AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMLT20: ಫೈನಲ್​ನಲ್ಲಿ ಅಬ್ಬರ: ಅಂಬಾಟಿ ರಾಯುಡುಗೆ ಪ್ರಶಸ್ತಿಗಳ ಸುರಿಮಳೆ..!

IML 2025 Final: ಇಂಟರ್​ನ್ಯಾಷನಲ್ ಮಾಸ್ಟರ್ಸ್​ ಲೀಗ್​ನಲ್ಲಿ ಇಂಡಿಯಾ ಮಾಸ್ಟರ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡವು 20 ಓವರ್​ಗಳಲ್ಲಿ 148 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಡಿಯಾ ಮಾಸ್ಟರ್ಸ್ ತಂಡವು 17.1 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 6 ವಿಕೆಟ್​ಗಳ ಜಯ ಸಾಧಿಸಿದೆ.

IMLT20: ಫೈನಲ್​ನಲ್ಲಿ ಅಬ್ಬರ: ಅಂಬಾಟಿ ರಾಯುಡುಗೆ ಪ್ರಶಸ್ತಿಗಳ ಸುರಿಮಳೆ..!
Ambati Rayudu
ಝಾಹಿರ್ ಯೂಸುಫ್
|

Updated on: Mar 17, 2025 | 11:32 AM

Share

ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಟರ್​ನ್ಯಾಷನಲ್ ಮಾಸ್ಟರ್ಸ್​ ಲೀಗ್​ ಟಿ20 ಟೂರ್ನಿಯಲ್ಲಿ ಇಂಡಿಯಾ ಮಾಸ್ಟರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡದ ಪರ ಲೆಂಡ್ಲ್​ ಸಿಮನ್ಸ್ 41 ಎಸೆತಗಳಲ್ಲಿ 57 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನಿಂದ ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 148 ರನ್ ಕಲೆಹಾಕಿತು.

149 ರನ್​ಗಳ ಗುರಿ ಪಡೆದ ಇಂಡಿಯಾ ಮಾಸ್ಟರ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಂಬಾಟಿ ರಾಯುಡು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. 50 ಎಸೆತಗಳನ್ನು ಎದುರಿಸಿದ ರಾಯುಡು 3 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 74 ರನ್ ಬಾರಿಸಿದರು. ಈ ಮೂಲಕ ಇಂಡಿಯಾ ಮಾಸ್ಟರ್ಸ್ ತಂಡವು 17.1 ಓವರ್​ಗಳಲ್ಲಿ 149 ರನ್​ ಬಾರಿಸಿ 6 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಅಂಬಾಟಿ ರಾಯುಡುಗೆ ಪ್ರಶಸ್ತಿಗಳ ಸುರಿಮಳೆ:

ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ಅಂಬಾಟಿ ರಾಯುಡು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಇದರ ಜೊತೆಗೆ 50 ಸಾವಿರ ರೂ. ಮೊತ್ತದ ನಗದು ಬಹುಮಾನ ಕೂಡ ಪಡೆದರು.

ಇನ್ನು ಈ ಪಂದ್ಯದಲ್ಲಿ 3 ಸಿಕ್ಸ್ ಸಿಡಿಸುವ ಮೂಲಕ ಫೈನಲ್ ಮ್ಯಾಚ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ ಎನಿಸಿಕೊಂಡರು. ಈ ಮೂಲಕ 50 ಸಾವಿರ ರೂ. ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡರು.

ಹಾಗೆಯೇ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಸ್ಟ್ರೈಕ್​ರೇಟ್​ನಲ್ಲಿ ಕಲೆಹಾಕಿದ್ದು ಕೂಡ ಅಂಬಾಟಿ ರಾಯುಡು. ರಾಯುಡು 148.00 ಸ್ಟ್ರೈಕ್ ರೇಟ್​ನಲ್ಲಿ 74 ರನ್ ಬಾರಿಸಿದ್ದರು. ಈ ಮೂಲಕ ಮಾಸ್ಟರ್​​ಸ್ಟ್ರೋಕ್ ಆಫ್ ದಿ ಮ್ಯಾಚ್ ಪ್ರಶಸ್ತಿ ಜೊತೆಗೆ 50 ಸಾವಿರ ರೂ. ನಗದು ಬಹುಮಾನ ಪಡೆದುಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಇಂಡಿಯಾ ಮಾಸ್ಟರ್ಸ್ ತಂಡವು 1 ಕೋಟಿ ರೂ. ನಗದು ಬಹುಮಾನ ಪಡೆದರೆ, ರನ್ನರ್ ಅಪ್ ವೆಸ್ಟ್ ಇಂಡೀಸ್ ತಂಡ 50 ಲಕ್ಷ ರೂ. ಪಡೆದುಕೊಂಡಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ