AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೇಯಸ್ ಅಯ್ಯರ್ ಯಾಕಿಲ್ಲ? ಇದು ಅವರ ತಪ್ಪಲ್ಲ, ನಮ್ಮ ತಪ್ಪೂ ಅಲ್ಲ..!

Asia Cup 2025: ಏಷ್ಯಾಕಪ್ ಟಿ20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ್, ಶ್ರೀಲಂಕಾ, ಅಫ್ಘಾನಿಸ್ತಾನ್, ಹಾಂಗ್​ಕಾಂಗ್, ಬಾಂಗ್ಲಾದೇಶ್ ಒಮಾನ್ ಹಾಗೂ ಯುಇಎ ತಂಡಗಳು ಕಣಕ್ಕಿಳಿಯಲಿವೆ. ಟೀಮ್ ಇಂಡಿಯಾ ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ಕಣಕ್ಕಿಳಿಯುವ ಮೂಲಕ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.

ಶ್ರೇಯಸ್ ಅಯ್ಯರ್ ಯಾಕಿಲ್ಲ? ಇದು ಅವರ ತಪ್ಪಲ್ಲ, ನಮ್ಮ ತಪ್ಪೂ ಅಲ್ಲ..!
Shreyas Iyer
ಝಾಹಿರ್ ಯೂಸುಫ್
|

Updated on: Aug 20, 2025 | 12:32 PM

Share

ಏಷ್ಯಾಕಪ್​ಗಾಗಿ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಶ್ರೇಯಸ್ ಅಯ್ಯರ್​ಗೆ (Shreyas Iyer) ಸ್ಥಾನ ನೀಡಲಾಗಿಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರೂ ಅಯ್ಯರ್ ಅವರನ್ನು ಆಯ್ಕೆಗೆ ಪರಿಗಣಿಸದಿರುವ ಬಗ್ಗೆ ಪ್ರಶ್ನೆಗಳೆದ್ದಿವೆ. ಇದೇ ಪ್ರಶ್ನೆಯನ್ನು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರ ಮುಂದಿಡಲಾಗಿದೆ.

ಏಷ್ಯಾಕಪ್​ಗೆ ಭಾರತ ತಂಡದ ಘೋಷಣೆಯಾದ ಬೆನ್ನಲ್ಲೇ, ಶ್ರೇಯಸ್ ಅಯ್ಯರ್ ಅವರನ್ನು ಯಾಕೆ ಆಯ್ಕೆ ಮಾಡಲಾಗಿಲ್ಲ? ಎಂಬ ಪ್ರಶ್ನಿಸಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ತೂರಿಬಂದ ಈ ಪ್ರಶ್ನೆಗೆ ಉತ್ತರಿಸಿದ ಅಜಿತ್ ಅಗರ್ಕರ್, ಇದು ಅವರ ತಪ್ಪಲ್ಲ, ನಮ್ಮ ತಪ್ಪೂ ಅಲ್ಲ. ಅವರಿಗೆ ಅವಕಾಶ ಸಿಗದಿರುವುದು ದುರಾದೃಷ್ಟ ಅಷ್ಟೇ ಎಂದರು.

ಏಕೆಂದರೆ ಶ್ರೇಯಸ್ ಅಯ್ಯರ್​ಗಾಗಿ ಯಾರನ್ನು ಕೈ ಬಿಡಬೇಕು? ಯಾರ ಸ್ಥಾನದಲ್ಲಿ ಆಯ್ಕೆ ಮಾಡಬೇಕು ಎಂಬ ಪ್ರಶ್ನೆ ಮೂಡುತ್ತದೆ. ನಾವು 15 ಸದಸ್ಯರುಗಳನ್ನು ಮಾತ್ರ ಆಯ್ಕೆ ಮಾಡಬಹುದು. ಇದರಿಂದಾಗಿ ಶ್ರೇಯಸ್ ಅಯ್ಯರ್​ಗೆ ಅವಕಾಶ ಸಿಕ್ಕಿಲ್ಲ. ಇದರಲ್ಲಿ ಅವರ ತಪ್ಪು ಏನೂ ಇಲ್ಲ. ಈ ಸಮಯದಲ್ಲಿ ಅವರು ತಮ್ಮ ಅವಕಾಶಕ್ಕಾಗಿ ಕಾಯಬೇಕಾಗುತ್ತದೆ ಎಂದು ಅಜಿತ್ ಅಗರ್ಕರ್ ಹೇಳಿದ್ದಾರೆ.

ಅಂದರೆ ಶ್ರೇಯಸ್ ಅಯ್ಯರ್ ಟಾಪ್-5 ನಲ್ಲಿ ಕಣಕ್ಕಿಳಿಯುವ ದಾಂಡಿಗ. ಇತ್ತ ಟೀಮ್ ಇಂಡಿಯಾದಲ್ಲಿ ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಕಾಣಿಸಿಕೊಂಡಿದ್ದಾರೆ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ಇದಾದ ಬಳಿಕ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಕಣಕ್ಕಿಳಿಯಲಿದ್ದಾರೆ.

ಇನ್ನು ಫಿನಿಶರ್ ಪಾತ್ರದಲ್ಲಿ ಕಣಕ್ಕಿಳಿಯಲು ರಿಂಕು ಸಿಂಗ್ ಹಾಗೂ ಶಿವಂ ದುಬೆ ನಡುವೆ ಪೈಪೋಟಿ ಇದೆ. ಅಂದರೆ 7 ಸ್ಥಾನಗಳು ಆಲ್​ ರೆಡಿ ಫಿಕ್ಸ್ ಆಗಿರುವ ಕಾರಣ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂಬ ಸಮಾಜಾಯಿಷಿಯನ್ನು ಅಜಿತ್ ಅಗರ್ಕರ್ ಮುಂದಿಟ್ಟಿದ್ದಾರೆ.

ಇದರ ನಡುವೆ ತಿಲಕ್ ವರ್ಮಾ ಅವರ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಬಹುದಿತ್ತಲ್ವಾ ಎಂಬ ಪ್ರಶ್ನೆಯನ್ನು ಕೆಲವರು ಮುಂದಿಟ್ಟಿದ್ದಾರೆ. ಆದರೆ ಈ ಪ್ರಶ್ನೆಗೆ ಸೌತ್ ಆಫ್ರಿಕಾ ವಿರುದ್ಧ ತಿಲಕ್ ವರ್ಮಾ ಆಡಿದ ಇನಿಂಗ್ಸ್​ಗಳೇ ಉತ್ತರ.

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ತಿಲಕ್ ಬ್ಯಾಕ್ ಟು ಬ್ಯಾಕ್ 2 ಸೆಂಚುರಿ ಸಿಡಿಸಿ ಒಟ್ಟು 280 ರನ್​ಗಳನ್ನು ಕಲೆಹಾಕಿದ್ದರು. ಹೀಗಾಗಿಯೇ ಶ್ರೇಯಸ್ ಅಯ್ಯರ್ ಅವರ ಬದಲಿಗೆ ತಿಲಕ್ ವರ್ಮಾ ಅವರನ್ನು ಮೂರನೇ ಕ್ರಮಾಂಕಕ್ಕೆ ಪರಿಗಣಿಸಲಾಗಿದೆ. ಇತ್ತ ಸ್ಲಾಟ್​ಗಳು ಫುಲ್ ಫಿಲ್ ಆದ ಕಾರಣ ಶ್ರೇಯಸ್ ಅಯ್ಯರ್ ಅವಕಾಶವಂಚಿತರಾಗಿದ್ದಾರೆ.

ಏಷ್ಯಾ ಕಪ್​ಗೆ ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)ಅಭಿಷೇಕ್ ಶರ್ಮಾತಿಲಕ್ ವರ್ಮಾಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾಅರ್ಷದೀಪ್ ಸಿಂಗ್ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

ಇದನ್ನೂ ಓದಿ: ಆಸ್ಟ್ರೇಲಿಯಾ ಪಡೆಯ ಗರ್ವಭಂಗ: 34 ವರ್ಷಗಳ ಬಳಿಕ ಅತ್ಯಂತ ಹೀನಾಯ ಸೋಲು

ಮೀಸಲು ಆಟಗಾರರು: ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ