Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS vs KKR: ದುಃಖ ದುಮ್ಮಾನ… ಎಲ್ಲವೂ ನಂದೇ ತಪ್ಪು: ಅಜಿಂಕ್ಯ ರಹಾನೆ ಬೇಸರದ ನುಡಿ

IPL 2025 PBKS vs KKR: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು 111 ರನ್​ಗಳಿಸಿ ಆಲೌಟ್ ಆಯಿತು. ಈ ಸುಲಭ ಗುರಿ ಬೆನ್ನತ್ತಿದ ಅಜಿಂಕ್ಯ ರಹಾನೆ ಮುಂದಾಳತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಕೇವಲ 95 ರನ್​ಗಳಿಗೆ ಆಲೌಟ್ ಆಗಿದೆ.

PBKS vs KKR: ದುಃಖ ದುಮ್ಮಾನ... ಎಲ್ಲವೂ ನಂದೇ ತಪ್ಪು: ಅಜಿಂಕ್ಯ ರಹಾನೆ ಬೇಸರದ ನುಡಿ
Ajinkya Rahane
Follow us
ಝಾಹಿರ್ ಯೂಸುಫ್
|

Updated on: Apr 16, 2025 | 7:57 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಅತೀ ಕಡಿಮೆ ಸ್ಕೋರ್​ ಡಿಫೆಂಡ್ ಮಾಡಿದ ದಾಖಲೆಯೊಂದನ್ನು ಪಂಜಾಬ್ ಕಿಂಗ್ಸ್ (PBKS) ತಂಡ ಬರೆದಿದೆ. ಅದು ಸಹ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ಎಂಬುದು ವಿಶೇಷ. ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಆದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಅನುಭವಿ ಬೌಲರ್​ಗಳ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಪಂಜಾಬ್ ಕಿಂಗ್ಸ್ ಬ್ಯಾಟರ್​ಗಳು ಪರದಾಡಿದರು. ಪರಿಣಾಮ 15.3 ಓವರ್​ಗಳಲ್ಲಿ 111 ರನ್​ಗಳಿಸಿ ಪಂಜಾಬ್ ಕಿಂಗ್ಸ್ ತಂಡವು ಆಲೌಟ್ ಆಯಿತು.

112 ರನ್​ಗಳ ಸುಲಭ ಗುರಿ ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕಥೆ ಕೂಡ ಭಿನ್ನವಾಗಿರಲಿಲ್ಲ. ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಪರೇಡ್ ನಡೆಸಿದ ಕೆಕೆಆರ್​ ಬ್ಯಾಟರ್​ಗಳು 15.1 ಓವರ್​ಗಳಲ್ಲಿ 95 ರನ್​ಗಳಿಗೆ ಆಲೌಟ್ ಆಗಿ 16 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಈ ಸೋಲಿನ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಶನ್​ನಲ್ಲಿ ಕಾಣಿಸಿಕೊಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯ ರಹಾನೆ, ದುಃಖ ದುಮ್ಮಾನದೊಂದಿಗೆ ಮಾತನಾಡಲು ತಡಬಡಿಸಿದರು. ಸೋಲಿನ ಬಗ್ಗೆ ಕೇಳಿದಾಗ, ರಹಾನೆಗೆ ಕೆಲ ಕ್ಷಣಗಳ ಕಾಲ ಮಾತೇ ಬರಲಿಲ್ಲ.

ಆ ಬಳಿಕ ಮಾತು ಶುರು ಮಾಡಿದ ರಹಾನೆ, ವಿವರಿಸಲು ಏನೂ ಇಲ್ಲ, ಏನಾಯಿತು ಎಂದು ನಾವೆಲ್ಲರೂ ನೋಡಿದ್ದೇವೆ. ತಂಡದ ಪ್ರದರ್ಶನದಿಂದ ನಿಜಕ್ಕೂ ತುಂಬಾ ನಿರಾಶೆಯಾಗಿದೆ. ನಾನು ಕೆಟ್ಟ ಆಡವಾಡಿದ್ದೇನೆ. ಹೀಗಾಗಿ ಸೋಲಿನ ಸಂಪೂರ್ಣ ಹೊಣೆಯನ್ನು ನಾನೇ ಹೊರುತ್ತೇನೆ ಎಂದರು.

ಏಕೆಂದರೆ ನಾನು ವಿಕೆಟ್ ಕಳೆದುಕೊಂಡ  ಬಳಿಕ ಕೆಕೆಆರ್ ತಂಡದ ಪತನ ಶುರುವಾಗಿತ್ತು. ಎಲ್​ಬಿಡಬ್ಲ್ಯೂ ಆಗಿದ್ದರೂ, ನಾನು ರಿವ್ಯೂ ತೆಗೆದುಕೊಂಡಿರಲಿಲ್ಲ. ಆ ಸಮಯದಲ್ಲಿ ಯಾವುದೇ ಅಪಾಯವನ್ನು ತೆಗೆದುಕೊಳ್ಳಲು ನಾನು ಬಯಸಲಿಲ್ಲ.  ಅಲ್ಲದೆ ನನಗೂ ಖಚಿತತೆವಿರಲಿಲ್ಲ, ಆದ್ದರಿಂದ ವಿಮರ್ಶೆಯನ್ನು ತೆಗೆದುಕೊಳ್ಳದಿರಲು ನಿರ್ಧರಿಸಿದೆ ಎಂದು ತಿಳಿಸಿದರು.

ಈ ಪಂದ್ಯದಲ್ಲಿ  ಅಜಿಂಕ್ಯ ರಹಾನೆ ಅವರನ್ನು ಯುಜ್ವೇಂದ್ರ ಚಾಹಲ್ ಎಲ್​ಬಿಡಬ್ಲ್ಯೂ ಮಾಡಿದ್ದರು.  ಆದರೆ ಫೀಲ್ಡ್​ ಅಂಪೈರ್ ತೀರ್ಪಿನ ವಿರುದ್ಧ ರಿವ್ಯೂ ತೆಗೆದುಕೊಳ್ಳದೇ ರಹಾನೆ ಹೊರ ನಡೆದಿದ್ದರು. ಆ ಬಳಿಕ ತೋರಿಸಿದ ರೀಪ್ಲೆನಲ್ಲಿ ಚೆಂಡು ಆಫ್ ಸ್ಟಂಪ್‌ನ ಹೊರಗೆ ಹೋಗುತ್ತಿರುವುದು ಕಂಡುಬಂದಿತು.

ಚೆಂಡು ವಿಕೆಟ್ ಹೊರಗೆ ಹೋಗುತ್ತದೆಯೇ ಎಂಬುದು ತನಗೆ ಯಾವುದೇ ಖಚಿತತೆ ಇರಲಿಲ್ಲ. ಹೀಗಾಗಿ ರಿವ್ಯೂ ತೆಗೆದುಕೊಳ್ಳದೇ ಹೊರ ನಡೆದೆ. ನಾನು ಔಟಾದ ಬಳಿಕ ಕೆಕೆಆರ್ ಸತತವಾಗಿ ವಿಕೆಟ್ ಕಳೆದುಕೊಂಡಿತು. ಹೀಗಾಗಿ ಈ ಸೋಲಿನ ಸಂಪೂರ್ಣ ಹೊಣೆಯನ್ನು ನಾನು ಹೊರುವುದಾಗಿ ರಹಾನೆ ತಿಳಿಸಿದ್ದಾರೆ.

ಇನ್ನು ಸುಲಭ ಗುರಿಯಾಗಿದ್ದರೂ, ನಮ್ಮ ಸೋಲಿಗೆ ಕಳಪೆ ಬ್ಯಾಟಿಂಗ್ ಕಾರಣ. ಪಿಚ್ ಸುಲಭವಾಗಿರಲಿಲ್ಲ ನಿಜ. ಇದಾಗ್ಯೂ ನಾವು 111 ರನ್‌ಗಳ ಗುರಿಯನ್ನು ಸುಲಭವಾಗಿ ಚೇಸ್​ ಮಾಡಬಹುದಿತ್ತು. ನಮ್ಮ ಬ್ಯಾಟರ್​ಗಳು ತುಂಬಾ ಕಳಪೆ ಪ್ರದರ್ಶನ ನೀಡಿದ್ದಾರೆ. ಪಂಜಾಬ್‌ನಂತಹ ಬಲಿಷ್ಠ ಬ್ಯಾಟಿಂಗ್ ಘಟಕದ ವಿರುದ್ಧ ನಮ್ಮ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದರು.

ಇದನ್ನೂ ಓದಿ: ರಣರೋಚಕ ಪಂದ್ಯದಲ್ಲಿ ರೋಚಕ ಜಯ: ಇತಿಹಾಸ ನಿರ್ಮಿಸಿದ ಪಂಜಾಬ್ ಕಿಂಗ್ಸ್​

ನಾವು ಬ್ಯಾಟಿಂಗ್‌ನಲ್ಲಿ ನಿರ್ಲಕ್ಷ್ಯ ತೋರಿದ್ದೇವೆ. ಇದರಿಂದಾಗಿ 111 ರನ್​ಗಳ ಗುರಿ ಕೂಡ ಬೆನ್ನಟ್ಟಲು ಸಾಧ್ಯವಾಗಿಲ್ಲ. ಹೀಗಾಗಿ ಬ್ಯಾಟ್ಸ್​ಮನ್​ಗಳ ಕಳಪೆಯಾಟದಿಂದಾಗಿಯೇ ನಾವು ಸೋತಿದ್ದೇವೆ ಎಂದು ಅಜಿಂಕ್ಯ ರಹಾನೆ ಹೇಳಿದ್ದಾರೆ.

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ