AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಕಿಂಗ್ ಕೊಹ್ಲಿಯ ಬ್ಯಾಟ್​ನಲ್ಲಿ ಆಕಾಶ್ ದೀಪ್ ಆರ್ಭಟ: ಇಲ್ಲಿದೆ ವಿಡಿಯೋ

India vs Bangladesh 2nd Test: ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆಡಿದ ಬಾಂಗ್ಲಾದೇಶ್ ತಂಡವನ್ನು 233 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್​ಗಳು ಯಶಸ್ವಿಯಾಗಿದ್ದರು. ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಕೇವಲ 33.4 ಓವರ್​ಗಳಲ್ಲಿ 285/9 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು.

VIDEO: ಕಿಂಗ್ ಕೊಹ್ಲಿಯ ಬ್ಯಾಟ್​ನಲ್ಲಿ ಆಕಾಶ್ ದೀಪ್ ಆರ್ಭಟ: ಇಲ್ಲಿದೆ ವಿಡಿಯೋ
Akash Deep - Virat Kohli
ಝಾಹಿರ್ ಯೂಸುಫ್
|

Updated on: Oct 01, 2024 | 12:27 PM

Share

ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಆಕಾಶ್ ದೀಪ್ ಬ್ಯಾಟಿಂಗ್ ಮೂಲಕವೂ ಗಮನ ಸೆಳೆದಿದ್ದಾರೆ. ಅದು ಸಹ ವಿರಾಟ್ ಕೊಹ್ಲಿಯ ಬ್ಯಾಟ್​ನಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸುವ ಮೂಲಕ ಎಂಬುದು ವಿಶೇಷ. ಅಂದರೆ ಈ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಕಾಶ್ ದೀಪ್ ವಿರಾಟ್ ಕೊಹ್ಲಿಯ ಬ್ಯಾಟ್​ನೊಂದಿಗೆ ಆಗಮಿಸಿದ್ದರು.

ಹೀಗೆ ಕ್ರೀಸ್​ಗೆ ಬಂದ ಆಕಾಶ್ ದೀಪ್ ಶಕೀಬ್ ಅಲ್ ಹಸನ್ ಓವರ್​ನಲ್ಲಿ ಸತತ ಎರಡು ಸಿಕ್ಸ್​ಗಳನ್ನು ಬಾರಿಸಿದ್ದರು. ವಿಶೇಷ ಎಂದರೆ ಈ ಬ್ಯಾಟ್​ ಅನ್ನು ವಿರಾಟ್ ಕೊಹ್ಲಿ ಆಕಾಶ್ ದೀಪ್​ಗೆ ಉಡುಗೊರೆಯಾಗಿ ನೀಡಿದ್ದರು.

ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ಆಕಾಶ್ ದೀಪ್ ಜೊತೆಯಾಗಿ ಅಭ್ಯಾಸ ನಡೆಸಿದ್ದರು. ಈ ವೇಳೆ ರನ್ ಮೆಷಿನ್ ಖ್ಯಾತಿಯ ಕೊಹ್ಲಿ ಕಡೆಯಿಂದ ಎಂಆರ್​ಎಫ್ ಬ್ಯಾಟ್ ಅನ್ನು ಆಕಾಶ್ ದೀಪ್ ಗಿಫ್ಟ್ ಆಗಿ ಪಡೆದಿದ್ದರು.

ಇದೇ ಬ್ಯಾಟ್​ನೊಂದಿಗೆ 2ನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಿದ ಆಕಾಶ್ ದೀಪ್ 5 ಎಸೆತಗಳಲ್ಲಿ 2 ಸಿಕ್ಸ್ ಸಿಡಿಸಿ 12 ರನ್ ಬಾರಿಸಿದ್ದರು. ಇದೀಗ ಕಿಂಗ್ ಕೊಹ್ಲಿಯ ಬ್ಯಾಟ್​ನಲ್ಲಿ ಆರ್ಭಟಿಸಿದ ಆಕಾಶ್ ದೀಪ್ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಆಕಾಶ್ ದೀಪ್ ಸಿಕ್ಸರ್ ವಿಡಿಯೋ:

ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ:

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆಡಿದ ಬಾಂಗ್ಲಾದೇಶ್ ತಂಡವನ್ನು 233 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್​ಗಳು ಯಶಸ್ವಿಯಾಗಿದ್ದರು. ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಕೇವಲ 33.4 ಓವರ್​ಗಳಲ್ಲಿ 285/9 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು.

ಭಾರತ ತಂಡವು ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಡಿಕ್ಲೇರ್ ಘೋಷಿಸಲು ಮುಖ್ಯ ಕಾರಣ ಈ ಪಂದ್ಯವು ಕೊನೆಯ ದಿನದಾಟದತ್ತ ಸಾಗಿರುವುದು. ಅದರಂತೆ ನಾಲ್ಕನೇ ದಿನದಾಟದಲ್ಲೇ ಡಿಕ್ಲೇರ್ ಘೋಷಿಸಿದ ಭಾರತ ತಂಡವು ಬಾಂಗ್ಲಾದೇಶ್ ತಂಡಕ್ಕೆ ದ್ವಿತೀಯ ಇನಿಂಗ್ಸ್ ಆಡಲು ಅನುವು ಮಾಡಿಕೊಂಡಿದೆ.

ಅದರಂತೆ 2ನೇ ಇನಿಂಗ್ಸ್ ಆಡಿದ ಬಾಂಗ್ಲಾದೇಶ್ ತಂಡವು ಕೇವಲ 146 ರನ್​ಗಳಿಗೆ ಆಲೌಟ್ ಆಗಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿ 52 ರನ್​ಗಳ ಮುನ್ನಡೆ ಹೊಂದಿದ್ದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 95 ರನ್​ಗಳ ಗುರಿ ಪಡೆದುಕೊಂಡಿದೆ. ಹೀಗಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಜಯವನ್ನು ನಿರೀಕ್ಷಿಸಬಹುದು.

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​