AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amanjot Kaur: ಚೊಚ್ಚಲ ಪಂದ್ಯದಲ್ಲೇ ಇತಿಹಾಸ ನಿರ್ಮಿಸಿದ ಅಮನ್‌ಜೋತ್ ಕೌರ್

IND vs BAN: ಅಮನ್​ಜೋತ್ ಕೌರ್ ಒಟ್ಟು 9 ಓವರ್​ಗಳನ್ನು ಬೌಲ್ ಮಾಡಿದ್ದರು. ಈ ವೇಳೆ ಕೇವಲ 31 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದ್ದರು.

Amanjot Kaur: ಚೊಚ್ಚಲ ಪಂದ್ಯದಲ್ಲೇ ಇತಿಹಾಸ ನಿರ್ಮಿಸಿದ ಅಮನ್‌ಜೋತ್ ಕೌರ್
Amanjot Kaur
TV9 Web
| Edited By: |

Updated on: Jul 16, 2023 | 9:13 PM

Share

India vs Bangladesh: ಢಾಕಾದಲ್ಲಿ ನಡೆದ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಮಹಿಳೆಯರು 40 ರನ್​ಗಳಿಂದ ಸೋಲನುಭವಿಸಿದ್ದಾರೆ. ಆದರೆ ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ ಅಮನ್​ಜೋತ್ ಕೌರ್ ವಿಶೇಷ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿರುವುದು ವಿಶೇಷ. ಟೀಮ್ ಇಂಡಿಯಾ ಪರ ಮೊದಲ ಏಕದಿನ ಪಂದ್ಯವಾಡಿದ ಅಮನ್​ಜೋತ್ ಕೌರ್ ಒಟ್ಟು 9 ಓವರ್​ಗಳನ್ನು ಬೌಲ್ ಮಾಡಿದ್ದರು. ಈ ವೇಳೆ ಕೇವಲ 31 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದ್ದರು.

ಇದರೊಂದಿಗೆ ಪಾದಾರ್ಪಣೆ ಪಂದ್ಯದಲ್ಲೇ ಅತ್ಯುತ್ತಮ ದಾಳಿ ಸಂಘಟಿಸಿದ ಟೀಮ್ ಇಂಡಿಯಾದ 2ನೇ ಮಹಿಳಾ ಬೌಲರ್ ಎಂಬ ವಿಶೇಷ ದಾಖಲೆ ಅಮನ್​ಜೋತ್ ಕೌರ್ ಪಾಲಾಯಿತು. ಅಂದರೆ ಅಮನ್​ಜೋತ್ ಕೇವಲ 3.40 ಎಕನಾಮಿ ರೇಟ್​ನಲ್ಲಿ ರನ್ ನೀಡಿ ಒಟ್ಟು 4 ವಿಕೆಟ್ ಕಬಳಿಸಿದ್ದರು.

1987 ರಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ್ತಿ ಪೂರ್ಣಿಮಾ ಚೌಧರಿ ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಪಂದ್ಯದಲ್ಲಿ 8 ಓವರ್​ಗಳಲ್ಲಿ 21 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದೀಗ ಚೊಚ್ಚಲ ಪಂದ್ಯದಲ್ಲೇ 31 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ಅಮನ್​ಜೋತ್ ಕೌರ್ ಟೀಮ್ ಇಂಡಿಯಾ ಪರ ಮೊದಲ ಮ್ಯಾಚ್​ನಲ್ಲೇ ಅತ್ಯುತ್ತಮ ದಾಳಿ ಸಂಘಟಿಸಿದ ಹಿರಿಮೆಗೆ ಪಾತ್ರರಾದರು.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ 3 ಗುಡ್​ ನ್ಯೂಸ್

ಬಾಂಗ್ಲಾ ತಂಡಕ್ಕೆ ಮೊದಲ ಗೆಲುವು:

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಮಹಿಳಾ ತಂಡ 43 ಓವರ್‌ಗಳಲ್ಲಿ 152 ರನ್ ಗಳಿಸಲಷ್ಟೇ ಶಕ್ತವಾಯಿತು.  ಎದುರಾಳಿ ತಂಡ ನೀಡಿದ 153 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ಮಹಿಳಾ ತಂಡ 35.5 ಓವರ್‌ಗಳಲ್ಲಿ 113 ರನ್ ಗಳಿಸಿ ಆಲೌಟ್ ಆಯಿತು. ಇದರೊಂದಿಗೆ ಬಾಂಗ್ಲಾದೇಶ್ ತಂಡವು 40 ರನ್​ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಅಂದಹಾಗೆ ಇದು ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ಧ ಇದು ಬಾಂಗ್ಲಾದೇಶ್ ಮಹಿಳಾ ತಂಡ ಮೊದಲ ಗೆಲುವು ಎಂಬುದು ವಿಶೇಷ.

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ