AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL Auction 2021: ಐಪಿಎಲ್​ ಹರಾಜಿಗೆ ನೋಂದಣಿಯಾದ ಅರ್ಜುನ್​ ತೆಂಡೂಲ್ಕರ್.. ಯಾವ ತಂಡ ತೆಗೆದುಕೊಳ್ಳಲಿದೆ?

Arjun Tendulkar: ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್​​ನವರೇ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ. ಏಕೆಂದರೆ, ಸಚಿನ್​ ತೆಂಡೂಲ್ಕರ್​ ಮುಂಬೈನವರು. ಮುಂಬೈ ಇಂಡಿಯನ್ಸ್​ ಪರವಾಗಿ ಅವರು ಆಡಿದ್ದಾರೆ.

IPL Auction 2021: ಐಪಿಎಲ್​ ಹರಾಜಿಗೆ ನೋಂದಣಿಯಾದ ಅರ್ಜುನ್​ ತೆಂಡೂಲ್ಕರ್.. ಯಾವ ತಂಡ ತೆಗೆದುಕೊಳ್ಳಲಿದೆ?
ಅರ್ಜುನ್ ತೆಂಡೂಲ್ಕರ್
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Feb 06, 2021 | 5:59 PM

Share

ಈ ಬಾರಿಯ ಐಪಿಎಲ್​ನಲ್ಲಿ 1097 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಹೊರ ಬಿದ್ದಿದೆ. ವಿಶೇಷ ಎಂದರೆ, ಈ ಆಟಗಾರರ ಪೈಕಿ ಸಚಿನ್​ ತೆಂಡೂಲ್ಕರ್​ ಅವರ ಮಗ ಅರ್ಜುನ್​ ತೆಂಡೂಲ್ಕರ್​ ಕೂಡ ಇದ್ದಾರೆ. ಹರಾಜಿನಲ್ಲಿ ಅರ್ಜುನ್​ ಅವರನ್ನು ಯಾವ ತಂಡ ತೆಗೆದುಕೊಳ್ಳಲಿದೆ ಎನ್ನುವ ಕುತೂಹಲ ಸದ್ಯದ್ದು.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ಟಿ20ಗೆ ಅರ್ಜುನ್​ ಕಾಲಿಟ್ಟಿದ್ದರು. ಬೌಲರ್​ ಆಗಿರುವ ಇವರು, ಮುಂಬೈ ಪರ ಆಡಿದ್ದರು. ಹರಿಯಾಣ ವಿರುದ್ಧದ ಪಂದ್ಯದಲ್ಲಿ 34 ರನ್​ ನೀಡಿ ಒಂದು ವಿಕೆಟ್​ ಪಡೆದರೆ, ಪುದುಚೇರಿ ವಿರುದ್ಧ 33 ರನ್​ ನೀಡಿ ಒಂದು ವಿಕೆಟ್​ ಪಡೆದಿದ್ದರು. ಹರಾಜಿನಲ್ಲಿ ಅರ್ಜುನ್ ಅವರ ಮೂಲ ಬೆಲೆಯನ್ನು 20 ಲಕ್ಷ ರೂಪಾಯಿ ಎಂದು ನಿಗದಿ ಮಾಡಲಾಗಿದೆ.

ಅರ್ಜುನ್​ ತೆಂಡೂಲ್ಕರ್​ ಅವರನ್ನು ಮುಂಬೈ ಇಂಡಿಯನ್ಸ್​​ನವರೇ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ. ಏಕೆಂದರೆ, ಸಚಿನ್​ ತೆಂಡೂಲ್ಕರ್​ ಮುಂಬೈನವರು. ಮುಂಬೈ ಇಂಡಿಯನ್ಸ್​ ಪರವಾಗಿ ಅವರು ಆಡಿದ್ದಾರೆ. ಹೀಗಾಗಿ, ಎಂಐ ಈ ಬಗ್ಗೆ ಆಸಕ್ತಿ ತೋರಿಸುವ ಸಾಧ್ಯತೆ ಇದೆ.

ಇದೇ ತಿಂಗಳು ನಡೆಯಲಿರುವ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು 1097 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ವೆಸ್ಟ್​ ಇಂಡೀಸ್​ನಿಂದ ಅತಿ ಹೆಚ್ಚು ಅಂದರೆ 56 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾ (42) ಮತ್ತು ಮೂರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ (38) ಇದೆ. ರಾಷ್ಟ್ರೀಯ ತಂಡದಲ್ಲಿ ಆಡದೆ ಇರುವ 863 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ ಭಾರತೀಯರು 743 ಹಾಗೂ ವಿದೇಶದ 68 ಆಟಗಾರರು ಇದ್ದಾರೆ.

IPL 2021​ ಹರಾಜು ಪ್ರಕ್ರಿಯೆಗೆ 1097 ಆಟಗಾರರು ನೋಂದಣಿ

Decision Review System ವಿರುದ್ಧ ಕ್ರಿಕೆಟ್​ ದೇವರು ಕಿಡಿಕಿಡಿ, DRS ನೀತಿಯನ್ನೇ ರಿವ್ಯೂ ಮಾಡಿ ಎಂದ ತೆಂಡೂಲ್ಕರ್

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು