AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಹಿಟ್​ಮ್ಯಾನ್ ಮುಂದೆ ಮೋಡಿ ಮಾಡಿದ DK: ಟಿ20 ವಿಶ್ವಕಪ್​ನಲ್ಲಿ ಚಾನ್ಸ್ ಖಚಿತ..!

Dinesh Karthik: ಸಿಕ್ಕ 2 ಎಸೆತಗಳಲ್ಲಿ ತಾನೆಂತಹ ಫಿನಿಶರ್ ಎಂಬುದನ್ನು ದಿನೇಶ್ ಕಾರ್ತಿಕ್ ಸಾಬೀತುಪಡಿಸಿದ್ದಾರೆ. ಕೊನೆಯ ಓವರ್​ನಲ್ಲಿ 9 ರನ್​ಗಳ ಟಾರ್ಗೆಟ್ ಪಡೆದಿದ್ದ ಟೀಮ್ ಇಂಡಿಯಾವನ್ನು ನಿರಾಯಾಸವಾಗಿ ಗುರಿ ತಲುಪಿಸಿದರು.

Dinesh Karthik: ಹಿಟ್​ಮ್ಯಾನ್ ಮುಂದೆ ಮೋಡಿ ಮಾಡಿದ DK: ಟಿ20 ವಿಶ್ವಕಪ್​ನಲ್ಲಿ ಚಾನ್ಸ್ ಖಚಿತ..!
dinesh karthik - rohit sharma
TV9 Web
| Updated By: ಝಾಹಿರ್ ಯೂಸುಫ್|

Updated on: Sep 24, 2022 | 12:55 PM

Share

2018 ರಲ್ಲಿ ನಡೆದ ತ್ರಿಕೋನಾ ಸರಣಿಯ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಸಿಕ್ಸ್ ಸಿಡಿಸುವ ಮೂಲಕ ದಿನೇಶ್ ಕಾರ್ತಿಕ್ (Dinesh Karthik) ಭಾರತ ತಂಡಕ್ಕೆ ಜಯ ತಂದುಕೊಟ್ಟಿದ್ದರು. ಅಂದು ಟೀಮ್ ಇಂಡಿಯಾದ (Team India) ಹಂಗಾಮಿ ನಾಯಕರಾಗಿದ್ದ ರೋಹಿತ್ ಶರ್ಮಾ (Rohit Sharma) ಹೇಳಿದ ಒಂದು ಮಾತಿದೆ, ನಾನು ಫಿನಿಶಿಂಗ್ ವಿಷಯದಲ್ಲಿ ದಿನೇಶ್ ಕಾರ್ತಿಕ್ ಅವರ ಸಾಮರ್ಥ್ಯವನ್ನು ಎಂದಿಗೂ ನಂಬುತ್ತೇನೆ. ಈ ಶ್ಲಾಘನೆಯ ಮಾತುಗಳಿಗೆ ಇದೀಗ 4 ವರ್ಷಗಳಾಗಿವೆ. ಆದರೆ ಈಗಲೂ ರೋಹಿತ್ ಶರ್ಮಾ ತನ್ನ ಸಹ ಆಟಗಾರನ ಮೇಲೆ ನಂಬಿಕೆ ಇರಿಸಿಕೊಂಡಿದ್ದಾರೆ. ಆ ನಂಬಿಕೆಯನ್ನು ದಿನೇಶ್ ಕಾರ್ತಿಕ್ ಅಲಿಯಾಸ್ ಡಿಕೆ ಮತ್ತೊಮ್ಮೆ ಉಳಿಸಿಕೊಂಡಿದ್ದಾರೆ.

ಹೌದು, ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಬ್ಬರು ವಿಕೆಟ್ ಕೀಪರ್​ಗಳು ತಂಡದಲ್ಲಿ ಸ್ಥಾನ ಪಡೆದಿದ್ದರು. ಒಂದು ಕಡೆ ಎಡಗೈ ದಾಂಡಿಗ ರಿಷಭ್ ಪಂತ್ ಇದ್ದರೆ, ಮತ್ತೊಂದು ದಿನೇಶ್ ಕಾರ್ತಿಕ್ ಇದ್ದರು. ವಿಶೇಷ ಎಂದರೆ ಟಿ20 ವಿಶ್ವಕಪ್​ ಪ್ಲೇಯಿಂಗ್​ ಇಲೆವೆನ್​ನಲ್ಲಿ ಇವರಿಬ್ಬರ ನಡುವೆ ಪೈಪೋಟಿ ಇದೆ. ಇದೇ ಕಾರಣದಿಂದಾಗಿ ಇದೀಗ ಇಬ್ಬರಲ್ಲಿ ಯಾರು ಬೆಸ್ಟ್ ಎಂಬ ಪ್ರಯೋಗಕ್ಕೆ ಟೀಮ್ ಇಂಡಿಯಾ ಮುಂದಾಗಿದೆ.

ಇದೀಗ ಸಿಕ್ಕ 2 ಎಸೆತಗಳಲ್ಲಿ ತಾನೆಂತಹ ಫಿನಿಶರ್ ಎಂಬುದನ್ನು ದಿನೇಶ್ ಕಾರ್ತಿಕ್ ಸಾಬೀತುಪಡಿಸಿದ್ದಾರೆ. ಕೊನೆಯ ಓವರ್​ನಲ್ಲಿ 9 ರನ್​ಗಳ ಟಾರ್ಗೆಟ್ ಪಡೆದಿದ್ದ ಟೀಮ್ ಇಂಡಿಯಾವನ್ನು ನಿರಾಯಾಸವಾಗಿ ಗುರಿ ತಲುಪಿಸಿದರು. ಅನುಭವಿ ವೇಗಿ ಡೇನಿಯಲ್ ಸ್ಯಾಮ್ಸ್​ನ ಎಸೆದ ಮೊದಲ ಎಸೆತವನ್ನು ಸಿಕ್ಸರ್​ಗೆ ಅಟ್ಟಿದರೆ, 2ನೇ ಎಸೆತದಲ್ಲಿ ಫೋರ್ ಬಾರಿಸಿದರು.

ಇದನ್ನೂ ಓದಿ
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇತ್ತ ಡಿಕೆಯ ಭರ್ಜರಿ ಫಿನಿಶಿಂಗ್ ಕಂಡು ಖುದ್ದು ರೋಹಿತ್ ಶರ್ಮಾ ದಂಗಾದರು. ಅಷ್ಟೇ ಅಲ್ಲದೆ ದಿನೇಶ್ ಕಾರ್ತಿಕ್ ಅವರನ್ನು ತಬ್ಬಿಕೊಳ್ಳುವ ಮೂಲಕ ಸಂಭ್ರಮಿಸಿದರು. ಈ ಒಂದು ಸಂಭ್ರಮವೇ ಇದೀಗ ಡಿಕೆಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಖಾಯಂ ಸ್ಥಾನ ಒದಗಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಏಕೆಂದರೆ ಟಿ20 ಕ್ರಿಕೆಟ್​ನಲ್ಲಿ ಫಿನಿಶರ್​ಗಳ ಪಾತ್ರ ಬಹಳ ಮುಖ್ಯ. ಇತ್ತ ಟೀಮ್ ಇಂಡಿಯಾ ಪರ ಮಧ್ಯಮ ಕ್ರಮಾಂಕದಲ್ಲಿ ಹಲವು ಬ್ಯಾಟ್ಸ್​ಮನ್​ಗಳಿದ್ದರೂ ಫಿನಿಶರ್ ಪಾತ್ರವನ್ನು ತಾನು ನಿಭಾಯಿಸಬಲ್ಲೆ ಎಂಬುದನ್ನು ದಿನೇಶ್ ಕಾರ್ತಿಕ್ ನಿರೂಪಿಸಿದ್ದಾರೆ. ಹೀಗಾಗಿ ರಿಷಭ್ ಪಂತ್​ಗಿಂತ ಡಿಕೆಗೆ ಟಿ20 ವಿಶ್ವಕಪ್​ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಸಿಗುವುದು ಖಚಿತ ಎನ್ನಬಹುದು.

ಏಕೆಂದರೆ ನಾಯಕ ರೋಹಿತ್ ಶರ್ಮಾ ಇರಿಸಿದ್ದ ನಂಬಿಕೆಯನ್ನು ದಿನೇಶ್ ಕಾರ್ತಿಕ್ ಉಳಿಸಿಕೊಂಡಿದ್ದಾರೆ. ಈ ಮೂಲಕ 7ನೇ ಕ್ರಮಾಂಕದಲ್ಲಿ ನಾನೇ ಸೂಕ್ತ ಎಂಬ ಸಂದೇಶವನ್ನು ಕೂಡ ನೀಡಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ದಿನೇಶ್ ಕಾರ್ತಿಕ್ ವಿಕೆಟ್ ಕೀಪರ್ ಆಗಿ ಸ್ಥಾನ ಪಡೆಯುವುದು ಖಚಿತ ಎಂದೇ ಹೇಳಬಹುದು.

ಇತ್ತ ಎಡಗೈ ಆಲ್​ರೌಂಡರ್​ ಆಗಿ ಅಕ್ಷರ್ ಪಟೇಲ್ ಕೂಡ ಮಿಂಚುತ್ತಿದ್ದು, ಹೀಗಾಗಿ ರಿಷಭ್ ಪಂತ್​ಗೆ ಟಿ20 ವಿಶ್ವಕಪ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಗುವುದು ಅನುಮಾನ. ಅತ್ತ ರೋಹಿತ್ ಶರ್ಮಾಗೂ ದಿನೇಶ್ ಕಾರ್ತಿಕ್ ಅವರ ಫಿನಿಶಿಂಗ್ ಸಾಮರ್ಥ್ಯದ ಮೇಲೆ ಅಪಾರ ನಂಬಿಕೆಯಿದೆ. ಅದಕ್ಕೆ ಸಾಕ್ಷಿಯೇ 2018 ರಲ್ಲಿ ನೀಡಿರುವ ಆ ಹೇಳಿಕೆ. ಇದೀಗ ಅದೇ ಭರವಸೆಯನ್ನು ಉಳಿಸಿಕೊಳ್ಳುವಲ್ಲಿ ದಿನೇಶ್ ಕಾರ್ತಿಕ್ ಯಶಸ್ವಿಯಾಗಿದ್ದಾರೆ. ಹೀಗಾಗಿ ಟಿ20 ವಿಶ್ವಕಪ್​ ಪ್ಲೇಯಿಂಗ್ ಇಲೆವೆನ್​ನಲ್ಲಿ ಡಿಕೆಗೆ ಸ್ಥಾನ ಖಚಿತ ಎನ್ನಬಹುದು.

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?