AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಎಸೆತಗಳಲ್ಲಿ ಏಕದಿನ ಶತಕ; 14 ವರ್ಷಗಳ ಹಳೆಯ ದಾಖಲೆ ಉಡೀಸ್

Anmolpreet Singh's Record-Breaking Century: ವಿಜಯ್ ಹಜಾರೆ ಟ್ರೋಫಿಯ ಮೊದಲ ದಿನವೇ ಪಂಜಾಬ್‌ ತಂಡದ ಅನ್ಮೋಲ್ಪ್ರೀತ್ ಸಿಂಗ್ ಅವರು ಅರುಣಾಚಲ ಪ್ರದೇಶದ ವಿರುದ್ಧ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ 14 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಇದರೊಂದಿಗೆ ಲಿಸ್ಟ್-ಎ ಕ್ರಿಕೆಟ್‌ನಲ್ಲಿ ಅತಿವೇಗದ ಶತಕ ಸಿಡಿಸಿದ ಭಾರತದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

35 ಎಸೆತಗಳಲ್ಲಿ ಏಕದಿನ ಶತಕ; 14 ವರ್ಷಗಳ ಹಳೆಯ ದಾಖಲೆ ಉಡೀಸ್
ಅನ್ಮೋಲ್ಪ್ರೀತ್ ಸಿಂಗ್
ಪೃಥ್ವಿಶಂಕರ
|

Updated on: Dec 21, 2024 | 4:29 PM

Share

ಭಾರತದ ದೇಶೀಯ ಟೂರ್ನಿ ವಿಜಯ್ ಹಜಾರೆ ಟ್ರೋಫಿ ಅಬ್ಬರದಿಂದ ಆರಂಭವಾಗಿದೆ. ಟೂರ್ನಿಯ ಮೊದಲ ದಿನವೇ ಹಲವು ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಅರುಣಾಚಲ ಪ್ರದೇಶ ಮತ್ತು ಪಂಜಾಬ್ ತಂಡಗಳ ನಡುವೆ ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ತಂಡದ ಸ್ಟಾರ್ ಬ್ಯಾಟ್ಸ್​ಮನ್ ಅನ್ಮೋಲ್ಪ್ರೀತ್ ಸಿಂಗ್ ಸಿಡಿಲಬ್ಬರದ ಶತಕ ಸಿಡಿಸಿ ಬರೋಬ್ಬರಿ 14 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಅರುಣಾಚಲ ಪ್ರದೇಶದ ವಿರುದ್ಧದ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ ಅನ್ಮೋಲ್ಪ್ರೀತ್ ಲಿಸ್ಟ್-ಎ ಕ್ರಿಕೆಟ್‌ನಲ್ಲಿ ಅತಿವೇಗದ ಶತಕ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ಟೀಂ ಇಂಡಿಯಾದ ಮಾಜಿ ಆಟಗಾರ ಯೂಸುಫ್ ಪಠಾಣ್ ಹೆಸರಿನಲ್ಲಿತ್ತು.

45 ಎಸೆತಗಳಲ್ಲಿ 115 ರನ್

ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಅನ್ಮೋಲ್‌ಪ್ರೀತ್ ಸಿಂಗ್ 45 ಎಸೆತಗಳಲ್ಲಿ 115 ರನ್​ಗಳ ಅಜೇಯ ಇನ್ನಿಂಗ್ಸ್ ಆಡಿದರು. ಈ ವೇಳೆ ಅವರ ಬ್ಯಾಟ್‌ನಿಂದ 12 ಬೌಂಡರಿ ಮತ್ತು 9 ಭರ್ಜರಿ ಸಿಕ್ಸರ್‌ಗಳು ಸಿಡಿದವು. ಬರೋಬ್ಬರಿ 255.56 ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆಹಾಕಿದ ಅನ್ಮೋಲ್‌ಪ್ರೀತ್ ಏಕಪಕ್ಷೀಯ ರೀತಿಯಲ್ಲಿ ತಮ್ಮ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ಅನ್ಮೋಲ್‌ಪ್ರೀತ್‌ಗಿಂತ ಮೊದಲು ಯೂಸುಫ್ ಪಠಾಣ್ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ವೇಗದ ಶತಕ ದಾಖಲಿಸಿದ್ದರು. 2009-10ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಮಹಾರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಬರೋಡಾ ಪರ ಕಣಕ್ಕಿಳಿದಿದ್ದ ಯೂಸುಫ್ 40 ಎಸೆತಗಳಲ್ಲಿ ಅತಿ ವೇಗದ ಶತಕ ಬಾರಿಸಿದ್ದ ಸಾಧನೆ ಮಾಡಿದ್ದರು. ಇದೀಗ ಆ ದಾಖಲೆ ಅನ್ಮೋಲ್‌ಪ್ರೀತ್ ಪಾಲಾಗಿದೆ.

ಈ ಸಾಧನೆ ಮಾಡಿದ 3ನೇ ಬ್ಯಾಟ್ಸ್​ಮನ್

ಇದಲ್ಲದೆ ಅನ್ಮೋಲ್ಪ್ರೀತ್ ಸಿಂಗ್ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅತಿವೇಗದ ಶತಕ ಗಳಿಸಿದ ವಿಶ್ವದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಅವರಿಗಿಂತ ಮುಂದೆ ಆಸ್ಟ್ರೇಲಿಯಾದ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಮತ್ತು ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಮಾತ್ರ ಇದ್ದಾರೆ. ಜೇಕ್ ಫ್ರೇಸರ್-ಮೆಕ್‌ಗುರ್ಕ್ 29 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರೆ, ಡಿವಿಲಿಯರ್ಸ್ 2015 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 31 ಎಸೆತಗಳಲ್ಲಿ ಶತಕ ಗಳಿಸಿದ್ದರು.

ಪಂಜಾಬ್ ತಂಡಕ್ಕೆ ಸುಲಭ ಜಯ

ಉಭಯ ತಂಡಗಳ ನಡುವೆ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಅರುಣಾಚಲ ಪ್ರದೇಶ ತಂಡ ಕೇವಲ 48.4 ಓವರ್‌ಗಳಲ್ಲಿ 164 ರನ್ ಗಳಿಸಿ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕೇವಲ 12.3 ಓವರ್‌ಗಳಲ್ಲಿ ಜಯ ಸಾಧಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!