AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Merchant Trophy: ಕರ್ನಾಟಕ ಸಂಭಾವ್ಯ ತಂಡದಲ್ಲಿ ಸ್ಥಾನ ಪಡೆದ ರಾಹುಲ್ ದ್ರಾವಿಡ್ ಕಿರಿಯ ಪುತ್ರ

ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಈ ಹಿಂದೆ 14 ವರ್ಷದೊಳಗಿನವರ ರಾಜ್ಯ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಇದೀಗ ವಿಜಯ್ ಮರ್ಚೆಂಟ್ ಟೂರ್ನಿಗಾಗಿ ಆಯ್ಕೆ ಮಾಡಲಾದ ಕರ್ನಾಟಕ ಸಂಭಾವ್ಯ ತಂಡದಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Vijay Merchant Trophy: ಕರ್ನಾಟಕ ಸಂಭಾವ್ಯ ತಂಡದಲ್ಲಿ ಸ್ಥಾನ ಪಡೆದ ರಾಹುಲ್ ದ್ರಾವಿಡ್ ಕಿರಿಯ ಪುತ್ರ
Rahul Dravid-Anvay Dravid
ಝಾಹಿರ್ ಯೂಸುಫ್
|

Updated on: Nov 10, 2024 | 10:09 AM

Share

ಡಿಸೆಂಬರ್ 16 ರಿಂದ ಶುರುವಾಗಲಿರುವ ವಿಜಯ್ ಮರ್ಚೆಂಟ್ ಟ್ರೋಫಿಗಾಗಿ ಕರ್ನಾಟಕ ಸಂಭಾವ್ಯ ಆಟಗಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಸ್ಥಾನ ಪಡೆದಿದ್ದಾರೆ. ದ್ರಾವಿಡ್ ಅವರ ಹಿರಿಯ ಪುತ್ರ ಸಮಿತ್ ದ್ರಾವಿಡ್ ಈಗಾಗಲೇ ಕರ್ನಾಟಕ ಅಂಡರ್-19 ತಂಡವನ್ನು ಪ್ರತಿನಿಧಿಸಿದ್ದು, ಇದೀಗ ಕಿರಿಯ ಪುತ್ರ ಕೂಡ ಅಣ್ಣನ ಹಾದಿಯಲ್ಲಿದ್ದಾರೆ.

ಅದರಂತೆ ವಿಜಯ್ ಮರ್ಚೆಂಟ್ ಟೂರ್ನಿಗಾಗಿ ಆಯ್ಕೆ ಮಾಡಲಾದ 35 ಸದಸ್ಯರ ಬಳಗದಲ್ಲಿ ಅನ್ವಯ್ ಹೆಸರು ಕೂಡ ಕಾಣಿಸಿಕೊಂಡಿದೆ. ವಿಶೇಷ ಎಂದರೆ ಅನ್ವಯ್ ದ್ರಾವಿಡ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್. ಈ ಹಿಂದೆ ರಾಹುಲ್ ದ್ರಾವಿಡ್ ಕೂಡ ವಿಕೆಟ್ ಕೀಪರ್ ಆಗಿ ಕರ್ನಾಟಕ ಪರ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದರು. ಇದೀಗ ಕಿರಿಯ ಪುತ್ರ ಕೂಡ ವಿಕೆಟ್ ಕೀಪಿಂಗ್ ಜವಾಬ್ದಾರಿಯೊಂದಿಗೆ ಕಿರಿಯರ ತಂಡದಲ್ಲಿ ಮಿಂಚುತ್ತಿದ್ದಾರೆ.

ಇದೀಗ ವಿಜಯ್ ಮರ್ಚೆಂಟ್ ಟೂರ್ನಿಗಾಗಿ ಕರ್ನಾಟಕದ ಸಂಭಾವ್ಯ ತಂಡದಲ್ಲಿ ಮೂವರು ವಿಕೆಟ್ ಕೀಪರ್​ಗಳು ಸ್ಥಾನ ಪಡೆದಿದ್ದು, ಅನ್ವಯ್ ಜೊತೆ ಆದಿತ್ಯ ಝಾ ಮತ್ತು ಜಾಯ್ ಜೇಮ್ಸ್ ಕೂಡ ಗ್ಲೌಸ್ ತೊಡಲು ಸಜ್ಜಾಗಿದ್ದಾರೆ.

ಅಂದಹಾಗೆ ಕಳೆದ ವರ್ಷ ನಡೆದ ಅಂತರ ವಲಯ ಕೂಟದಲ್ಲಿ 14 ವರ್ಷದೊಳಗಿನವರ ರಾಜ್ಯ ತಂಡದ ನಾಯಕರಾಗಿ ಅನ್ವಯ್ ದ್ರಾವಿಡ್ ಕಾಣಿಸಿಕೊಂಡಿದ್ದರು. ಅಲ್ಲದೆ, ಇತ್ತೀಚೆಗೆ ಕೆಎಸ್‌ಸಿಎ 16 ವರ್ಷದೊಳಗಿನವರ ಅಂತರ ವಲಯ ಟೂರ್ನಿಯಲ್ಲಿ ತುಮಕೂರು ವಲಯ ವಿರುದ್ಧ ಬೆಂಗಳೂರು ವಲಯದ ಪರವಾಗಿ  ಅನ್ವಯ್ ಅಜೇಯ 200 ರನ್ ಬಾರಿಸಿ ಮಿಂಚಿದ್ದರು.

ಇದನ್ನೂ ಓದಿ: IPL 2025: 3 ವರ್ಷಗಳಲ್ಲಿ ಕಪ್: ನಿವೃತ್ತಿ ಸುಳಿವು ನೀಡಿದ ವಿರಾಟ್ ಕೊಹ್ಲಿ

ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ ಅನ್ವಯ್ ದ್ರಾವಿಡ್ ಅವರು ವಿಜಯ್ ಮರ್ಚೆಂಟ್ ಟೂರ್ನಿಗಾಗಿ ಆಯ್ಕೆ ಮಾಡಲಾದ ಸಂಭಾವ್ಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಕರ್ನಾಟಕ ಅಂಡರ್-16 ತಂಡ ಫೈನಲ್ ಆಗಲಿದ್ದು, ಈ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ ಜೂನಿಯರ್ ದ್ರಾವಿಡ್.

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ