AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WI vs ENG: 2 ವರ್ಷಗಳ ಬಳಿಕ ವಿಂಡೀಸ್ ಟಿ20 ತಂಡಕ್ಕೆ ಸ್ಟಾರ್ ಆಲ್‌ರೌಂಡರ್ ಎಂಟ್ರಿ..!

WI vs ENG: ವಾಸ್ತವವಾಗಿ ಆಂಡ್ರೆ ರಸೆಲ್ 2021 ರ ಟಿ 20 ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್‌ ಪರ ತಮ್ಮ ಕೊನೆಯ ಟಿ20 ಪಂದ್ಯವನ್ನು ಆಡಿದ್ದರು. ಅಂದಿನಿಂದ ಅವರಿಗೆ ಟಿ20 ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೀಗ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಸರಣಿಗಾಗಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

WI vs ENG: 2 ವರ್ಷಗಳ ಬಳಿಕ ವಿಂಡೀಸ್ ಟಿ20 ತಂಡಕ್ಕೆ ಸ್ಟಾರ್ ಆಲ್‌ರೌಂಡರ್ ಎಂಟ್ರಿ..!
ವೆಸ್ಟ್ ಇಂಡೀಸ್ ತಂಡ
ಪೃಥ್ವಿಶಂಕರ
|

Updated on: Dec 10, 2023 | 12:41 PM

Share

ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್‌ ತಂಡವನ್ನು 4 ವಿಕೆಟ್​ಗಳಿಂದ ಮಣಿಸಿದ ಆತಿಥೇಯ ವೆಸ್ಟ್ ಇಂಡೀಸ್ ತಂಡ (England vs West Indies) ಸರಣಿಯನ್ನು 2-1 ರಿಂದ ವಶಪಡಿಸಿಕೊಂಡಿದೆ. ಈ ಮೂಲಕ ವೆಸ್ಟ್ ಇಂಡೀಸ್ 25 ವರ್ಷಗಳ ನಂತರ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ (ODI Series) ಗೆದ್ದು ದಾಖಲೆ ಬರೆದಿದೆ. ಇದೀಗ ಉಭಯ ತಂಡಗಳ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಈ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಿಗೆ ತಂಡವನ್ನು ಸಹ ಪ್ರಕಟಿಸಿದೆ. ಆಯ್ಕೆಯಾಗಿರುವ ತಂಡದ ವಿಶೇಷತೆ ಏನೆಂದರೆ, ಕಳೆದ 2 ವರ್ಷಗಳಿಂದ ಟಿ20 ತಂಡದಿಂದ ಹೊರಗುಳಿದಿದ್ದ ಸ್ಟಾರ್ ಆಲ್​ರೌಂಡರ್ ಆಂಡ್ರೆ ರಸೆಲ್ (Andre Russell) ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

2 ವರ್ಷಗಳ ನಂತರ ರಸೆಲ್​ಗೆ ಅವಕಾಶ

ವಾಸ್ತವವಾಗಿ ಆಂಡ್ರೆ ರಸೆಲ್ 2021 ರ ಟಿ 20 ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್‌ ಪರ ತಮ್ಮ ಕೊನೆಯ ಟಿ20 ಪಂದ್ಯವನ್ನು ಆಡಿದ್ದರು. ಅಂದಿನಿಂದ ಅವರಿಗೆ ಟಿ20 ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೀಗ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಸರಣಿಗಾಗಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ರಸೆಲ್ ಜೊತೆಗೆ, ಹೊಸ ವೆಸ್ಟ್ ಇಂಡೀಸ್ ತಂಡದಲ್ಲಿ ಮ್ಯಾಥ್ಯೂ ಫೋರ್ಡ್ ಕೂಡ ಅವಕಾಶ ಪಡೆದಿದ್ದಾರೆ.

WI vs ENG: ಆಂಗ್ಲರಿಗೆ ಮತ್ತೊಂದು ಮುಖಭಂಗ; 25 ವರ್ಷಗಳ ಬರ ನೀಗಿಸಿಕೊಂಡ ವೆಸ್ಟ್ ಇಂಡೀಸ್

ಶಾಯ್ ಹೋಪ್​ಗೆ ಉಪನಾಯಕತ್ವ

ಈ ಸರಣಿಯಲ್ಲಿ ರೋವ್‌ಮನ್ ಪೊವೆಲ್ ತಂಡದ ನಾಯಕತ್ವ ವಹಿಸಲಿದ್ದಾರೆ. ಅದೇ ಸಮಯದಲ್ಲಿ, ವೆಸ್ಟ್ ಇಂಡೀಸ್ ಏಕದಿನ ತಂಡದ ನಾಯಕತ್ವದ ನಂತರ ಶಾಯ್ ಹೋಪ್, ಟಿ20 ತಂಡದ ಉಪನಾಯಕನಾಗಿಯೂ ಆಯ್ಕೆಯಾಗಿದ್ದಾರೆ. ತಮ್ಮ ನಾಯಕತ್ವದಲ್ಲಿ ಶಾಯ್ ಹೋಪ್ ವೆಸ್ಟ್ ಇಂಡೀಸ್ ತಂಡವನ್ನು ಇಂಗ್ಲೆಂಡ್ ವಿರುದ್ಧದ ಐತಿಹಾಸಿಕ ಏಕದಿನ ಸರಣಿ ಗೆಲುವಿನಲ್ಲಿ ಮುನ್ನಡೆಸಿದ್ದರು.

ಮೊದಲ ಮೂರು ಟಿ20ಗೆ ವೆಸ್ಟ್ ಇಂಡೀಸ್ ತಂಡ:

ರೋವ್ಮನ್ ಪೊವೆಲ್ (ನಾಯಕ), ಶಾಯ್ ಹೋಪ್ (ಉಪನಾಯಕ), ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಕೇಶ್ ಮೋತಿ, ನಿಕೋಲಸ್ ಪೂರನ್, ಆಂಡ್ರೆ ರಸೆಲ್, ಶೆರ್ಫಾನೆ, ಶೆರ್ಫಾನೆ ರೊಮಾರಿಯೋ ಶೆಫರ್ಡ್.

ಟಿ20 ಸರಣಿ ವೇಳಾಪಟ್ಟಿ

  • 12 ಡಿಸೆಂಬರ್: ಮೊದಲನೇ ಟಿ20, ಕೆನ್ಸಿಂಗ್ಟನ್ ಓವಲ್, ಬಾರ್ಬಡೋಸ್
  • 14 ಡಿಸೆಂಬರ್: 2ಎರಡನೇ ಟಿ20, ನ್ಯಾಷನಲ್ ಸ್ಟೇಡಿಯಂ, ಗ್ರೆನಡಾ
  • 16 ಡಿಸೆಂಬರ್: ಮೂರನೇ ಟಿ20, ನ್ಯಾಷನಲ್ ಸ್ಟೇಡಿಯಂ, ಗ್ರೆನಡಾ
  • 19 ಡಿಸೆಂಬರ್: ನಾಲ್ಕನೇ ಟಿ20, ಬ್ರಿಯಾನ್ ಲಾರಾ ಅಕಾಡೆಮಿ, ಟ್ರಿನಿಡಾಡ್
  • 21 ಡಿಸೆಂಬರ್: ಐದನೇ ಟಿ20, ಬ್ರಿಯಾನ್ ಲಾರಾ ಅಕಾಡೆಮಿ, ಟ್ರಿನಿಡಾಡ್

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೇಪಾಳದಲ್ಲಿ ಮಣ್ಣಿನಡಿ ಸಿಲುಕಿದ್ದ 2 ವರ್ಷದ ಮಗುವಿನ ಅಚ್ಚರಿಯ ರಕ್ಷಣೆ
ನೇಪಾಳದಲ್ಲಿ ಮಣ್ಣಿನಡಿ ಸಿಲುಕಿದ್ದ 2 ವರ್ಷದ ಮಗುವಿನ ಅಚ್ಚರಿಯ ರಕ್ಷಣೆ
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?