AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2021: ಐಪಿಎಲ್​ ಹರಾಜಿಗೆ ನೋಂದಣಿಯಾದ ಅರ್ಜುನ್​ ತೆಂಡೂಲ್ಕರ್.. ಯಾವ ತಂಡ ತೆಗೆದುಕೊಳ್ಳಲಿದೆ?

Arjun Tendulkar: ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್​​ನವರೇ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ. ಏಕೆಂದರೆ, ಸಚಿನ್​ ತೆಂಡೂಲ್ಕರ್​ ಮುಂಬೈನವರು. ಮುಂಬೈ ಇಂಡಿಯನ್ಸ್​ ಪರವಾಗಿ ಅವರು ಆಡಿದ್ದಾರೆ.

IPL Auction 2021: ಐಪಿಎಲ್​ ಹರಾಜಿಗೆ ನೋಂದಣಿಯಾದ ಅರ್ಜುನ್​ ತೆಂಡೂಲ್ಕರ್.. ಯಾವ ತಂಡ ತೆಗೆದುಕೊಳ್ಳಲಿದೆ?
ಅರ್ಜುನ್ ತೆಂಡೂಲ್ಕರ್
ರಾಜೇಶ್ ದುಗ್ಗುಮನೆ
| Edited By: |

Updated on: Feb 06, 2021 | 5:59 PM

Share

ಈ ಬಾರಿಯ ಐಪಿಎಲ್​ನಲ್ಲಿ 1097 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಹೊರ ಬಿದ್ದಿದೆ. ವಿಶೇಷ ಎಂದರೆ, ಈ ಆಟಗಾರರ ಪೈಕಿ ಸಚಿನ್​ ತೆಂಡೂಲ್ಕರ್​ ಅವರ ಮಗ ಅರ್ಜುನ್​ ತೆಂಡೂಲ್ಕರ್​ ಕೂಡ ಇದ್ದಾರೆ. ಹರಾಜಿನಲ್ಲಿ ಅರ್ಜುನ್​ ಅವರನ್ನು ಯಾವ ತಂಡ ತೆಗೆದುಕೊಳ್ಳಲಿದೆ ಎನ್ನುವ ಕುತೂಹಲ ಸದ್ಯದ್ದು.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ಟಿ20ಗೆ ಅರ್ಜುನ್​ ಕಾಲಿಟ್ಟಿದ್ದರು. ಬೌಲರ್​ ಆಗಿರುವ ಇವರು, ಮುಂಬೈ ಪರ ಆಡಿದ್ದರು. ಹರಿಯಾಣ ವಿರುದ್ಧದ ಪಂದ್ಯದಲ್ಲಿ 34 ರನ್​ ನೀಡಿ ಒಂದು ವಿಕೆಟ್​ ಪಡೆದರೆ, ಪುದುಚೇರಿ ವಿರುದ್ಧ 33 ರನ್​ ನೀಡಿ ಒಂದು ವಿಕೆಟ್​ ಪಡೆದಿದ್ದರು. ಹರಾಜಿನಲ್ಲಿ ಅರ್ಜುನ್ ಅವರ ಮೂಲ ಬೆಲೆಯನ್ನು 20 ಲಕ್ಷ ರೂಪಾಯಿ ಎಂದು ನಿಗದಿ ಮಾಡಲಾಗಿದೆ.

ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್​​ನವರೇ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ. ಏಕೆಂದರೆ, ಸಚಿನ್​ ತೆಂಡೂಲ್ಕರ್​ ಮುಂಬೈನವರು. ಮುಂಬೈ ಇಂಡಿಯನ್ಸ್​ ಪರವಾಗಿ ಅವರು ಆಡಿದ್ದಾರೆ. ಹೀಗಾಗಿ, ಎಂಐ ಈ ಬಗ್ಗೆ ಆಸಕ್ತಿ ತೋರಿಸುವ ಸಾಧ್ಯತೆ ಇದೆ.

ಇದೇ ತಿಂಗಳು ನಡೆಯಲಿರುವ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು 1097 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ವೆಸ್ಟ್​ ಇಂಡೀಸ್​ನಿಂದ ಅತಿ ಹೆಚ್ಚು ಅಂದರೆ 56 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾ (42) ಮತ್ತು ಮೂರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ (38) ಇದೆ. ರಾಷ್ಟ್ರೀಯ ತಂಡದಲ್ಲಿ ಆಡದೆ ಇರುವ 863 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ ಭಾರತೀಯರು 743 ಹಾಗೂ ವಿದೇಶದ 68 ಆಟಗಾರರು ಇದ್ದಾರೆ.

IPL 2021​ ಹರಾಜು ಪ್ರಕ್ರಿಯೆಗೆ 1097 ಆಟಗಾರರು ನೋಂದಣಿ

Decision Review System ವಿರುದ್ಧ ಕ್ರಿಕೆಟ್​ ದೇವರು ಕಿಡಿಕಿಡಿ, DRS ನೀತಿಯನ್ನೇ ರಿವ್ಯೂ ಮಾಡಿ ಎಂದ ತೆಂಡೂಲ್ಕರ್

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು