AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಫೈನಲ್​ನಲ್ಲಿ RCBಗೆ ಸೋಲು: ಅಂಬಾಟಿ ರಾಯುಡು ಭವಿಷ್ಯ

IPL 2026 RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಹಲವು ಬಾರಿ ವ್ಯಂಗ್ಯವಾಡಿದ್ದರು. ಈ ವ್ಯಂಗ್ಯಕ್ಕೆಲ್ಲಾ ಉತ್ತರ ಎಂಬಂತೆ ಐಪಿಎಲ್ 2025 ರಲ್ಲಿ ಆರ್​ಸಿಬಿ ತಂಡವು ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಇದಾಗ್ಯೂ ಆರ್​ಸಿಬಿ ತಂಡವನ್ನು ಗುರಿಯಾಗಿಸುವ ರಾಯುಡು ಅವರ ಕಾಯಕ ಮುಂದುವರೆದಿದೆ.

ಐಪಿಎಲ್ ಫೈನಲ್​ನಲ್ಲಿ RCBಗೆ ಸೋಲು: ಅಂಬಾಟಿ ರಾಯುಡು ಭವಿಷ್ಯ
Ambati Rayudu
ಝಾಹಿರ್ ಯೂಸುಫ್
|

Updated on: Aug 19, 2025 | 9:54 AM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿರುದ್ಧ ಸದಾ ಕೊಂಕು ನುಡಿಯುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು (Ambati Rayudu) ಇದೀಗ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ಈ ಬಾರಿ ಭವಿಷ್ಯ ನುಡಿದಿರುವುದು ಮುಂಬರುವ ಐಪಿಎಲ್​ ಬಗ್ಗೆ. ಅಂದರೆ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಫೈನಲ್ ಬಗ್ಗೆ.

ಪ್ರಮುಖ ಪಾಡ್​ಕಾಸ್ಟ್​ವೊಂದರಲ್ಲಿ ಕಾಣಿಸಿಕೊಂಡ ಅಂಬಾಟಿ ರಾಯುಡು, ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ಆಡಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಈ ಟಾಪ್-4 ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಫೈನಲ್​ಗೆ ಪ್ರವೇಶಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಆದರೆ ಫೈನಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲುತ್ತದೆ. ಅಲ್ಲದೆ ಮುಂಬೈ ಇಂಡಿಯನ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುತ್ತದೆ ಎಂದು ಅಂಬಾಟಿ ರಾಯುಡು ಭವಿಷ್ಯ ನುಡಿದಿದ್ದಾರೆ. ಇದೀಗ ರಾಯುಡು ಅವರ ಈ ಹೇಳಿಕೆಗಳ ವಿಡಿಯೋ ತುಣುಕುಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಳೆದ ಸೀಸನ್​ನಲ್ಲಿ ಅಂಬಾಟಿ ರಾಯುಡು, ಈ ಬಾರಿ ಆರ್​ಸಿಬಿ ಕಪ್ ಗೆಲ್ಲಬಾರದು ಎಂದಿದ್ದರು. ಅಲ್ಲದೆ ಆರ್​ಸಿಬಿ ತಂಡದ ಸೋಲಿಗೆ ಅವರ ತಂಡದ ಆಯ್ಕೆಯೇ ಕಾರಣ ಎಂದು ದೂರಿದ್ದರುಅದರಲ್ಲೂ ರಾಯಲ್ ಚಾಲೆಂಜರ್ಸ್ಬೆಂಗಳೂರುನಂತಹ ತಂಡ ಐಪಿಎಲ್​ನಲ್ಲಿ ಇರಬೇಕು. ಏಕೆಂದರೆ ನಿರೀಕ್ಷೆಗಳನ್ನು ಹೆಚ್ಚಿಸಿ ಅದನ್ನು ಪೂರೈಸಲು ವಿಫಲವಾಗುವ ತಂಡ ಇದ್ದರೇನೇ ಮನರಂಜನೆ ಸಿಗೋದು.

ಅಷ್ಟೇ ಅಲ್ಲದೆ ಆರ್‌ಸಿಬಿ ತಂಡವು ಗೆಲ್ಲಲು ಹೆಣಗಾಡುವುದನ್ನು ನೋಡಿ ನಾನು ಸದಾ ಆನಂದಿಸುತ್ತೇನೆ. ಇದಾಗ್ಯೂ ಅವರು ಟ್ರೋಫಿ ಗೆಲ್ಲಲಿ ಎಂದು ಬಯಸುತ್ತೇನೆ. ಆದರೆ ಈ ಬಾರಿ ಅವರು ಕಪ್ ಗೆಲ್ಲಬಾರದು. ಮುಂದೊಂದು ದಿನ ಯಾವತ್ತಾದರು ಗೆಲ್ಲಲಿ. ಈ ಸಲ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟ್ರೋಫಿ ಎತ್ತಿ ಹಿಡಿಯಬೇಕು ಎಂದು ಅಂಬಾಟಿ ರಾಯುಡು ಹೇಳಿದ್ದರು.

ಇದನ್ನೂ ಓದಿ: IPL 2026: 6 ಆಟಗಾರರನ್ನು ಕೈ ಬಿಡಲಿದೆ RCB

ಆದರೆ ಅಂಬಾಟಿ ರಾಯುಡು ಅವರ ಈ ನಿರೀಕ್ಷೆಗಳನ್ನು ಹುಸಿಗೊಳಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2025 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ಐಪಿಎಲ್ 2026 ರಲ್ಲಿ ಹಾಲಿ ಚಾಂಪಿಯನ್ ಎಂಬ ಟ್ಯಾಗ್ ಲೈನ್​ನೊಂದಿಗೆ ಕಣಕ್ಕಿಳಿಯಲಿರುವ ಆರ್​ಸಿಬಿ ತಂಡವನ್ನು ಗುರಿಯಾಗಿಸಿ ಅಂಬಾಟಿ ರಾಯುಡು ಹೇಳಿಕೆಗಳನ್ನು ನೀಡಲಾರಂಭಿಸಿದ್ದಾರೆ. ಹೀಗಾಗಿ ರಾಯುಡು ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳು ಮುಗಿಬಿದ್ದಿದ್ದಾರೆ.

Follow Us
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ