AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akash deep Song: ಆಕಾಶ್ ದೀಪ್.. ಇಂಗ್ಲೆಂಡ್ ಔಟ್..: ಬರ್ಮಿಂಗ್ಹ್ಯಾಮ್ ಬೀದಿಗಳಲ್ಲಿ ಭಾರತೀಯ ಬೌಲರ್ ಕುರಿತು ಹಾಡು

India vs England 2nd Test: ಆಕಾಶ್ ದೀಪ್ ಸಿಂಗ್ ಅವರ ಮಾರಕ ಬೌಲಿಂಗ್‌ನಿಂದಾಗಿ ಇಂಗ್ಲೆಂಡ್ ಅಭಿಮಾನಿಯೊಬ್ಬರು ಬರ್ಮಿಂಗ್ಹ್ಯಾಮ್‌ನ ಬೀದಿಗಳಲ್ಲಿ ಗಿಟಾರ್‌ ಹಿಡಿದುಕೊಂಡು ಅವರಿಗಾಗಿ ಹಾಡನ್ನು ರಚಿಸಿದ್ದಾರೆ, ಅದರ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ಗಿಟಾರ್ ನುಡಿಸುತ್ತಾ ‘ಓ ಆಕಾಶ್ ದೀಪ್, ನೀವು ಇಂಗ್ಲೆಂಡ್ ಅನ್ನು ಔಟ್ ಮಾಡಿದ್ದೀರಿ' ಎಂದು ಹೇಳುತ್ತಿದ್ದಾರೆ.

Akash deep Song: ಆಕಾಶ್ ದೀಪ್.. ಇಂಗ್ಲೆಂಡ್ ಔಟ್..: ಬರ್ಮಿಂಗ್ಹ್ಯಾಮ್ ಬೀದಿಗಳಲ್ಲಿ ಭಾರತೀಯ ಬೌಲರ್ ಕುರಿತು ಹಾಡು
Akash Deep Song
ಪ್ರೀತಿ ಭಟ್​, ಗುಣವಂತೆ
| Updated By: Vinay Bhat|

Updated on:Jul 16, 2025 | 6:16 PM

Share

ಬೆಂಗಳೂರು (ಜು. 07): ಇಂಗ್ಲೆಂಡ್ ವಿರುದ್ಧದ ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯವನ್ನು ಭಾರತ ತಂಡ 336 ರನ್‌ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿತು. ಟೀಮ್ ಇಂಡಿಯಾದ ಈ ಗೆಲುವಿನಲ್ಲಿ ವೇಗದ ಬೌಲರ್ ಆಕಾಶ್ ದೀಪ್ (Akash Deep) ಪ್ರಮುಖ ಪಾತ್ರವಹಿಸಿದರು. ಆಕಾಶ್ ದೀಪ್ ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 10 ವಿಕೆಟ್‌ಗಳನ್ನು ಕಬಳಿಸಿ ಮಿಂಚಿದರು. ಇಂಗ್ಲಿಷ್ ನೆಲದಲ್ಲಿ ಟೆಸ್ಟ್ ಪಂದ್ಯವೊಂದರಲ್ಲಿ 10 ವಿಕೆಟ್‌ಗಳನ್ನು ಪಡೆದ ಎರಡನೇ ಭಾರತೀಯ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇಂತಹ ಪರಿಸ್ಥಿತಿಯಲ್ಲಿ, ಎಡ್ಜ್‌ಬಾಸ್ಟನ್‌ನಲ್ಲಿ ಆಕಾಶ್ ದೀಪ್ ಸಿಂಗ್ ಇಂಗ್ಲೆಂಡ್‌ಗೆ ನೀಡಿದ ಗಾಯವು ದೀರ್ಘಕಾಲ ನೆನಪಿನಲ್ಲಿ ಉಳಿಯುತ್ತದೆ ಎಂಬುದು ಸ್ಪಷ್ಟ.

ಆಕಾಶ್ ದೀಪ್ ಸಿಂಗ್ ಅವರ ಮಾರಕ ಬೌಲಿಂಗ್‌ನಿಂದಾಗಿ ಇಂಗ್ಲೆಂಡ್ ಅಭಿಮಾನಿಯೊಬ್ಬರು ಬರ್ಮಿಂಗ್ಹ್ಯಾಮ್‌ನ ಬೀದಿಗಳಲ್ಲಿ ಗಿಟಾರ್‌ ಹಿಡಿದುಕೊಂಡು ಅವರಿಗಾಗಿ ಹಾಡನ್ನು ರಚಿಸಿದ್ದಾರೆ, ಅದರ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ಗಿಟಾರ್ ನುಡಿಸುತ್ತಾ ‘ಓ ಆಕಾಶ್ ದೀಪ್, ನೀವು ಇಂಗ್ಲೆಂಡ್ ಅನ್ನು ಔಟ್ ಮಾಡಿದ್ದೀರಿ’ ಎಂದು ಹೇಳುತ್ತಿದ್ದಾರೆ. ಇದಲ್ಲದೆ, ಹಾದುಹೋಗುವ ಜನರು ಈ ಹಾಡನ್ನು ಕೇಳಿ ನಗುತ್ತಿದ್ದಾರೆ.

ಇದನ್ನೂ ಓದಿ
Image
3ನೇ ಟೆಸ್ಟ್​ಗು ಮುನ್ನ ಗುಡ್ ನ್ಯೂಸ್ ಕೊಟ್ಟ ಗಿಲ್: ಸ್ಟೋಕ್ಸ್ ಪಡೆಗೆ ನಡುಕ
Image
ಸುದ್ದಿಗೋಷ್ಠಿಯಲ್ಲಿ ಇಂಗ್ಲೆಂಡ್ ಪತ್ರಕರ್ತನ ಮೈಚಳಿ ಬಿಡಿಸಿದ ಶುಭ್​ಮನ್ ಗಿಲ್
Image
ಮೂರನೇ ಟೆಸ್ಟ್​ ಪಂದ್ಯಕ್ಕೆ 16 ಸದಸ್ಯರ ತಂಡ ಪ್ರಕಟಿಸಿದ ಇಂಗ್ಲೆಂಡ್
Image
ಎಡ್ಜ್‌ಬಾಸ್ಟನ್ ಟೆಸ್ಟ್ ಗೆದ್ದ ಭಾರತ; ಡಬ್ಲ್ಯುಟಿಸಿ ಪಾಯಿಂಟ್‌ ಪಟ್ಟಿಯಲ್ಲಿ

ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಆಕಾಶ್ ದೀಪ್ ಅವರ ಮಾರಕ ಬೌಲಿಂಗ್​ಗೆ ತತ್ತರಿಸಿ ಹೋಯಿತು. ಟೀಮ್ ಇಂಡಿಯಾ ಎಲ್ಲಾ ವಿಭಾಗದಲ್ಲೂ ಇಂಗ್ಲೆಂಡ್ ವಿರುದ್ಧ ಕಠಿಣ ಹೋರಾಟ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ 587 ರನ್‌ಗಳ ಬೃಹತ್ ಸ್ಕೋರ್ ಗಳಿಸಿತು. ನಂತರ ಬೌಲಿಂಗ್‌ನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ಅನ್ನು 407 ರನ್‌ಗಳಿಗೆ ಸೀಮಿತಗೊಳಿಸಿ 180 ರನ್‌ಗಳ ಮುನ್ನಡೆ ಸಾಧಿಸಿತು. ಈ ಇನ್ನಿಂಗ್ಸ್‌ನಲ್ಲಿ ಮೊಹಮ್ಮದ್ ಸಿರಾಜ್ 6 ವಿಕೆಟ್‌ಗಳನ್ನು ಮತ್ತು ಆಕಾಶ್ ದೀಪ್ ಸಿಂಗ್ 4 ವಿಕೆಟ್‌ಗಳನ್ನು ಪಡೆದರು.

Jasprit Bumrah: ಮೂರನೇ ಟೆಸ್ಟ್​ಗು ಮುನ್ನ ಗುಡ್ ನ್ಯೂಸ್ ಕೊಟ್ಟ ಗಿಲ್: ಸ್ಟೋಕ್ಸ್ ಪಡೆಗೆ ನಡುಕ ಶುರು

ಇದಾದ ನಂತರ ಎರಡನೇ ಇನ್ನಿಂಗ್ಸ್ ನಲ್ಲಿಯೂ ಟೀಮ್ ಇಂಡಿಯಾ 427 ರನ್ ಗಳನ್ನು ಗಳಿಸಿ ಇಂಗ್ಲೆಂಡ್ ಗೆ 608 ರನ್ ಗಳ ಬೃಹತ್ ಗುರಿ ನೀಡಿತು. ಮೊದಲ ಇನ್ನಿಂಗ್ಸ್ ನಲ್ಲಿ ಅದ್ಭುತ ಬೌಲಿಂಗ್ ಮಾಡಿದ್ದ ಆಕಾಶ್ ದೀಪ್ ಎರಡನೇ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ಗಳನ್ನು ಕಬಳಿಸಿದರು. ಆಕಾಶ್ ದೀಪ್ ಅವರ ಈ ಅದ್ಭುತ ಬೌಲಿಂಗ್ ನಿಂದಾಗಿ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡವನ್ನು 271 ರನ್ ಗಳಿಗೆ ಆಲೌಟ್ ಮಾಡಿ 336 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.

ಟೀಮ್ ಇಂಡಿಯಾ ಗೆಲುವಿನಲ್ಲಿ ಆಕಾಶ್‌ ದೀಪ್ ಅವರ ದೊಡ್ಡ ಕೊಡುಗೆ ಇದೆ. ಇದು ವರ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನವಾಗಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ಆಕಾಶ್, ಕಳೆದ ಎರಡು ತಿಂಗಳಿನಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ನನ್ನ ಸಹೋದರಿಗೆ ಈ ಪ್ರದರ್ಶನವನ್ನು ಅರ್ಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಎರಡು ತಿಂಗಳ ಹಿಂದೆ ನನ್ನ ಸಹೋದರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಅವರು ನನ್ನ ಪ್ರದರ್ಶನದಿಂದ ತುಂಬಾ ಸಂತೋಷಪಡುತ್ತಾರೆ ಮತ್ತು ಇದು ಅವರ ಮುಖದಲ್ಲಿ ಮತ್ತೆ ನಗು ತರಿಸುತ್ತದೆ ಎಂದು ಹೇಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:43 am, Mon, 7 July 25

ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ