AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amanjot Kaur: ಚೊಚ್ಚಲ ಪಂದ್ಯದಲ್ಲೇ ಇತಿಹಾಸ ನಿರ್ಮಿಸಿದ ಅಮನ್‌ಜೋತ್ ಕೌರ್

IND vs BAN: ಅಮನ್​ಜೋತ್ ಕೌರ್ ಒಟ್ಟು 9 ಓವರ್​ಗಳನ್ನು ಬೌಲ್ ಮಾಡಿದ್ದರು. ಈ ವೇಳೆ ಕೇವಲ 31 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದ್ದರು.

Amanjot Kaur: ಚೊಚ್ಚಲ ಪಂದ್ಯದಲ್ಲೇ ಇತಿಹಾಸ ನಿರ್ಮಿಸಿದ ಅಮನ್‌ಜೋತ್ ಕೌರ್
Amanjot Kaur
TV9 Web
| Edited By: |

Updated on: Jul 16, 2023 | 9:13 PM

Share

India vs Bangladesh: ಢಾಕಾದಲ್ಲಿ ನಡೆದ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಮಹಿಳೆಯರು 40 ರನ್​ಗಳಿಂದ ಸೋಲನುಭವಿಸಿದ್ದಾರೆ. ಆದರೆ ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ ಅಮನ್​ಜೋತ್ ಕೌರ್ ವಿಶೇಷ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿರುವುದು ವಿಶೇಷ. ಟೀಮ್ ಇಂಡಿಯಾ ಪರ ಮೊದಲ ಏಕದಿನ ಪಂದ್ಯವಾಡಿದ ಅಮನ್​ಜೋತ್ ಕೌರ್ ಒಟ್ಟು 9 ಓವರ್​ಗಳನ್ನು ಬೌಲ್ ಮಾಡಿದ್ದರು. ಈ ವೇಳೆ ಕೇವಲ 31 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದ್ದರು.

ಇದರೊಂದಿಗೆ ಪಾದಾರ್ಪಣೆ ಪಂದ್ಯದಲ್ಲೇ ಅತ್ಯುತ್ತಮ ದಾಳಿ ಸಂಘಟಿಸಿದ ಟೀಮ್ ಇಂಡಿಯಾದ 2ನೇ ಮಹಿಳಾ ಬೌಲರ್ ಎಂಬ ವಿಶೇಷ ದಾಖಲೆ ಅಮನ್​ಜೋತ್ ಕೌರ್ ಪಾಲಾಯಿತು. ಅಂದರೆ ಅಮನ್​ಜೋತ್ ಕೇವಲ 3.40 ಎಕನಾಮಿ ರೇಟ್​ನಲ್ಲಿ ರನ್ ನೀಡಿ ಒಟ್ಟು 4 ವಿಕೆಟ್ ಕಬಳಿಸಿದ್ದರು.

1987 ರಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ್ತಿ ಪೂರ್ಣಿಮಾ ಚೌಧರಿ ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಪಂದ್ಯದಲ್ಲಿ 8 ಓವರ್​ಗಳಲ್ಲಿ 21 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದೀಗ ಚೊಚ್ಚಲ ಪಂದ್ಯದಲ್ಲೇ 31 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ಅಮನ್​ಜೋತ್ ಕೌರ್ ಟೀಮ್ ಇಂಡಿಯಾ ಪರ ಮೊದಲ ಮ್ಯಾಚ್​ನಲ್ಲೇ ಅತ್ಯುತ್ತಮ ದಾಳಿ ಸಂಘಟಿಸಿದ ಹಿರಿಮೆಗೆ ಪಾತ್ರರಾದರು.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ 3 ಗುಡ್​ ನ್ಯೂಸ್

ಬಾಂಗ್ಲಾ ತಂಡಕ್ಕೆ ಮೊದಲ ಗೆಲುವು:

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಮಹಿಳಾ ತಂಡ 43 ಓವರ್‌ಗಳಲ್ಲಿ 152 ರನ್ ಗಳಿಸಲಷ್ಟೇ ಶಕ್ತವಾಯಿತು.  ಎದುರಾಳಿ ತಂಡ ನೀಡಿದ 153 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ಮಹಿಳಾ ತಂಡ 35.5 ಓವರ್‌ಗಳಲ್ಲಿ 113 ರನ್ ಗಳಿಸಿ ಆಲೌಟ್ ಆಯಿತು. ಇದರೊಂದಿಗೆ ಬಾಂಗ್ಲಾದೇಶ್ ತಂಡವು 40 ರನ್​ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಅಂದಹಾಗೆ ಇದು ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ಧ ಇದು ಬಾಂಗ್ಲಾದೇಶ್ ಮಹಿಳಾ ತಂಡ ಮೊದಲ ಗೆಲುವು ಎಂಬುದು ವಿಶೇಷ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?