
ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar) ಪ್ರಸ್ತುತ 2025-26 ರ ರಣಜಿ ಟ್ರೋಫಿಯಲ್ಲಿ (Ranji Trophy) ಗೋವಾ ಪರ ಆಡುತ್ತಿದ್ದಾರೆ. ಮೊದಲ ಸುತ್ತಿನಲ್ಲಿ ಅವರ ಪ್ರದರ್ಶನ ಕಳಪೆಯಾಗಿತ್ತು, ಆದರೆ ಎರಡನೇ ಸುತ್ತಿನಲ್ಲಿ ಲಯ ಕಂಡುಕೊಂಡ ಅರ್ಜುನ್ ಒಂದೇ ಇನ್ನಿಂಗ್ಸ್ನಲ್ಲಿ 3 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ವಾಸ್ತವವಾಗಿ ಅಕ್ಟೋಬರ್ 25 ರಿಂದ ಗೋವಾ ಮತ್ತು ಕರ್ನಾಟಕ ನಡುವೆ ರಣಜಿ ಟ್ರೋಫಿ ಪಂದ್ಯ ಆರಂಭವಾಗಿದೆ. ಈ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಅರ್ಜುನ್ ತೆಂಡೂಲ್ಕರ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ತಂಡದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ.
ಈ ಪಂದ್ಯದಲ್ಲಿ, ಗೋವಾ ತಂಡದ ನಾಯಕಿ ಸ್ನೇಹಲ್ ಕೌತಂಕರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ತಂಡದ ಬೌಲಿಂಗ್ ದಾಳಿಯನ್ನು ಮುನ್ನಡೆಸಿದ ಅರ್ಜುನ್ ತೆಂಡೂಲ್ಕರ್ ಉತ್ತಮ ಆರಂಭ ಒದಗಿಸಿಕೊಟ್ಟರು. ಕರ್ನಾಟಕ ಪರ ಅರ್ಜುನ್ ತೆಂಡೂಲ್ಕರ್ ಇನ್ನಿಂಗ್ಸ್ನ 13 ನೇ ಓವರ್ನಲ್ಲಿ ಆರಂಭಿಕ ನಿಕ್ಕಿನ್ ಜೋಸ್ ಅವರನ್ನು ಔಟ್ ಮಾಡಿದರು. ನಂತರ, ತಮ್ಮ ಮುಂದಿನ ಓವರ್ನಲ್ಲಿ ಅರ್ಜುನ್ ತೆಂಡೂಲ್ಕರ್ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಕೃಷ್ಣ ಶ್ರೀಜಿತ್ ಅವರನ್ನು ಔಟ್ ಮಾಡಿದರು.
ಅಲ್ಲಿಗೆ ನಿಲ್ಲದ ಅರ್ಜುನ್ ತೆಂಡೂಲ್ಕರ್, ಸ್ಫೋಟಕ ಬ್ಯಾಟರ್ ಅಭಿನವ್ ಮನೋಹರ್ ಅವರನ್ನು ಔಟ್ ಮಾಡಿದರು. ಈ ಇನ್ನಿಂಗ್ಸ್ನಲ್ಲಿ ಅವರು ಒಟ್ಟು 29 ಓವರ್ಗಳನ್ನು ಬೌಲ್ ಮಾಡಿ 100 ರನ್ಗಳನ್ನು ಬಿಟ್ಟುಕೊಟ್ಟು 3 ವಿಕೆಟ್ಗಳನ್ನು ಪಡೆದರು. ಈ ಮೂಲಕ ಈ ಇನ್ನಿಂಗ್ಸ್ನಲ್ಲಿ ಜಂಟಿಯಾಗಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಆದರು. ಈ ಪಂದ್ಯವು ಅರ್ಜುನ್ ತೆಂಡೂಲ್ಕರ್ಗೆ ಮಹತ್ವದ್ದಾಗಿತ್ತು, ಏಕೆಂದರೆ ಟೂರ್ನಮೆಂಟ್ನ ಆರಂಭಿಕ ಪಂದ್ಯದಲ್ಲಿ ಕೇವಲ 2 ವಿಕೆಟ್ಗಳನ್ನು ಪಡೆದಿದ್ದ ಅರ್ಜುನ್, ಇದೀಗ ಒಂದೇ ಇನ್ನಿಂಗ್ಸ್ನಲ್ಲಿ 3 ವಿಕೆಟ್ ಕಬಳಿಸಿದ್ದಾರೆ
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಆರಂಭಿಸಿದ ಕರ್ನಾಟಕದ ಆರಂಭ ಕಳಪೆಯಾಗಿತ್ತು. ಆದಾಗ್ಯೂ, ಕರುಣ್ ಅವರ ಅಜೇಯ ಶತಕದ ನೆರವಿನಿಂದ ಮೊದಲ ಇನ್ನಿಂಗ್ಸ್ನಲ್ಲಿ 371 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ತಂಡದ ಪರ ಕರುಣ್ ನಾಯರ್ ಅಜೇಯ 174 ರನ್ ಬಾರಿಸಿದರೆ, ಶ್ರೇಯಸ್ ಗೋಪಾಲ್ ಕೂಡ 57 ರನ್ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಆದಾಗ್ಯೂ, ಈ ಇಬ್ಬರು ಬ್ಯಾಟ್ಸ್ಮನ್ಗಳನ್ನು ಹೊರತುಪಡಿಸಿ, ಬೇರೆ ಯಾವುದೇ ಆಟಗಾರ 40 ರನ್ಗಳ ಗಡಿಯನ್ನು ತಲುಪಲು ಸಾಧ್ಯವಾಗಲಿಲ್ಲ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ