AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳನ್ನ ಹೆದರಿ ಹೊರಗುಳಿದ್ರಾ ಶಾಹೀನ್ ಅಫ್ರಿದಿ..?

India vs Pakistan: 2021ರ ಟಿ20 ವಿಶ್ವಕಪ್​ನಲ್ಲಿ ಕೆಎಲ್ ರಾಹುಲ್, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ವಿಕೆಟ್ ಕಬಳಿಸಿ ಅಫ್ರಿದಿ ಮೈದಾನದಲ್ಲೇ ಭಾರತೀಯ ಆಟಗಾರರನ್ನು ಹೀಯಾಳಿಸಿದ್ದರು.

ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳನ್ನ ಹೆದರಿ ಹೊರಗುಳಿದ್ರಾ ಶಾಹೀನ್ ಅಫ್ರಿದಿ..?
IND vs PAK
TV9 Web
| Updated By: ಝಾಹಿರ್ ಯೂಸುಫ್|

Updated on: Aug 22, 2022 | 11:56 AM

Share

ಆಗಸ್ಟ್ 28 ರಂದು ಯುಎಇನ ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಪಾಕಿಸ್ತಾನದ ಸ್ಟಾರ್ ವೇಗಿ ಶಾಹೀನ್ ಶಾ ಆಫ್ರಿದಿ ಅಲಭ್ಯರಾಗಿದ್ದಾರೆ. ಮೊಣಕಾಲಿನ ಗಾಯದಿಂದಾಗಿ ಅವರು ಏಷ್ಯಾ ಕಪ್-2022 ರಿಂದ ಹೊರಗುಳಿದಿದ್ದಾರೆ. ಆದರೆ ಅಫ್ರಿದಿ ಹೊರಗುಳಿಯಲು ಗಾಯವೊಂದೇ ಕಾರಣವಲ್ಲ ಎಂದಿದ್ದಾರೆ ಪಾಕಿಸ್ತಾನದ ಮಾಜಿ ವೇಗಿ ಅಕಿಬ್ ಜಾವೇದ್​. ಶಾಹೀನ್ ಅಫ್ರಿದಿ ಮೇಲೆ ಕೆಲಸದ ಹೊರೆ ಹೆಚ್ಚಾಗಿದೆ. ಹೀಗಾಗಿ ಯುವ ವೇಗಿ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿರಬಹುದು ಎಂದು ಅಕಿಬ್ ಜಾವೇದ್ ಅಭಿಪ್ರಾಯಪಟ್ಟಿದ್ದಾರೆ.  ಇದೀಗ ಮಾಜಿ ಕ್ರಿಕೆಟಿಗನ ಈ ಹೇಳಿಕೆಯು ಮಹತ್ವ ಪಡೆದುಕೊಂಡಿದೆ. ಏಕೆಂದರೆ ಅಕಿಬ್ ಜಾವೇದ್ ಈ ಹಿಂದೆ ಪಾಕಿಸ್ತಾನದ ಬೌಲಿಂಗ್ ಕೋಚ್ ಆಗಿ ಕೂಡ ಕಾರ್ಯ ನಿರ್ವಹಿಸಿದ್ದರು.

ಇದೀಗ ಪ್ರಮುಖ ಟೂರ್ನಿಯಿಂದ ಶಾಹೀನ್ ಅಫ್ರಿದಿ ಹೊರಗುಳಿಯುತ್ತಿದ್ದಂತೆ, ಗಾಯವೊಂದೇ ಕಾರಣವಲ್ಲ ಎಂಬ ಅಭಿಪ್ರಾಯವನ್ನು ಅಕಿಬ್ ಜಾವೇದ್ ಮುಂದಿಟ್ಟಿದ್ದಾರೆ. ಶಾಹೀನ್ ನಿರಂತರವಾಗಿ ಕ್ರಿಕೆಟ್​ ಆಡುತ್ತಿದ್ದು, ಇದೀಗ ಕೆಲಸದ ಹೊರೆ ಹೆಚ್ಚಾಗಿದೆ. ಇದೇ ಕಾರಣದಿಂದಾಗಿ ಒತ್ತಡಕ್ಕೊಳಗಾಗುವ ಭಾರತದ ವಿರುದ್ದದ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಅಕಿಬ್ ಜಾವೇದ್ ತಿಳಿಸಿದ್ದಾರೆ.

ಏಕೆಂದರೆ ಅಫ್ರಿದಿ ಪ್ರಸ್ತುತ ವಿಶ್ವದ ಅತ್ಯುತ್ತಮ ವೇಗದ ಬೌಲರ್‌ಗಳಲ್ಲಿ ಒಬ್ಬರು. ಅವರ ವೇಗ ಮತ್ತು ಸ್ವಿಂಗ್ ಅನೇಕ ಬ್ಯಾಟ್ಸ್‌ಮನ್‌ಗಳನ್ನು ತೊಂದರೆಗೀಡು ಮಾಡಿದೆ. 22 ವರ್ಷ ವಯಸ್ಸಿನ ಶಾಹೀನ್ ಶಾ ಆಫ್ರಿದಿ ಅವರ ಬೌಲಿಂಗ್ ಸರಾಸರಿಯು ಎಲ್ಲಾ ಮೂರು ಸ್ವರೂಪಗಳಲ್ಲಿ 25 ಕ್ಕಿಂತ ಕಡಿಮೆಯಿದೆ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಅಷ್ಟೇ ಅಲ್ಲದೆ ಕೆಲ ವರ್ಷಗಳಿಂದ ಅವರು ಪಾಕಿಸ್ತಾನದ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಿದ್ದಾರೆ. ಕಳೆದ ವರ್ಷ ನಡೆದ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ದದ ಪಂದ್ಯದಲ್ಲಿ ಪಾಕ್​ ಗೆಲುವಿನಲ್ಲಿ ಅಫ್ರಿದಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಇದೀಗ ಏಷ್ಯಾಕಪ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಆದರೆ ಇಂತಹ ನಿರ್ಧಾರಕ್ಕೆ ಕಾರಣ ಕೆಲಸದ ಹೊರೆಯುಂಟಾದ ಗಾಯ ಕಾರಣವಾಗಿರಬಹುದು. ಏಕೆಂದರೆ ಶಾಹೀನ್ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ. ಅಫ್ರಿದಿ ಅಲಭ್ಯತೆಯು ಪಾಕಿಸ್ತಾನಕ್ಕೆ ಭಾರೀ ಸಂಕಷ್ಟ ತರಲಿದೆ ಎಂಬುದರಲ್ಲಿ ಅನುಮಾನವೇ ಇಲ್ಲ. ಆದರೆ ಸುದೀರ್ಘ ವೃತ್ತಿಜೀವನವನ್ನು ಗಮನದಲ್ಟಿಟ್ಟು ಇಂತಹ ನಿರ್ಧಾರ ತೆಗೆದುಕೊಂಡಿರಬೇಕು ಎಂದು ಅಕಿಬ್ ಜಾವೇದ್ ಹೇಳಿದ್ದಾರೆ.

ಇದೀಗ ಪಾಕಿಸ್ತಾನ್ ತಂಡದ ಮಾಜಿ ಬೌಲಿಂಗ್ ಕೋಚ್ ಅಕಿಬ್ ಜಾವೇದ್ ಅವರ ಈ ಹೇಳಿಕೆಯು ಮಹತ್ವ ಪಡೆದುಕೊಂಡಿದೆ. ಅದರಲ್ಲೂ 2021ರ ಟಿ20 ವಿಶ್ವಕಪ್​ನಲ್ಲಿ ಕೆಎಲ್ ರಾಹುಲ್, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ವಿಕೆಟ್ ಕಬಳಿಸಿ ಅಫ್ರಿದಿ ಮೈದಾನದಲ್ಲೇ ಭಾರತೀಯ ಆಟಗಾರರನ್ನು ಹೀಯಾಳಿಸಿದ್ದರು. ಇದೇ ಕಾರಣದಿಂದಾಗಿ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳು ಅಫ್ರಿದಿ ವಿರುದ್ದ ಏಷ್ಯಾಕಪ್​ನಲ್ಲಿ ಸೇಡು ತೀರಿಸಿಕೊಳ್ಳುವ ನಿರೀಕ್ಷೆಯಿತ್ತು. ಆದರೀಗ ಮೊಣಕಾಲಿನ ಗಾಯದ ಕಾರಣ ಶಾಹೀನ್ ಅಫ್ರಿದಿ ಹೊರಗುಳಿದಿದ್ದಾರೆ. ಆದರೆ ಅಫ್ರಿದಿ ಹೊರಗುಳಿಯಲು ಗಾಯವೊಂದೇ ಕಾರಣವಲ್ಲ ಎನ್ನುವ ಮೂಲಕ ಪಾಕ್ ಮಾಜಿ ಆಟಗಾರ ಅಕಿಬ್ ಜಾವೇದ್ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ