AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final, IND vs AUS: ಭಾರತಕ್ಕೆ ಕೈಕೊಟ್ಟ ಟಾಪ್ 4 ಬ್ಯಾಟರ್​ಗಳು: ಇನ್ನಿಂಗ್ಸ್ ಹಿನ್ನಡೆ ಭೀತಿಯಲ್ಲಿರುವ ಭಾರತಕ್ಕೆ ಅಜಿಂಕ್ಯ ರಹಾನೆ ಆಸರೆ

India vs Australia Final: ಭಾರತ ತನ್ನ ಪ್ರಥಮ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದೆ. 318 ರನ್​ಗಳ ಹಿನ್ನಡೆಯಲ್ಲಿರುವ ಟೀಮ್ ಇಂಡಿಯಾ ಇನ್ನಿಂಗ್ಸ್ ಹಿನ್ನಡೆಯ ಭೀತಿಯಲ್ಲಿದೆ.

WTC Final, IND vs AUS: ಭಾರತಕ್ಕೆ ಕೈಕೊಟ್ಟ ಟಾಪ್ 4 ಬ್ಯಾಟರ್​ಗಳು: ಇನ್ನಿಂಗ್ಸ್ ಹಿನ್ನಡೆ ಭೀತಿಯಲ್ಲಿರುವ ಭಾರತಕ್ಕೆ ಅಜಿಂಕ್ಯ ರಹಾನೆ ಆಸರೆ
KS Bharat and Ajinkya Rahane
Vinay Bhat
|

Updated on: Jun 09, 2023 | 7:31 AM

Share

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final 2023)​ ರೋಚಕತೆ ಸೃಷ್ಟಿಸಿದೆ. ಮೊದಲ ದಿನ ಬ್ಯಾಟಿಂಗ್​ನಲ್ಲಿ ಭರ್ಜರಿ ಯಶಸ್ಸು ಸಾಧಿಸಿದ್ದ ಆಸ್ಟ್ರೇಲಿಯಾನ್ನರು ದ್ವಿತೀಯ ದಿನ ಬೌಲಿಂಗ್​ನಲ್ಲಿ ಪಾರುಪತ್ಯ ಮೆರೆದರು. ಮೊದಲ ಇನ್ನಿಂಗ್ಸ್​ನಲ್ಲಿ ಕಾಂಗರೂ ಪಡೆ 469 ರನ್ ಕಲೆಹಾಕಿತು. ಆದರೆ, ಭಾರತ ತನ್ನ ಪ್ರಥಮ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದೆ. 318 ರನ್​ಗಳ ಹಿನ್ನಡೆಯಲ್ಲಿರುವ ಟೀಮ್ ಇಂಡಿಯಾ (Team India) ಇನ್ನಿಂಗ್ಸ್ ಹಿನ್ನಡೆಯ ಭೀತಿಯಲ್ಲಿದೆ.

ಮೊದಲ ದಿನದಾಟ ಹೇಗಿತ್ತು?:

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಕಾಂಗರೂ ಪಡೆಗೆ ಉತ್ತಮ ಆರಂಭ ಸಿಗಲಿಲ್ಲ. ಉಸ್ಮಾನ್ ಖ್ವಾಜಾ ಸೊನ್ನೆಗೆ ನಿರ್ಗಮಿಸಿದರು. ಮಾರ್ನಸ್ ಲಾಬುಶೇನ್ (26) ಹಾಗೂ ಡೇವಿಡ್ ವಾರ್ನರ್ (43) 69 ರನ್​ಗಳ ಜೊತೆಯಾಟ ಆಡಿದರಷ್ಟೆ. ನಂತರ ಶುರುವಾಗಿದ್ದು ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಆಟ. ಆಕ್ರಮಣಕಾರಿ ಆಟದ ಮೂಲಕ ಆರಂಭದಿಂದಲೇ ಭಾರತಕ್ಕೆ ಎಚ್ಚರಿಕೆ ನೀಡಿದ ಹೆಡ್ ಅವರನ್ನು ಕಟ್ಟಿಹಾಕಲು ರೋಹಿತ್ ನಡೆಸಿದ ಪ್ರಯತ್ನಗಳೆಲ್ಲಾ ವಿಫಲವಾದವು. ಹೆಡ್ ಅವರು ಈ ಪ್ರತಿಷ್ಠಿತ ಫೈನಲ್ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡರು.

ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 3 ವಿಕೆಟ್ ಕಳೆದುಕೊಂಡು 327 ರನ್ ಕಲೆಹಾಕಿ ದೊಡ್ಡ ಮೊತ್ತದ ಮುನ್ಸೂಚನೆ ನೀಡಿತ್ತು. ಹೆಡ್ (146) ಹಾಗೂ ಸ್ಟೀವ್ ಸ್ಮಿತ್ (95) ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು. ಇಂಡಿಯಾ ಪರ ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್​, ಮೊಹಮ್ಮದ್ ಶಮಿ ತಲಾ ಒಂದು ವಿಕೆಟ್​ ಪಡೆದುಕೊಂಡಿದ್ದರು.

ಇದನ್ನೂ ಓದಿ
Image
WTC Final 2023: ಭಾರತ ಗೆಲ್ಲಲು ಸಾಧ್ಯವೇ ಇಲ್ಲ: ರಿಕಿ ಪಾಂಟಿಂಗ್
Image
Rohit Sharma: ಮತ್ತೊಮ್ಮೆ ಕೈ ಕೊಟ್ಟ ರೋಹಿತ್ ಶರ್ಮಾ..!
Image
Steve Smith: ಭರ್ಜರಿ ಸೆಂಚುರಿಯೊಂದಿಗೆ 7 ದಾಖಲೆ ಬರೆದ ಸ್ಟೀವ್ ಸ್ಮಿತ್
Image
WTC Final 2023: 71/4..! ಆಸೀಸ್ ಬೌಲಿಂಗ್ ದಾಳಿಗೆ ಪತರುಗುಟ್ಟಿದ ವಿಶ್ವ ಕ್ರಿಕೆಟ್​ನ ಸೂಪರ್ ಸ್ಟಾರ್ಸ್..!​

WTC Final 2023: ಮಿಯಾ ಮ್ಯಾಜಿಕ್: ಮಿಂಚಿನ ದಾಳಿಯೊಂದಿಗೆ ವಿಶೇಷ ಸಾಧನೆ ಮಾಡಿದ ಸಿರಾಜ್

ದ್ವಿತೀಯ ದಿನದಾಟ ಹೇಗಿತ್ತು?:

ಬೃಹತ್ ಮೊತ್ತ ಗಳಿಸುವ ಗುರಿಯೊಂದಿಗೆ 2ನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯ ಮೊದಲ ದಿನದ ಮೊತ್ತಕ್ಕೆ 142 ರನ್ ಸೇರಿಸುವಷ್ಟರಲ್ಲಿ ಉಳಿದ 7 ವಿಕೆಟ್‌ಗಳನ್ನು ಕಳೆದುಕೊಂಡಿತು. 146 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ಹೆಡ್ 163 ರನ್ ಗಳಿಸಿ ಸಿರಾಜ್‌ಗೆ ವಿಕೆಟ್ ಒಪ್ಪಿಸಿದರು. ಸ್ಮಿತ್ ಆಟ 121 ರನ್​ಗೆ ಅಂತ್ಯವಾಯಿತು. ಈ ಇಬ್ಬರು ಔಟಾದ ನಂತರ ಅಲೆಕ್ಸ್ ಕ್ಯಾರಿ 48 ರನ್ ಹಾಗೂ ನಾಯಕ ಪ್ಯಾಟ್ ಕಮಿನ್ಸ್ 9 ರನ್ ಗಳಿಸಿದರು. ನಥಾನ್ ಲಿಯೊನ್‌ 9 ರನ್​ಗೆ ನಿರ್ಗಮಿಸಿದರು. ಅಂತಿಮವಾಗಿ ಆಸೀಸ್ ಮೊದಲ ಇನಿಂಗ್ಸ್‌ನಲ್ಲಿ 469 ರನ್ಸ್​ಗೆ ಆಲೌಟ್ ಆಯಿತು. ಭಾರತದ ಪರ ಸಿರಾಜ್ 4 ವಿಕೆಟ್ ಕಿತ್ತರೆ ಶಾರ್ದೂಲ್ ಠಾಕೂರ್ ಹಾಗೂ ಶಮಿ ತಲಾ 2ವಿಕೆಟ್‌ಗಳನ್ನು ಪಡೆದರು.

ಭಾರತದ ಬ್ಯಾಟಿಂಗ್ ವೈಫಲ್ಯ:

ಭಾರತ ಪರ ನಾಯಕ ರೋಹಿತ್​ ಶರ್ಮಾ ಹಾಗೂ ಶುಭ್​ಮನ್​ ಗಿಲ್​ ಮೊದಲ ಇನ್ನಿಂಗ್ಸ್​ ಆರಂಭಿಸಿದರು. ಆದರೆ, ಇಬ್ಬರೂ ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರು. ನಾಯಕ ರೋಹಿತ್ ಕೇವಲ 15 ರನ್​ಗಳಿಗೆ ಪ್ಯಾಟ್ ಕಮ್ಮಿನ್ಸ್ ಎಸತೆದಲ್ಲಿ ಎಲ್​ಬಿ ಬಲೆಗೆ ಬಿದ್ದರೆ ಗಿಲ್ ಆಟ 13 ರನ್​ಗಳಿಗೆ ಅಂತ್ಯವಾಯಿತು. ಬಳಿಕ ಕ್ರೀಸ್​ಗೆ ಬಂದ ಚೇತೇಶ್ವರ ಪೂಜಾರ (14) ಹಾಗೂ ವಿರಾಟ್​ ಕೊಹ್ಲಿ (14) ಕೂಡ ನಿರಾಸೆ ಮೂಡಿಸಿದರು. ಇದರ ನಡುವೆ ಐದನೇ ವಿಕೆಟ್​ಗೆ ಅಜಿಂಕ್ಯ ರಹಾನೆ ಹಾಗೂ ರವೀಂದ್ರ ಜಡೇಜಾ ಉತ್ತಮ ಇನ್ನಿಂಗ್​ ಕಟ್ಟಿ ತಂಡಕ್ಕೆ ನೆರವಾದರು.

ರಹಾನೆ ಮತ್ತು ಜಡೇಜಾ ಜೋಡಿ 71 ರನ್​ಗಳ ಜೊತೆಯಾಟ ಆಡಿದರು. ಆದರೆ, ಅರ್ಧ ಶತಕದ ಹೊಸ್ತಿಲಿನಲ್ಲಿ ಎಡವಿದ ಜಡೇಜಾ 51 ಬಾಲ್​ಗಳಲ್ಲಿ 7 ಬೌಂಡರಿ ಮತ್ತು ಸಿಕ್ಸರ್​ ಸಮೇತ 48 ರನ್​ಗೆ ನಿರ್ಗಮಿಸಿದರು. ಮತ್ತೊಂದೆಡೆ, 29 ರನ್​ ಗಳಿಸಿರುವ ರಹಾನೆ ಹಾಗೂ 5 ರನ್​ ಗಳಿಸಿರುವ ಶ್ರೀಕರ್ ಭರತ್ ಇಂದು ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದ್ದು 318 ರನ್​ಗಳ ಹಿನ್ನಡೆಯಲ್ಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್