AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ಬರೋಬ್ಬರಿ 2 ಕೋಟಿಗೆ ಹರಾಜಾದ ಅನ್ನಾಬೆಲ್

Annabel Sutherland: ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ನಡುವೆ ಅನ್ನಾಬೆಲ್ ಖರೀದಿಗಾಗಿ ಭರ್ಜರಿ ಪೈಪೋಟಿ ಕಂಡು ಬಂತು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಬರೋಬ್ಬರಿ 2 ಕೋಟಿ ರೂ. ನೀಡಿ ಅನ್ನಾಬೆಲ್ ಅವರನ್ನು ತನ್ನದಾಗಿಸಿಕೊಂಡಿದೆ.

WPL 2024: ಬರೋಬ್ಬರಿ 2 ಕೋಟಿಗೆ ಹರಾಜಾದ ಅನ್ನಾಬೆಲ್
Annabel Sutherland
TV9 Web
| Edited By: |

Updated on:Dec 09, 2023 | 3:51 PM

Share

ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ್ತಿ ಅನ್ನಾಬೆಲ್ ಸದರ್​ಲ್ಯಾಂಡ್ (Annabel Sutherland ) ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024)​​ ಸೀಸನ್-2 ರ ಬಿಡ್ಡಿಂಗ್​ನಲ್ಲಿ ಬರೋಬ್ಬರಿ 2 ಕೋಟಿ ರೂ.ಗೆ ಹರಾಜಾಗಿದ್ದಾರೆ. 40 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅನ್ನಾಬೆಲ್ ಖರೀದಿಗೆ ಐದು ಫ್ರಾಂಚೈಸಿಗಳು ಆಸಕ್ತಿವಹಿಸಿದ್ದವು. ಇದರಿಂದ ಬಿಡ್ಡಿಂಗ್ ಪೈಪೋಟಿ ಏರ್ಪಟ್ಟಿತ್ತು.

ಪರಿಣಾಮ ಆರಂಭದಲ್ಲೇ 1 ಕೋಟಿ ರೂ. ದಾಟಿತು. ಇದಾಗ್ಯೂ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ನಡುವೆ ಅನ್ನಾಬೆಲ್ ಖರೀದಿಗಾಗಿ ಭರ್ಜರಿ ಪೈಪೋಟಿ ಕಂಡು ಬಂತು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಬರೋಬ್ಬರಿ 2 ಕೋಟಿ ರೂ. ನೀಡಿ ಅನ್ನಾಬೆಲ್ ಅವರನ್ನು ತನ್ನದಾಗಿಸಿಕೊಂಡಿದೆ.

ಇದನ್ನೂ ಓದಿ: WPL 2024: RCB ತಂಡಕ್ಕೆ ಹೊಸ ಆಟಗಾರ್ತಿ ಎಂಟ್ರಿ

22 ವರ್ಷದ ಆಲ್​ರೌಂಡರ್ ಆಗಿರುವ ಅನ್ನಾಬೆಲ್ ಸದರ್​ಲ್ಯಾಂಡ್ ಆಸ್ಟ್ರೇಲಿಯಾ ಪರ ಇದುವರೆಗೆ 22 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 97 ರನ್​ ಕಲೆಹಾಕಿದರೆ, 10 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಉಳಿಸಿಕೊಂಡಿರುವ ಆಟಗಾರ್ತಿಯರು: ಆಲಿಸ್ ಕ್ಯಾಪ್ಸೆ, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ಜೆಸ್ ಜೊನಾಸೆನ್, ಲಾರಾ ಹ್ಯಾರಿಸ್, ಮರಿಜಾನ್ನೆ ಕಪ್, ಮೆಗ್ ಲ್ಯಾನಿಂಗ್, ಮಿನ್ನು ಮಣಿ, ಪೂನಮ್ ಯಾದವ್, ರಾಧಾ ಯಾದವ್, ಶಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತನಿಯಾಸ್ ಭಾಟಿಯಾ.

ವೇದಾ ಕೃಷ್ಣಮೂರ್ತಿ ಅನ್​ಸೋಲ್ಡ್​:

ಭಾರತೀಯ ಆಟಗಾರ್ತಿ ವೇದಾ ಕೃಷ್ಣ ಮೂರ್ತಿ ಹಾಗೂ ಪೂನಂ ರೌತ್ ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ ಹರಾಜಿನಲ್ಲಿ ಅನ್​ಸೋಲ್ಡ್ ಆಗಿದ್ದಾರೆ. ಈ ಇಬ್ಬರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ. ಇದಾಗ್ಯೂ ಅಂತಿಮ ಸುತ್ತಿನಲ್ಲಿ ಹರಾಜಾಗಲಿದ್ದಾರಾ ಕಾದು ನೋಡಬೇಕಿದೆ.

Published On - 3:50 pm, Sat, 9 December 23

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!