AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ajinkya Rahane: ಬೆಂಗಳೂರಿನಲ್ಲಿ ಭರ್ಜರಿ ಶತಕ ಸಿಡಿಸಿದ ಅಜಿಂಕ್ಯ ರಹಾನೆ

Ajinkya Rahane: ಅಜಿಂಕ್ಯ ರಹಾನೆ ಅವರು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕೆಎಸ್‌ಸಿಎ ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ 103 ರನ್‌ಗಳ ಅದ್ಭುತ ಶತಕ ಗಳಿಸಿದ್ದಾರೆ. ಇತ್ತೀಚೆಗೆ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದ ರಹಾನೆ ಈ ಶತಕದ ಮೂಲಕ ರಣಜಿ ಟ್ರೋಫಿಗೆ ತಯಾರಿ ನಡೆಸುತ್ತಿದ್ದಾರೆ. ಇದು ಅವರ ಟೀಂ ಇಂಡಿಯಾಕ್ಕೆ ಮರಳುವ ಆಸೆಗೆ ಬಲ ತುಂಬಿದೆ. ಪೂಜಾರರ ನಿವೃತ್ತಿಯ ನಂತರ ರಹಾನೆ ಅವರ ಭವಿಷ್ಯ ಕುರಿತು ಚರ್ಚೆಗಳು ನಡೆಯುತ್ತಿವೆ.

Ajinkya Rahane: ಬೆಂಗಳೂರಿನಲ್ಲಿ ಭರ್ಜರಿ ಶತಕ ಸಿಡಿಸಿದ ಅಜಿಂಕ್ಯ ರಹಾನೆ
Ajinkya Rahane
ಪೃಥ್ವಿಶಂಕರ
|

Updated on: Sep 19, 2025 | 8:32 PM

Share

ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ (Ajinkya Rahane) ರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದಿವೆ. ಆದಾಗ್ಯೂ ದೇಶಿ ಕ್ರಿಕೆಟ್​ನಲ್ಲಿ ತನ್ನ ಹೋರಾಟ ಮುಂದುವರೆಸಿರುವ ರಹಾನೆ ಉತ್ತಮ ಪ್ರದರ್ಶನದ ಮೂಲಕ ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಇದೀಗ ಅದಕ್ಕೆ ಪೂರಕವೆಂಬಂತೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೆಎಸ್‌ಸಿಎ ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಅಜಿಂಕ್ಯ ರಹಾನೆ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

103 ರನ್‌ ಬಾರಿಸಿದ ರಹಾನೆ

ಮುಂಬೈ ಹಾಗೂ ಕೆಎಸ್‌ಸಿಎ ಕಾರ್ಯದರ್ಶಿ ಇಲೆವೆನ್ ತಂಡಗಳ ನಡುವೆ ನಡೆದ ಈ ಪಂದ್ಯದಲ್ಲಿ ಮುಂಬೈ ತಂಡ ಸೋಲಿನ ಸುಳಿಯಲ್ಲಿತ್ತು. ಆದರೆ ಅಜಿಂಕ್ಯ ರಹಾನೆ ಅವರ 103 ರನ್‌ಗಳ ಇನ್ನಿಂಗ್ಸ್ ಪಂದ್ಯವನ್ನು ಡ್ರಾ ಮಾಡಲು ಸಹಾಯ ಮಾಡಿತು. ರಹಾನೆ ತಮ್ಮ ಇನ್ನಿಂಗ್ಸ್‌ನಲ್ಲಿ 12 ಬೌಂಡರಿಗಳು ಮತ್ತು ಎರಡು ಅದ್ಭುತ ಸಿಕ್ಸರ್‌ಗಳನ್ನು ಬಾರಿಸಿದರು. ಕುತೂಹಲಕಾರಿಯಾಗಿ, ರಹಾನೆ ಅಜೇಯರಾಗಿ ಉಳಿದರು. ಆದಾಗ್ಯೂ ಶತಕ ಗಳಿಸಿದ ನಂತರ ಅವರು ಗಾಯಗೊಂಡು ನಿವೃತ್ತರಾದರು.

ಉಳಿದಂತೆ ಮುಂಬೈ ಪರ ಪ್ರಣವ್ ಕೇಲಾ 116 ಎಸೆತಗಳಲ್ಲಿ 46 ರನ್ ಗಳಿಸಿದರೆ, ಮುಶೀರ್ ಖಾನ್ ಕೂಡ 43 ರನ್ ಬಾರಿಸಿದರು. ಸುವೇದ್ ಪಾರ್ಕರ್ ಮತ್ತು ಹಾರ್ದಿಕ್ ಟೊಮಾರೆ ಕೂಡ ಮುಂಬೈ ಪಂದ್ಯವನ್ನು ಡ್ರಾ ಮಾಡಲು ಸಹಾಯ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಫಾರ್ಮ್​ಗೆ ಮರಳಿದ ರಹಾನೆ

37 ವರ್ಷದ ರಹಾನೆ ಸ್ವಲ್ಪ ಸಮಯದಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದರು. ಅಸ್ಸಾಂ ವಿರುದ್ಧದ ಮೊದಲ ಪಂದ್ಯದಲ್ಲಿ 66 ರನ್ ಬಾರಿಸಿದ್ದ ರಹಾನೆ ಇದೀಗ ಶತಕ ಬಾರಿಸುವುದರೊಂದಿಗೆ ಫಾರ್ಮ್‌ ಕಂಡುಕೊಂಡಿದ್ದಾರೆ. ರಣಜಿ ಟ್ರೋಫಿಯ ಹೊಸ ಸೀಸನ್ ಅಕ್ಟೋಬರ್‌ನಲ್ಲಿ ಪ್ರಾರಂಭವಾಗುವುದರಿಂದ ರಹಾನೆ ಅವರ ಫಾರ್ಮ್ ಕೂಡ ನಿರ್ಣಾಯಕವಾಗಿದೆ. ಮುಂಬೈ ತಂಡವು ಅಕ್ಟೋಬರ್ 15 ರಂದು ಶ್ರೀನಗರದಲ್ಲಿ ಜಮ್ಮು ಮತ್ತು ಕಾಶ್ಮೀರ ವಿರುದ್ಧ ತನ್ನ ರಣಜಿ ಟ್ರೋಫಿ ಅಭಿಯಾನವನ್ನು ಪ್ರಾರಂಭಿಸುತ್ತದೆ.

ಮುಂಬೈ ತಂಡದ ನಾಯಕತ್ವ ತ್ಯಜಿಸಿದ ಅಜಿಂಕ್ಯ ರಹಾನೆ

ಪೂಜಾರ ನಿವೃತ್ತಿ, ಈಗ ರಹಾನೆ ಸರದಿ?

ಚೇತೇಶ್ವರ ಪೂಜಾರ ಇತ್ತೀಚೆಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದರು. ಇದೀಗ ಅಜಿಂಕ್ಯ ರಹಾನೆ ಕೂಡ ಶೀಘ್ರದಲ್ಲೇ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ. ಇದು ರಹಾನೆ ಅವರ ಕೊನೆಯ ಪ್ರಥಮ ದರ್ಜೆ ಸೀಸನ್ ಆಗಿರಬಹುದು. ರಹಾನೆ ಪ್ರಸ್ತುತ ಐಪಿಎಲ್‌ನಲ್ಲಿಯೂ ಸಕ್ರಿಯರಾಗಿದ್ದಾರೆ. ಕಳೆದ ಸೀಸನ್‌ನಲ್ಲಿ ಅವರು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕತ್ವ ವಹಿಸಿದ್ದರು, ಆದರೆ ಅವರ ನಾಯಕತ್ವದಲ್ಲಿ ಕೆಕೆಆರ್ ಪ್ಲೇಆಫ್ ತಲುಪಲು ವಿಫಲವಾಯಿತು. ಮುಂದಿನ ಸೀಸನ್‌ನಲ್ಲಿ ರಹಾನೆ ಕೆಕೆಆರ್‌ನ ನಾಯಕನಾಗಿ ಮುಂದುವರಿಯುತ್ತಾರಾ ಎಂಬುದು ಪ್ರಮುಖ ಪ್ರಶ್ನೆಯಾಗಿಯೇ ಉಳಿದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ