AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಣಕ್ಕೆ: ಹೀಗಿದೆ ಪ್ಲೇಯಿಂಗ್ 11

Vijay Hazare Trophy 2025: ವಿಜಯ ಹಝಾರೆ ಟೂರ್ನಿ ಎಂದರೆ ದೇಶೀಯ ಏಕದಿನ ಪಂದ್ಯಾವಳಿ. ಈ ಟೂರ್ನಿಯಲ್ಲಿ ಬರೋಬ್ಬರಿ 32 ತಂಡಗಳು ಕಣಕ್ಕಿಳಿಯುತ್ತವೆ. ಡಿಸೆಂಬರ್ 24 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ದಿನವೇ 16 ಮ್ಯಾಚ್​ಗಳು ನಡೆಯಲಿವೆ. ಅಂದರೆ ಮೊದಲ ದಿನವೇ ಎಲ್ಲಾ ತಂಡಗಳು ಕಣಕ್ಕಿಳಿಯಲಿವೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಣಕ್ಕೆ: ಹೀಗಿದೆ ಪ್ಲೇಯಿಂಗ್ 11
Virat Kohli - Rohit Sharma
ಝಾಹಿರ್ ಯೂಸುಫ್
|

Updated on: Dec 24, 2025 | 9:09 AM

Share

ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಕಣಕ್ಕಿಳಿದಿದ್ದಾರೆ. ಬೆಂಗಳೂರಿನ ಸೆಂಟರ್ ಆಫ್ ಎಕ್ಸ್​ಲೆನ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದೆಹಲಿ ಮತ್ತು ಆಂಧ್ರ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ವಿರಾಟ್ ಕೊಹ್ಲಿ ಒಳಗೊಂಡಿರುವ ದೆಹಲಿ ತಂಡವು ಬೌಲಿಂಗ್ ಆಯ್ದುಕೊಂಡಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈ ಕೆಳಗಿನಂತಿದೆ…

ದೆಹಲಿ (ಪ್ಲೇಯಿಂಗ್ XI): ಅರ್ಪಿತ್ ರಾಣಾ, ಪ್ರಿಯಾಂಶ್ ಆರ್ಯ, ವಿರಾಟ್ ಕೊಹ್ಲಿ, ನಿತೀಶ್ ರಾಣಾ, ರಿಷಭ್ ಪಂತ್ (ನಾಯಕ), ಆಯುಷ್ ಬದೋನಿ, ಸಿಮರ್ಜೀತ್ ಸಿಂಗ್, ಹರ್ಷ್ ತ್ಯಾಗಿ, ಇಶಾಂತ್ ಶರ್ಮಾ, ಪ್ರಿನ್ಸ್ ಯಾದವ್, ನವದೀಪ್ ಸೈನಿ.

ಆಂಧ್ರ (ಪ್ಲೇಯಿಂಗ್ XI): ಶ್ರೀಕರ್ ಭರತ್ (ವಿಕೆಟ್ ಕೀಪರ್), ಅಶ್ವಿನ್ ಹೆಬ್ಬಾರ್, ಶೇಕ್ ರಶೀದ್, ರಿಕಿ ಭುಯಿ, ನಿತೀಶ್ ಕುಮಾರ್ ರೆಡ್ಡಿ (ನಾಯಕ), ಸೌರಭ್ ಕುಮಾರ್, ಎಂ ಹೇಮಂತ್ ರೆಡ್ಡಿ, ಕೆಎಸ್​ ನರಸಿಂಹರಾಜು, ತ್ರಿಪುರಾಣ ವಿಜಯ್, ಸತ್ಯನಾರಾಯಣ ರಾಜು, ಎಸ್​ ಪ್ರಸಾದ್.

ಇನ್ನು ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮತ್ತೊಂದು ಪಂದ್ಯದಲ್ಲಿ ರೋಹಿತ್ ಶರ್ಮಾ ಒಳಗೊಂಡಿರುವ ಮುಂಬೈ ಹಾಗೂ ಸಿಕ್ಕಿಂ ತಂಡಗಳು ಕಣಕ್ಕಿಳಿದಿದೆ. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದಿರುವ ಸಿಕ್ಕಿಂ ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈ ಕೆಳಗಿನಂತಿದೆ…

ಮುಂಬೈ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಅಂಗ್​ಕ್ರಿಶ್ ರಘುವಂಶಿ, ಸರ್ಫರಾಝ್ ಖಾನ್, ಸಿದ್ಧೇಶ್ ಲಾಡ್, ಮುಶೀರ್ ಖಾನ್, ಹಾರ್ದಿಕ್ ತಮೋರ್ (ವಿಕೆಟ್ ಕೀಪರ್), ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ಶಾರ್ದೂಲ್ ಠಾಕೂರ್ (ನಾಯಕ), ತುಷಾರ್ ದೇಶಪಾಂಡೆ, ಸಿಲ್ವೆಸ್ಟರ್ ಡಿಸೋಝ.

ಸಿಕ್ಕಿಂ (ಪ್ಲೇಯಿಂಗ್ XI): ಲೀ ಯೋಂಗ್ ಲೆಪ್ಚಾ (ನಾಯಕ), ಆಶಿಶ್ ಥಾಪಾ (ವಿಕೆಟ್ ಕೀಪರ್), ಅಮಿತ್ ರಾಜೇರಾ, ರಾಬಿನ್ ಲಿಂಬೂ, ಗುರಿಂದರ್ ಸಿಂಗ್, ಕ್ರಾಂತಿ ಕುಮಾರ್, ಪಲ್ಜೋರ್ ತಮಾಂಗ್, ಅಂಕುರ್ ಮಲಿಕ್, ಕೆ ಸಾಯಿ ಸಾತ್ವಿಕ್, ಎಂಡಿ ಸಪ್ತುಲ್ಲಾ, ಅಭಿಷೇಕ್ ಶಾ.

ಹಾಗೆಯೇ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮತ್ತೊಂದು ಪಂದ್ಯದಲ್ಲಿ ಕರ್ನಾಟಕ ಮತ್ತು ಜಾರ್ಖಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಕರ್ನಾಟಕ-ಜಾರ್ಖಂಡ್ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಕರ್ನಾಟಕ (ಪ್ಲೇಯಿಂಗ್ XI): ಮಯಾಂಕ್ ಅಗರ್ವಾಲ್ (ನಾಯಕ), ದೇವದತ್ ಪಡಿಕ್ಕಲ್, ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್), ಅಭಿನವ್ ಮನೋಹರ್, ಶ್ರೇಯಸ್ ಗೋಪಾಲ್, ಧ್ರುವ್ ಪ್ರಭಾಕರ್, ವಿದ್ಯಾಧರ್ ಪಾಟೀಲ್, ವಿಜಯ್ ಕುಮಾರ್ ವೈಶಾಕ್, ಅಭಿಲಾಷ್ ಶೆಟ್ಟಿ.

ಇದನ್ನೂ ಓದಿ: ಗಿಲ್, ಗಂಭೀರ್ ಆಸೆಗೆ ತಣ್ಣೀರೆರಚಿದ ಮೂವರು ಆಯ್ಕೆಗಾರರು

ಜಾರ್ಖಂಡ್ (ಪ್ಲೇಯಿಂಗ್ XI): ಇಶಾನ್ ಕಿಶನ್ (ನಾಯಕ), ಕುಮಾರ್ ಕುಶಾಗ್ರಾ, ಶಿಖರ್ ಮೋಹನ್, ಉತ್ಕರ್ಷ್ ಸಿಂಗ್, ವಿರಾಟ್ ಸಿಂಗ್, ರಾಬಿನ್ ಮಿಂಝ್, ಅನುಕುಲ್ ರಾಯ್, ಶುಭ್ ಶರ್ಮಾ, ಸೌರಭ್ ಶೇಖರ್, ಸುಶಾಂತ್ ಮಿಶ್ರಾ, ವಿಕಾಶ್ ಸಿಂಗ್.

ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ
ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ
ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ
ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು
ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು
ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ಹೀಗ್ಯಾಕಂದ್ರು ಸಚಿವ ಮಹದೇವಪ್ಪ!
ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ಹೀಗ್ಯಾಕಂದ್ರು ಸಚಿವ ಮಹದೇವಪ್ಪ!