AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2025ರ ಚಾಂಪಿಯನ್ಸ್ ಟ್ರೋಫಿಗಾಗಿ ಪಾಕ್ ನೆಲಕ್ಕೆ ಕಾಲಿಡುತ್ತಾ ಭಾರತ? ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದೇನು?

ಸಮಯ ಬಂದಾಗ ಭಾರತ ಸರ್ಕಾರ ಮತ್ತು ಗೃಹ ಸಚಿವಾಲಯವು ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ನಿರ್ಧರಿಸುತ್ತದೆ

2025ರ ಚಾಂಪಿಯನ್ಸ್ ಟ್ರೋಫಿಗಾಗಿ ಪಾಕ್ ನೆಲಕ್ಕೆ ಕಾಲಿಡುತ್ತಾ ಭಾರತ? ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದೇನು?
ಬಾಬರ್, ಕೊಹ್ಲಿ
TV9 Web
| Edited By: |

Updated on: Nov 17, 2021 | 4:23 PM

Share

ಚಾಂಪಿಯನ್ಸ್ ಟ್ರೋಫಿಯ ಆತಿಥ್ಯವನ್ನು ಪಾಕಿಸ್ತಾನಕ್ಕೆ ಐಸಿಸಿ ನೀಡಿದೆ. 2025ರಲ್ಲಿ ಈ ಟೂರ್ನಿ ಪಾಕಿಸ್ತಾನದಲ್ಲಿ ನಡೆಯಲಿದೆ. ಇದೇ ಮೊದಲ ಬಾರಿಗೆ ದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಆಯೋಜನೆಯಾಗಲಿದೆ. ಅಲ್ಲದೆ, ಸುಮಾರು 29 ವರ್ಷಗಳ ನಂತರ ಪಾಕಿಸ್ತಾನದಲ್ಲಿ ಐಸಿಸಿ ಕಾರ್ಯಕ್ರಮ ನಡೆಯಲಿದೆ. ಕಳೆದ ಬಾರಿ 1996ರ ವಿಶ್ವಕಪ್ ಪಂದ್ಯಗಳು ಇಲ್ಲಿ ನಡೆದಿದ್ದವು. ಆಗ ಭಾರತ ಮತ್ತು ಶ್ರೀಲಂಕಾ ಜೊತೆಗೆ ಪಾಕಿಸ್ತಾನವು ವಿಶ್ವಕಪ್‌ನ ಜಂಟಿ ಆತಿಥ್ಯ ವಹಿಸಿತ್ತು. ಆದರೆ ಇದೀಗ ಮೊದಲ ಬಾರಿಗೆ ಪಾಕಿಸ್ತಾನ ತನ್ನದೇ ಆದ ಐಸಿಸಿ ಕಾರ್ಯಕ್ರಮವನ್ನು ಆಯೋಜಿಸಲಿದೆ. ಇದರೊಂದಿಗೆ ಭಾರತ ಪಾಕಿಸ್ತಾನಕ್ಕೆ ಹೋಗುವುದು ಕೂಡ ಒಂದು ರೀತಿಯಲ್ಲಿ ನಿರ್ಧಾರವಾಗಿದೆ. ಏಕೆಂದರೆ ಐಸಿಸಿ ಕಾರ್ಯಕ್ರಮವನ್ನು ಬಹಿಷ್ಕರಿಸುವುದು ಕಷ್ಟ. ಆದರೆ ಭಾರತ ಇದರಲ್ಲಿ ಆಡಬೇಕೋ ಬೇಡವೋ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಏಕೆಂದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಗಳಲ್ಲಿ ಸರ್ಕಾರದ ಪಾತ್ರವೂ ಉಳಿದಿದೆ.

ಚಾಂಪಿಯನ್ಸ್ ಟ್ರೋಫಿಯ ಆತಿಥ್ಯವನ್ನು ಪಾಕಿಸ್ತಾನ ಪಡೆದ ನಂತರ ಭಾರತದ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಈ ಕುರಿತು ಹೇಳಿಕೆ ನೀಡಿದ್ದಾರೆ. ಈ ಟೂರ್ನಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ತೆರಳುವ ಪ್ರಶ್ನೆಗೆ, ‘ಸಮಯ ಬಂದಾಗ ಭಾರತ ಸರ್ಕಾರ ಮತ್ತು ಗೃಹ ಸಚಿವಾಲಯವು ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ನಿರ್ಧರಿಸುತ್ತದೆ’ ಎಂದರು. ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳ ಸಂದರ್ಭದಲ್ಲಿ, ಸೂಕ್ತ ಚರ್ಚೆ ನಡೆಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅಂದಹಾಗೆ, ಪ್ರಪಂಚದ ಅನೇಕ ದೇಶಗಳು ಪಾಕಿಸ್ತಾನಕ್ಕೆ ಭೇಟಿ ನೀಡುವುದರಿಂದ ದೂರ ಸರಿಯುತ್ತಿವೆ. 2009ರಲ್ಲಿ ಶ್ರೀಲಂಕಾ ತಂಡದ ಮೇಲೆ ನಡೆದ ದಾಳಿಯ ನಂತರ ಯಾವುದೇ ಪ್ರಮುಖ ತಂಡ ಅಲ್ಲಿ ಪ್ರವಾಸ ಮಾಡಿಲ್ಲ. ಇತ್ತೀಚೆಗೆ ಇಂಗ್ಲೆಂಡ್, ನ್ಯೂಜಿಲೆಂಡ್ ಪಾಕಿಸ್ತಾನ ಪ್ರವಾಸವನ್ನು ರದ್ದುಗೊಳಿಸಿತ್ತು.

ಇತ್ತೀಚಿನ ದಿನಗಳಲ್ಲಿ, ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಗಳು ಐಸಿಸಿ ಕಾರ್ಯಕ್ರಮಗಳ ಸಮಯದಲ್ಲಿ ಮಾತ್ರ ನಡೆಯುತ್ತವೆ. ಇವುಗಳಲ್ಲಿ ವಿಶ್ವಕಪ್, ಟಿ 20 ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿಯಂತಹ ಘಟನೆಗಳು ಸೇರಿವೆ. ಇತ್ತೀಚೆಗಷ್ಟೇ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ನಡುವೆ ಪಂದ್ಯ ನಡೆದಿತ್ತು. ಈ ಹಿಂದೆ 2019 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯವಿತ್ತು.

2012ರಿಂದ ಭಾರತ-ಪಾಕಿಸ್ತಾನ ನಡುವೆ ಸರಣಿ ಆಡಿಲ್ಲ ಭಾರತ ಕೊನೆಯ ಬಾರಿಗೆ 2005-06ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿತ್ತು. ಅದೇ ಸಮಯದಲ್ಲಿ, ಈ ಎರಡು ದೇಶಗಳ ನಡುವಿನ ಕೊನೆಯ ದ್ವಿಪಕ್ಷೀಯ ಸರಣಿಯನ್ನು 2012 ರಲ್ಲಿ ಪಾಕಿಸ್ತಾನವು ಭಾರತ ಪ್ರವಾಸ ಕೈಗೊಂಡಾಗ ಆಡಲಾಯಿತು. ಅಂದಿನಿಂದ, ಎರಡೂ ದೇಶಗಳು ಐಸಿಸಿ ಈವೆಂಟ್‌ ಮತ್ತು ಏಷ್ಯಾ ಕಪ್‌ನಂತಹ ಪಂದ್ಯಾವಳಿಗಳನ್ನು ಹೊರತುಪಡಿಸಿ ಪರಸ್ಪರ ಆಡುತ್ತಿಲ್ಲ. ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಸರಣಿಯ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದೆ, ಆದರೆ ಉಭಯ ದೇಶಗಳ ನಡುವಿನ ರೀತಿಯ ಪರಿಸ್ಥಿತಿಯಿಂದಾಗಿ ಅದು ನಡೆಯುತ್ತಿಲ್ಲ. ಇತ್ತೀಚೆಗಷ್ಟೇ ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಸಾಕಷ್ಟು ಬಿಕ್ಕಟ್ಟು ಉಂಟಾಗಿದೆ. ಇದರಿಂದ ಸಮಸ್ಯೆಗಳೂ ಹೆಚ್ಚಿವೆ.

ಅದೇ ಸಮಯದಲ್ಲಿ, 2024 ಮತ್ತು 2031 ರ ನಡುವೆ ಎಂಟು ವರ್ಷಗಳಲ್ಲಿ ಮೂರು ಪ್ರಮುಖ ಪಂದ್ಯಾವಳಿಗಳನ್ನು ಆಯೋಜಿಸುವ ಹಕ್ಕನ್ನು ಐಸಿಸಿ ಭಾರತಕ್ಕೆ ನೀಡಿದೆ. ಇದರ ಅಡಿಯಲ್ಲಿ, 2026 ರಲ್ಲಿ T20 ವಿಶ್ವಕಪ್, 2029 ರಲ್ಲಿ ಚಾಂಪಿಯನ್ಸ್ ಟ್ರೋಫಿ ಮತ್ತು 2031 ರಲ್ಲಿ ವಿಶ್ವಕಪ್ ಅನ್ನು ಆಡಲಾಗುತ್ತದೆ. ಭಾರತವು ಅತಿ ಹೆಚ್ಚು ಹೋಸ್ಟಿಂಗ್ ಹಕ್ಕುಗಳನ್ನು ಪಡೆದುಕೊಂಡಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ