AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓ 36 ರನ್​​ಗೆ ಆಲೌಟ್ ಆದವರು… ಟೀಮ್ ಇಂಡಿಯಾವನ್ನು ಹೀಯಾಳಿಸಿದ ಆಸ್ಟ್ರೇಲಿಯಾ ಆಟಗಾರ

India vs Australia 2nd Test: ಬಾರ್ಡರ್ - ಗವಾಸ್ಕರ್ ಟೆಸ್ಟ್ ಸರಣಿಯ‌ ಎರಡನೇ ಪಂದ್ಯ ಶುಕ್ರವಾರದಿಂದ ಶುರುವಾಗಲಿದೆ. ಹೊನಲು ಬೆಳಕಿನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಪಿಂಕ್ ಬಾಲ್ ಬಳಸಲಾಗುತ್ತದೆ. ಹಾಗಾಗಿಯೇ ಈ ಪಂದ್ಯವನ್ನು ಪಿಂಕ್ ಬಾಲ್ ಟೆಸ್ಟ್‌ ಎಂದು ಕರೆಯಲಾಗುತ್ತದೆ.

ಓ 36 ರನ್​​ಗೆ ಆಲೌಟ್ ಆದವರು... ಟೀಮ್ ಇಂಡಿಯಾವನ್ನು ಹೀಯಾಳಿಸಿದ ಆಸ್ಟ್ರೇಲಿಯಾ ಆಟಗಾರ
Alex Carey
ಝಾಹಿರ್ ಯೂಸುಫ್
|

Updated on: Dec 03, 2024 | 2:59 PM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಿಂಕ್ ಬಾಲ್ ಟೆಸ್ಟ್​​ ಪಂದ್ಯಕ್ಕಾಗಿ ದಿನಗಣನೆ ಶುರುವಾಗಿದೆ. ಡಿಸೆಂಬರ್ 6 ರಂದು ಅಡಿಲೇಡ್​​ನ ಓವಲ್ ಮೈದಾನದಲ್ಲಿ ನಡೆಯಲಿರುವ ಹೊನಲು ಬೆಳಕಿನ ಈ ಪಂದ್ಯಕ್ಕಾಗಿ ಉಭಯ ತಂಡಗಳು ಭರ್ಜರಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಈ ಅಭ್ಯಾಸ ನಡುವೆ ಆಸ್ಟ್ರೇಲಿಯಾ ತಂಡ ವಿಕೆಟ್ ಕೀಪರ್​ ಅಲೆಕ್ಸ್ ಕ್ಯಾರಿ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದರು.

ಈ ವೇಳೆ ಮಾತನಾಡಿದ ಅಲೆಕ್ಸ್ ಕ್ಯಾರಿ, ಟೀಮ್ ಇಂಡಿಯಾ 36 ರನ್​​ಗಳಿಗೆ ಆಲೌಟ್ ಆಗಿರುವುದನ್ನು ನೆನಪಿಸಿದ್ದಾರೆ. 2020 ರಲ್ಲಿ ಆಡಿಲೇಡ್​ನಲ್ಲಿ ಆಡಲಾದ ಪಂದ್ಯದಲ್ಲಿ ಭಾರತ ತಂಡವು ಕೇವಲ 36 ರನ್​​ಗಳಿಗೆ ಆಲೌಟ್ ಆಗಿತ್ತು. ಅದು ನನಗೆ ಇನ್ನೂ ನೆನಪಿದೆ ಎಂದು ಕ್ಯಾರಿ ವ್ಯಂಗ್ಯವಾಡಿದ್ದಾರೆ.

ಅಲ್ಲದೆ ಟೀಮ್ ಇಂಡಿಯಾ 36 ರನ್​​ಗೆ ಆಲೌಟ್ ಆಗಿರುವುದು ಐತಿಹಾಸಿಕ ಘಟನೆ. ಅದು ಮತ್ತೊಮ್ಮೆ ಪುನರಾವರ್ತನೆಯಾಗುವುದಿಲ್ಲ. ಇದಾಗ್ಯೂ ಈ ಬಾರಿ ಕೂಡ ನಾವೇ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಗೆಲ್ಲುತ್ತೇವೆ ಎಂದು ಅಲೆಕ್ಸ್ ಕ್ಯಾರಿ ಹೇಳಿದ್ದಾರೆ.

ಏಕೆಂದರೆ ಆಸ್ಟ್ರೇಲಿಯಾ ತಂಡವು ತವರಿನಲ್ಲಿ ಆಡಿದ ಪಿಂಕ್ ಬಾಲ್ ಟೆಸ್ಟ್​ನಲ್ಲಿ ಅತ್ಯುತ್ತಮ ದಾಖಲೆ ಹೊಂದಿದೆ. ಇದರ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ. ಹೀಗಾಗಿ ಈ ಪಂದ್ಯವನ್ನು ಗೆದ್ದು ನಾವು ಸರಣಿಯಲ್ಲಿ ಕಂಬ್ಯಾಕ್ ಮಾಡಲಿದ್ದೇವೆ ಎಂದು ಅಲೆಕ್ಸ್ ಕ್ಯಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

36 ರನ್​​ಗೆ ಆಲೌಟ್:

2020-21ರ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಪ್ರದರ್ಶನ ನೀಡಿತ್ತು. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​​ನಲ್ಲಿ 244 ರನ್​​ಗಳಿಸಿ ಆಲೌಟ್ ಆಗಿತ್ತು.

ಇದಕ್ಕುತ್ತರವಾಗಿ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವನ್ನು 191 ರನ್​​ಗಳಿಗೆ ಆಲೌಟ್ ಮಾಡುವಲ್ಲಿ ಟೀಮ್ ಇಂಡಿಯಾ ಬೌಲರ್​​ಗಳು ಯಶಸ್ವಿಯಾದರು.

53 ರನ್​​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಕೇವಲ 36 ರನ್​​ಗಳಿಗೆ ಆಲೌಟ್ ಆಗಿತ್ತು. ಇದು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತ ತಂಡದ ಅತ್ಯಂತ ಕಡಿಮೆ ಮೊತ್ತ. ಅಲ್ಲದೆ ಟೆಸ್ಟ್​ನಲ್ಲಿ ಅತೀ ಕಡಿಮೆ ಸ್ಕೋರ್​ಗಳಿಸಿದ ವಿಶ್ವದ 4ನೇ ತಂಡ ಎಂಬ ಅಪಖ್ಯಾತಿಗೂ ಟೀಮ್ ಇಂಡಿಯಾ ಒಳಗಾಗಿತ್ತು.

ಇದನ್ನೂ ಓದಿ: 15.5 ಓವರ್​​ಗಳಲ್ಲಿ ಕೇವಲ 5 ರನ್: ದಾಖಲೆ ಪುಟಕ್ಕೆ ಜೇಡನ್ ಸೀಲ್ಸ್ ಎಂಟ್ರಿ

ಈ ಹೀನಾಯ ಸೋಲನ್ನು ಪ್ರಸ್ತಾಪಿಸಿ ಇದೀಗ ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಅಲೆಕ್ಸ್ ಕ್ಯಾರಿ ಅಡಿಲೇಡ್ ಟೆಸ್ಟ್​ನಲ್ಲಿ ಈ ಬಾರಿ ಕೂಡ ಆಸೀಸ್ ಪಡೆ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ