರಾಹುಲ್ ನಲ್ಲಿ ನಾನು ಈ ರೀತಿಯ ಯಾವುದೇ ಗುಣಗಳನ್ನೂ ನೋಡಿಲ್ಲ.

KL Rahul: ಕೆಎಲ್ ರಾಹುಲ್ ಟೀಮ್ ಇಂಡಿಯಾಗೆ ನಾಯಕನಾಗಬಾರದು ಎಂದ ಮಾಜಿ ಕ್ರಿಕೆಟಿಗ
KL Rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 04, 2021 | 3:38 PM

ಟೀಮ್ ಇಂಡಿಯಾ (Team India) ಮಾಜಿ ಬ್ಯಾಟ್ಸ್​ಮನ್ ಅಜಯ್ ಜಡೇಜಾ (Ajay Jadeja) ಪಂಜಾಬ್ ಕಿಂಗ್ಸ್ (Punjab Kings)​ ತಂಡದ ನಾಯಕ ಕೆಎಲ್ ರಾಹುಲ್ (KL Rahul) ಅವರ ನಾಯಕತ್ವದ ಗುಣಗಳ ಬಗ್ಗೆ ಪ್ರಶ್ನೆಗಳೆನ್ನೆತ್ತಿದ್ದಾರೆ. ಹೀಗೆ ಪ್ರಶ್ನೆಗಳನ್ನು ಎತ್ತಲು ಮುಖ್ಯ ಕಾರಣ ಕೆಎಲ್ ರಾಹುಲ್ ಟೀಮ್ ಇಂಡಿಯಾದ ಮುಂದಿನ ನಾಯಕ ಎಂದು ಬಿಂಬಿತವಾಗಿರುವುದು. ಈ ಬಗ್ಗೆ ಮಾತನಾಡಿರುವ ಜಡೇಜಾ, ಕೆಎಲ್​ಆರ್ ಅವರಿಗೆ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ. ಅವರು ಪಂಜಾಬ್ ಕಿಂಗ್ಸ್​ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದರೂ ಯಶಸ್ವಿಯಾಗಿಲ್ಲ ಎಂದಿದ್ದಾರೆ. ಇದುವರೆಗೆ ರಾಹುಲ್ ಐಪಿಎಲ್​ನಲ್ಲಿ 25 ಪಂದ್ಯಗಳಲ್ಲಿ ಪಂಜಾಬ್ ತಂಡವನ್ನು ಮುನ್ನಡೆಸಿದ್ದಾರೆ. ಅದರಲ್ಲಿ ಪಂಜಾಬ್ ಕಿಂಗ್ಸ್​ ಗೆದ್ದಿರುವುದು ಕೇವಲ 11 ಬಾರಿ ಮಾತ್ರ. ಅಂದರೆ 14 ಪಂದ್ಯಗಳಲ್ಲಿ ರಾಹುಲ್ ಮುನ್ನಡೆಸಿದ ತಂಡ ಸೋಲನುಭವಿಸಿದೆ. ಇದೀಗ ಆರ್​ಸಿಬಿ ವಿರುದ್ದ ಸೋಲುವ ಮೂಲಕ ಈ ಸೀಸನ್​ನಲ್ಲಿ 13 ಪಂದ್ಯಗಳಲ್ಲಿ ಪಂಜಾಬ್ 8 ರಲ್ಲಿ ಪರಾಜಯಗೊಂಡಿದೆ.

ರಾಹುಲ್ ನಾಯಕನಾಗಿ ಯಶಸ್ವಿಯಾಗುವುದು ಅನುಮಾನ. ಅದು ತುಂಬಾ ಶಾಂತ ಸ್ವಭಾವದಿಂದ ಮಾತನಾಡುತ್ತಾರೆ. ಅವರ ನಡವಳಿಕೆ ಬಹಳ ಮೃದುವಾಗಿರುತ್ತದೆ. ಈ ಗುಣಗಳು ನಿಮ್ಮನ್ನು ಆಟದಲ್ಲಿ ಉತ್ತಮ ಪ್ರದರ್ಶನ ನೀಡುವಂತೆ ಮಾಡಬಹುದು. ಆದರೆ ನಾಯಕನಾಗಿ, ಇದು ಪ್ರತಿ ಬಾರಿಯೂ ಕೆಲಸ ಮಾಡುವುದಿಲ್ಲ. ನೀವು ಕೆಎಲ್ ರಾಹುಲ್ ಅನ್ನು ನೋಡಿ, ಅವರು ಕಳೆದ ಎರಡು ವರ್ಷಗಳಿಂದ ಪಂಜಾಬ್ ಕಿಂಗ್ಸ್​ ತಂಡದ ನಾಯಕರಾಗಿದ್ದಾರೆ. ಆದರೆ ಅವರು ಎಂದಿಗೂ ನಾಯಕ ಎಂದು ನಾನು ಭಾವಿಸುವುದಿಲ್ಲ. ಆರ್​ಸಿಬಿ ವಿರುದ್ದದ ಪಂದ್ಯದಲ್ಲಿ ತಂಡದಲ್ಲಿ ಮಾಡಲಾದ ಬದಲಾವಣೆಗಳನ್ನೇ ನೋಡಿ, ಕೆಎಲ್ ರಾಹುಲ್ ಇದನ್ನು ಮಾಡಿದ್ದಾರೆ ಎಂದು ನೀವು ಭಾವಿಸುತ್ತೀರಾ ? ಎಂದು ಜಡೇಜಾ ಪ್ರಶ್ನಿಸಿದರು.

ಭಾರತ ಕ್ರಿಕೆಟ್ ತಂಡದ ನಾಯಕನಾಗಲು ನಿಮ್ಮ ಸ್ವಂತ ಆಲೋಚನೆ ಮತ್ತು ನಾಯಕತ್ವದ ಸಾಮರ್ಥ್ಯವನ್ನು ಹೊಂದಿರಬೇಕು. ಆದರೆ ಕೆಎಲ್ ರಾಹುಲ್ ನಲ್ಲಿ ನಾನು ಈ ರೀತಿಯ ಯಾವುದೇ ಗುಣಗಳನ್ನೂ ನೋಡಿಲ್ಲ. ಏಕೆಂದರೆ ಅವರು ತುಂಬಾ ಮೃದುವಾಗಿ ಮಾತನಾಡುತ್ತಾನೆ ಮತ್ತು ಎಲ್ಲವನ್ನೂ ಸಮತೋಲನಗೊಳಿಸಲು ಪ್ರಯತ್ನಿಸುತ್ತಾನೆ. ಮುಂದೊಂದು ದಿನ ರಾಹುಲ್ ಭಾರತ ತಂಡದ ನಾಯಕನಾದರೆ, ಅವರು ತಮ್ಮ ಜವಾಬ್ದಾರಿಯನ್ನು ದೀರ್ಘಕಾಲ ನಿರ್ವಹಿಸಬಹುದು ಎಂಬುದು ನಿಜ. ಏಕೆಂದರೆ ಎಲ್ಲವನ್ನೂ ಸರಿಹೊಂದಿಸುವ ವ್ಯಕ್ತಿ ಮಾತ್ರ ಈ ಹುದ್ದೆಯಲ್ಲಿ ದೀರ್ಘಕಾಲ ಉಳಿಯಬಹುದು. ಆದರೆ ಭಾರತೀಯ ನಾಯಕನಿಗೆ ತನ್ನದೇ ಆದ ಆಲೋಚನೆ ಇರಬೇಕು. ಏಕೆಂದರೆ ಐಪಿಎಲ್ ತಂಡದ ಕಮಾಂಡ್ ತೆಗೆದುಕೊಳ್ಳುವುದಕ್ಕೂ ಮತ್ತು ಭಾರತೀಯ ತಂಡದ ನಾಯಕತ್ವಕ್ಕೂ ದೊಡ್ಡ ವ್ಯತ್ಯಾಸವಿದೆ. ಹೀಗಾಗಿ ಟೀಮ್ ಇಂಡಿಯಾವನ್ನು ಮುನ್ನಡೆಸಲು ರಾಹುಲ್ ಸಮರ್ಥರಲ್ಲ ಎಂಬುದು ನನ್ನ ಅಭಿಪ್ರಾಯ ಎಂದು ಅಜಯ್ ಜಡೇಜಾ ಹೇಳಿದರು.

ಇದನ್ನೂ ಓದಿ: David Warner: SRH ತಂಡದಲ್ಲಿಲ್ಲ ಸ್ಥಾನ: ಪ್ರೇಕ್ಷಕನಾಗಿ ಕಾಣಿಸಿಕೊಂಡ ಡೇವಿಡ್ ವಾರ್ನರ್

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್

(Ajay Jadeja Questions KL Rahul’s Captaincy Skills)

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ