Arjun Tendulkar: ನಿಶ್ಚಿತಾರ್ಥದ ಬೆನ್ನಲ್ಲೇ ಅರ್ಜುನ್ ತೆಂಡೂಲ್ಕರ್ಗೆ ಬಿಗ್ ಶಾಕ್..!
Arjun Tendulkar: ಅರ್ಜುನ್ ತೆಂಡೂಲ್ಕರ್ ಅವರು ಇತ್ತೀಚೆಗಷ್ಟೇ ಸಾನಿಯಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಸಂತಸದಲ್ಲಿದ್ದರು. ಆದರೆ ವೃತ್ತಿಬದುಕಿನಲ್ಲಿ ಆಘಾತ ಎದುರಿಸಿರುವ ಅರ್ಜುನ್ಗೆ ದುಲೀಪ್ ಟ್ರೋಫಿಯಲ್ಲಿ ಆಡಲು ಅವಕಾಶ ಸಿಕ್ಕಿಲ್ಲ. ರಣಜಿ ಟ್ರೋಫಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರೂ, ಈಶಾನ್ಯ ವಲಯ ತಂಡವು ಅವರನ್ನು ಆಯ್ಕೆ ಮಾಡಿಲ್ಲ.

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar) ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ತಮ್ಮ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ಆದಾಗ್ಯೂ ವೃತ್ತಿಜೀವನದ ವಿಚಾರದಲ್ಲಿ ಅರ್ಜುನ್ಗೆ ದೊಡ್ಡ ಆಘಾತ ಎದುರಾಗಿದೆ. ಆಗಸ್ಟ್ 28 ರಿಂದ ಪ್ರಾರಂಭವಾಗುವ ದುಲೀಪ್ ಟ್ರೋಫಿಯಲ್ಲಿ (Duleep Trophy) ಅರ್ಜುನ್ಗೆ ಅವಕಾಶ ಸಿಕ್ಕಿಲ್ಲ. ಈ ಪಂದ್ಯಾವಳಿಯಲ್ಲಿ ಅನೇಕ ಸ್ಟಾರ್ ಆಟಗಾರರು ಆಡುತ್ತಿದ್ದಾರೆ, ಆದರೆ ಸಚಿನ್ ಅವರ ಮಗನನ್ನು ಈ ಬಾರಿ ನಿರ್ಲಕ್ಷಿಸಲಾಗಿದೆ. ಗೋವಾ ಪರ ದೇಶೀಯ ಕ್ರಿಕೆಟ್ ಆಡುವ ಅರ್ಜುನ್ ತೆಂಡೂಲ್ಕರ್ ದುಲೀಪ್ ಟ್ರೋಫಿಯಲ್ಲಿ ಆಡುವ ಭರವಸೆಯಲ್ಲಿದ್ದರು, ಆದರೆ ಈಶಾನ್ಯ ವಲಯ ತಂಡ ಅವರ ಭರವಸೆಯನ್ನು ಹುಸಿಗೊಳಿಸಿದೆ.
ದುಲೀಪ್ ಟ್ರೋಫಿಯಿಂದ ಅರ್ಜನ್ ಔಟ್
ರಣಜಿ ಟ್ರೋಫಿಯ ಪ್ಲೇಟ್ ಗ್ರೂಪ್ನಲ್ಲಿ ನಾಲ್ಕು ಪಂದ್ಯಗಳಲ್ಲಿ 16 ವಿಕೆಟ್ಗಳನ್ನು ಕಬಳಿಸಿದ್ದ ಅರ್ಜುನ್ ತೆಂಡೂಲ್ಕರ್ ಅವರನ್ನು ದುಲೀಪ್ ಟ್ರೋಫಿಗಾಗಿ ಈಶಾನ್ಯ ವಲಯ ತಂಡದಲ್ಲಿ ಸೇರಿಸಲಾಗಿಲ್ಲ. ರೊಂಗ್ಸೆನ್ ಜೊನಾಥನ್ ನಾಯಕತ್ವದ ಈ ತಂಡವು ಆಗಸ್ಟ್ 28 ರಂದು ಕೇಂದ್ರ ವಲಯವನ್ನು ಎದುರಿಸಲಿದೆ. ರಣಜಿ ಟ್ರೋಫಿಯ ಪ್ಲೇಟ್ ಗ್ರೂಪ್ನ ನಾಲ್ಕು ಪಂದ್ಯಗಳಲ್ಲಿ ಅರ್ಜುನ್ ತೆಂಡೂಲ್ಕರ್ 16 ವಿಕೆಟ್ಗಳನ್ನು ಕಬಳಿಸಿದ್ದರು. ಈ ಕಾರಣದಿಂದಾಗಿ, ಗೋವಾ ಪ್ಲೇಟ್ ಡಿವಿಷನ್ ಪ್ರಶಸ್ತಿಯನ್ನು ಸಹ ಗೆದ್ದುಕೊಂಡಿತು.
ಅರ್ಜುನ್ 2022-23 ರ ಆವೃತ್ತಿಯಿಂದ ಗೋವಾ ಪರ ಆಡುತ್ತಿದ್ದಾರೆ. ಡಿಸೆಂಬರ್ 2023 ರಲ್ಲಿ ಗೋವಾ ಪರ ತಮ್ಮ ಮೊದಲ ಪ್ರಥಮ ದರ್ಜೆ ಪಂದ್ಯವನ್ನಾಡಿದ್ದ ಅರ್ಜುನ್, ಭರ್ಜರಿ ಶತಕ ಬಾರಿಸಿದ್ದರು. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಇದುವರೆಗೆ 37 ವಿಕೆಟ್ಗಳನ್ನು ಕಬಳಿಸಿರುವ ಅರ್ಜುನ್ 532 ರನ್ ಬಾರಿಸಿದ್ದಾರೆ. ನವೆಂಬರ್ 2022 ರಲ್ಲಿ ಗೋವಾ ಪರ ಲಿಸ್ಟ್ ಎ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ ಅರ್ಜುನ್, 18 ಪಂದ್ಯಗಳಲ್ಲಿ 25 ವಿಕೆಟ್ಗಳನ್ನು ಪಡೆದು 102 ರನ್ಗಳನ್ನು ಗಳಿಸಿದ್ದಾರೆ. ಗೋವಾಕ್ಕೆ ಹೋಗುವ ಮೊದಲು, ಅವರು ಮುಂಬೈ ಪರ ಟಿ20ಗೆ ಪಾದಾರ್ಪಣೆ ಮಾಡಿದ್ದರು. ಅರ್ಜುನ್ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ (ಎಂಐ) ಪರವೂ ಆಡಿದ್ದಾರೆ.
ಒಂದೇ ಒಂದು ಅಂತರರಾಷ್ಟ್ರೀಯ ಪಂದ್ಯವನ್ನಾಡದ ಅರ್ಜುನ್ ತೆಂಡೂಲ್ಕರ್ ಎಷ್ಟು ಕೋಟಿಯ ಒಡೆಯ ಗೊತ್ತಾ?
ಗಿಲ್, ಗಾಯಕ್ವಾಡ್ ಆಡಲಿದ್ದಾರೆ
ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ಶುಭ್ಮನ್ ಗಿಲ್ ಮತ್ತು ಅನುಭವಿ ಬ್ಯಾಟ್ಸ್ಮನ್ ರುತುರಾಜ್ ಗಾಯಕ್ವಾಡ್ ದುಲೀಪ್ ಟ್ರೋಫಿಯಲ್ಲಿ ಆಡಲಿದ್ದಾರೆ. ಈ ಟೂರ್ನಮೆಂಟ್ನಲ್ಲಿ ಶಾರ್ದೂಲ್ ಠಾಕೂರ್ ನಾಯಕತ್ವದಲ್ಲಿ ರುತುರಾಜ್ ಗಾಯಕ್ವಾಡ್ ಪಶ್ಚಿಮ ವಲಯ ತಂಡಕ್ಕಾಗಿ ಆಡಲಿದ್ದಾರೆ. ಇತ್ತ ಶುಭ್ಮನ್ ಗಿಲ್, ದುಲೀಪ್ ಟ್ರೋಫಿಯಲ್ಲಿ ಉತ್ತರ ವಲಯ ತಂಡವನ್ನು ಮುನ್ನಡೆಸಲಿದ್ದಾರೆ.
ಆಗಸ್ಟ್ 28 ರಿಂದ 31 ರವರೆಗೆ ನಡೆಯಲಿರುವ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ, ಉತ್ತರ ವಲಯವು ಇಶಾನ್ ಕಿಶನ್ ನಾಯಕತ್ವದ ಪೂರ್ವ ವಲಯವನ್ನು ಎದುರಿಸಲಿದೆ. ಈಶಾನ್ಯ ವಲಯವು ಧ್ರುವ್ ಜುರೆಲ್ ನೇತೃತ್ವದ ಮಧ್ಯ ವಲಯವನ್ನು ಎದುರಿಸಲಿದೆ. ದುಲೀಪ್ ಟ್ರೋಫಿಯ ಫೈನಲ್ ಸೆಪ್ಟೆಂಬರ್ 11 ರಿಂದ 15 ರವರೆಗೆ ನಡೆಯಲಿದೆ. ಎಲ್ಲಾ ಪಂದ್ಯಗಳು ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ನಡೆಯಲಿವೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
