AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಬೌಲಿಂಗ್, ಸಿಡಿಲಬ್ಬರದ ಬ್ಯಾಟಿಂಗ್: ಅರ್ಜುನ್ ತೆಂಡೂಲ್ಕರ್ ಮಿಂಚಿಂಗ್!

Arjun Tendulkar: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ 13 ಮ್ಯಾಚ್​ಗಳಲ್ಲಿ ಬೆಂಚ್ ಕಾದಿದ್ದ ಅರ್ಜುನ್ ತೆಂಡೂಲ್ಕರ್ ಇದೀಗ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಅದು ಕೂಡ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ. ಇದರ ಜೊತೆ ಬೌಲಿಂಗ್​ನಲ್ಲೂ ಪರಾಕ್ರಮ ಮೆರೆದಿದ್ದಾರೆ.

ಭರ್ಜರಿ ಬೌಲಿಂಗ್, ಸಿಡಿಲಬ್ಬರದ ಬ್ಯಾಟಿಂಗ್: ಅರ್ಜುನ್ ತೆಂಡೂಲ್ಕರ್ ಮಿಂಚಿಂಗ್!
Arjun Tendulkar Image Credit source: MT20
ಝಾಹಿರ್ ಯೂಸುಫ್
|

Updated on:Jun 09, 2026 | 8:55 AM

Share

ಮುಂಬೈ ಟಿ20 ಲೀಗ್‌ನಲ್ಲಿ ಅರ್ಜುನ್ ತೆಂಡೂಲ್ಕರ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಕ್ಸ್ ಅಂಧೇರಿ  ಹಾಗೂ ನಮೋ ಬಾಂದ್ರಾ ಬ್ಲಾಸ್ಟರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಆರ್ಕ್ಸ್ ಅಂಧೇರಿ ತಂಡಕ್ಕೆ ಎಡಗೈ ವೇಗಿ ಅರ್ಜುನ್ ತೆಂಡೂಲ್ಕರ್ ಅತ್ಯುತ್ತಮ ಆರಂಭ ಒದಗಿಸಿದ್ದರು.

ಪಂದ್ಯದ ಮೊದಲ ಓವರ್‌ನಲ್ಲೇ ಎರಡು ಪ್ರಮುಖ ವಿಕೆಟ್ ಕಿತ್ತ ಅರ್ಜುನ್ ಬಾಂದ್ರಾ ಬ್ಲಾಸ್ಟರ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡಿದರು. ಈ ಆಘಾತದಿಂದ ಪಾರಾಗಲು ಬ್ಲಾಸ್ಟರ್ಸ್​ ಪಡೆ ಪರದಾಡಬೇಕಾಯಿತು. ಪರಿಣಾಮ 20 ಓವರ್​ಗಳಲ್ಲಿ ಕೇವಲ 144 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದರು.

ಈ ಪಂದ್ಯದಲ್ಲಿ 3 ಓವರ್​ಗಳನ್ನು ಎಸೆದ ಅರ್ಜುನ್ ತೆಂಡೂಲ್ಕರ್ ಒಂದು ಓವರ್ ಮೇಡನ್ ಮಾಡಿದ್ದರು. ಅಲ್ಲದೆ ಮೂರು ಓವರ್​​ಗಳಲ್ಲಿ ನೀಡಿದ್ದು ಕೇವಲ 11 ರನ್​ಗಳು ಮಾತ್ರ. ಹಾಗೆಯೇ ಈ  3 ವಿಕೆಟ್ ಕಬಳಿಸುವಲ್ಲಿಯೂ ಯಶಸ್ವಿಯಾಗಿದ್ದರು.

ಬ್ಯಾಟಿಂಗ್​ನಲ್ಲೂ ಮಿಂಚಿಂಗ್:

145 ರನ್‌ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ಅಂಧೇರಿ ತಂಡಕ್ಕೆ ಅರ್ಜುನ್ ತೆಂಡೂಲ್ಕರ್ ಬ್ಯಾಟಿಂಗ್‌ನಲ್ಲೂ ಆಸರೆಯಾದರು. ಈ ಬಾರಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅರ್ಜುನ್ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಅಲ್ಲದೆ ಯುವ ದಾಂಡಿಗ ಮುಶೀರ್ ಖಾನ್ (54*) ಅವರ ಜೊತೆಗೂಡಿ ಎರಡನೇ ವಿಕೆಟ್‌ಗೆ 116 ರನ್‌ಗಳ ಅಜೇಯ ಜೊತೆಯಾಟವಾಡಿದರು. ಈ ಮೂಲಕ ಕೇವಲ 13.5 ಓವರ್‌ಗಳಲ್ಲೇ ತಂಡವನ್ನು ಗೆಲುವಿನ ದಡ ಸೇರಿಸಿ ಆರ್ಕ್ಸ್ ಅಂಧೇರಿ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟರು.

ಅರ್ಜುನ್ ಆಲ್​ರೌಂಡರ್:

  • ಬೌಲಿಂಗ್​ನಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ ಅರ್ಜುನ್ ತೆಂಡೂಲ್ಕರ್ 3 ಓವರ್​ಗಳಲ್ಲಿ ಕೇವಲ 11 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದ್ದರು.
  • ಬ್ಯಾಟಿಂಗ್​ನಲ್ಲಿ 34 ಎಸೆತಗಳನ್ನು ಎದುರಿಸಿದ ಅರ್ಜುನ್, 5 ಭರ್ಜರಿ ಸಿಕ್ಸರ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 66 ರನ್ ಬಾರಿಸಿದ್ದರು.
  • ಈ ಭರ್ಜರಿ ಆಲ್​ರೌಂಡರ್ ಪ್ರದರ್ಶನಕ್ಕೆ ಅರ್ಜುನ್ ತೆಂಡೂಲ್ಕರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

ಇದನ್ನೂ ಓದಿ: ಬರೋಬ್ಬರಿ 3,542 ಕೋಟಿ ರೂ! ಕಿಂಗ್​​ ಖಾನ್​ನ ಹಿಂದಿಕ್ಕಿದ ಕಿಂಗ್ ಕೊಹ್ಲಿ

ಐಪಿಎಲ್​ನಲ್ಲಿ ಒಂದೇ ಚಾನ್ಸ್​:

ಐಪಿಎಲ್​ ಸೀಸನ್-19 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಅರ್ಜುನ್ ತೆಂಡೂಲ್ಕರ್ ಅವರನ್ನು ಕೇವಲ ಒಂದು ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಸಲಾಗಿತ್ತು. ಅದು ಕೂಡ ಎಲ್​ಎಸ್​ಜಿ ತಂಡದ ಕೊನೆಯ ಮ್ಯಾಚ್​ನಲ್ಲಿ. ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿದಿದ್ದ ಅರ್ಜುನ್ 4 ಓವರ್​ಗಳಲ್ಲಿ 36 ರನ್ ನೀಡಿ ಒಂದು ವಿಕೆಟ್ ಮಾತ್ರ ಕಬಳಿಸಿದ್ದರು.

Published On - 8:54 am, Tue, 9 June 26

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್