AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amanjot Kaur: ಚೊಚ್ಚಲ ಪಂದ್ಯದಲ್ಲೇ ಇತಿಹಾಸ ನಿರ್ಮಿಸಿದ ಅಮನ್‌ಜೋತ್ ಕೌರ್

IND vs BAN: ಅಮನ್​ಜೋತ್ ಕೌರ್ ಒಟ್ಟು 9 ಓವರ್​ಗಳನ್ನು ಬೌಲ್ ಮಾಡಿದ್ದರು. ಈ ವೇಳೆ ಕೇವಲ 31 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದ್ದರು.

Amanjot Kaur: ಚೊಚ್ಚಲ ಪಂದ್ಯದಲ್ಲೇ ಇತಿಹಾಸ ನಿರ್ಮಿಸಿದ ಅಮನ್‌ಜೋತ್ ಕೌರ್
Amanjot Kaur
TV9 Web
| Updated By: ಝಾಹಿರ್ ಯೂಸುಫ್|

Updated on: Jul 16, 2023 | 9:13 PM

Share

India vs Bangladesh: ಢಾಕಾದಲ್ಲಿ ನಡೆದ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಮಹಿಳೆಯರು 40 ರನ್​ಗಳಿಂದ ಸೋಲನುಭವಿಸಿದ್ದಾರೆ. ಆದರೆ ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ ಅಮನ್​ಜೋತ್ ಕೌರ್ ವಿಶೇಷ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿರುವುದು ವಿಶೇಷ. ಟೀಮ್ ಇಂಡಿಯಾ ಪರ ಮೊದಲ ಏಕದಿನ ಪಂದ್ಯವಾಡಿದ ಅಮನ್​ಜೋತ್ ಕೌರ್ ಒಟ್ಟು 9 ಓವರ್​ಗಳನ್ನು ಬೌಲ್ ಮಾಡಿದ್ದರು. ಈ ವೇಳೆ ಕೇವಲ 31 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದ್ದರು.

ಇದರೊಂದಿಗೆ ಪಾದಾರ್ಪಣೆ ಪಂದ್ಯದಲ್ಲೇ ಅತ್ಯುತ್ತಮ ದಾಳಿ ಸಂಘಟಿಸಿದ ಟೀಮ್ ಇಂಡಿಯಾದ 2ನೇ ಮಹಿಳಾ ಬೌಲರ್ ಎಂಬ ವಿಶೇಷ ದಾಖಲೆ ಅಮನ್​ಜೋತ್ ಕೌರ್ ಪಾಲಾಯಿತು. ಅಂದರೆ ಅಮನ್​ಜೋತ್ ಕೇವಲ 3.40 ಎಕನಾಮಿ ರೇಟ್​ನಲ್ಲಿ ರನ್ ನೀಡಿ ಒಟ್ಟು 4 ವಿಕೆಟ್ ಕಬಳಿಸಿದ್ದರು.

1987 ರಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ್ತಿ ಪೂರ್ಣಿಮಾ ಚೌಧರಿ ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಪಂದ್ಯದಲ್ಲಿ 8 ಓವರ್​ಗಳಲ್ಲಿ 21 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದೀಗ ಚೊಚ್ಚಲ ಪಂದ್ಯದಲ್ಲೇ 31 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ಅಮನ್​ಜೋತ್ ಕೌರ್ ಟೀಮ್ ಇಂಡಿಯಾ ಪರ ಮೊದಲ ಮ್ಯಾಚ್​ನಲ್ಲೇ ಅತ್ಯುತ್ತಮ ದಾಳಿ ಸಂಘಟಿಸಿದ ಹಿರಿಮೆಗೆ ಪಾತ್ರರಾದರು.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ 3 ಗುಡ್​ ನ್ಯೂಸ್

ಬಾಂಗ್ಲಾ ತಂಡಕ್ಕೆ ಮೊದಲ ಗೆಲುವು:

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಮಹಿಳಾ ತಂಡ 43 ಓವರ್‌ಗಳಲ್ಲಿ 152 ರನ್ ಗಳಿಸಲಷ್ಟೇ ಶಕ್ತವಾಯಿತು.  ಎದುರಾಳಿ ತಂಡ ನೀಡಿದ 153 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ಮಹಿಳಾ ತಂಡ 35.5 ಓವರ್‌ಗಳಲ್ಲಿ 113 ರನ್ ಗಳಿಸಿ ಆಲೌಟ್ ಆಯಿತು. ಇದರೊಂದಿಗೆ ಬಾಂಗ್ಲಾದೇಶ್ ತಂಡವು 40 ರನ್​ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಅಂದಹಾಗೆ ಇದು ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ಧ ಇದು ಬಾಂಗ್ಲಾದೇಶ್ ಮಹಿಳಾ ತಂಡ ಮೊದಲ ಗೆಲುವು ಎಂಬುದು ವಿಶೇಷ.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ