AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಬೌಲಿಂಗ್, ಸಿಡಿಲಬ್ಬರದ ಬ್ಯಾಟಿಂಗ್: ಅರ್ಜುನ್ ತೆಂಡೂಲ್ಕರ್ ಮಿಂಚಿಂಗ್!

Arjun Tendulkar: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ 13 ಮ್ಯಾಚ್​ಗಳಲ್ಲಿ ಬೆಂಚ್ ಕಾದಿದ್ದ ಅರ್ಜುನ್ ತೆಂಡೂಲ್ಕರ್ ಇದೀಗ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಅದು ಕೂಡ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ. ಇದರ ಜೊತೆ ಬೌಲಿಂಗ್​ನಲ್ಲೂ ಪರಾಕ್ರಮ ಮೆರೆದಿದ್ದಾರೆ.

ಭರ್ಜರಿ ಬೌಲಿಂಗ್, ಸಿಡಿಲಬ್ಬರದ ಬ್ಯಾಟಿಂಗ್: ಅರ್ಜುನ್ ತೆಂಡೂಲ್ಕರ್ ಮಿಂಚಿಂಗ್!
Arjun Tendulkar Image Credit source: MT20
ಝಾಹಿರ್ ಯೂಸುಫ್
|

Updated on:Jun 09, 2026 | 8:55 AM

Share

ಮುಂಬೈ ಟಿ20 ಲೀಗ್‌ನಲ್ಲಿ ಅರ್ಜುನ್ ತೆಂಡೂಲ್ಕರ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಕ್ಸ್ ಅಂಧೇರಿ  ಹಾಗೂ ನಮೋ ಬಾಂದ್ರಾ ಬ್ಲಾಸ್ಟರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಆರ್ಕ್ಸ್ ಅಂಧೇರಿ ತಂಡಕ್ಕೆ ಎಡಗೈ ವೇಗಿ ಅರ್ಜುನ್ ತೆಂಡೂಲ್ಕರ್ ಅತ್ಯುತ್ತಮ ಆರಂಭ ಒದಗಿಸಿದ್ದರು.

ಪಂದ್ಯದ ಮೊದಲ ಓವರ್‌ನಲ್ಲೇ ಎರಡು ಪ್ರಮುಖ ವಿಕೆಟ್ ಕಿತ್ತ ಅರ್ಜುನ್ ಬಾಂದ್ರಾ ಬ್ಲಾಸ್ಟರ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡಿದರು. ಈ ಆಘಾತದಿಂದ ಪಾರಾಗಲು ಬ್ಲಾಸ್ಟರ್ಸ್​ ಪಡೆ ಪರದಾಡಬೇಕಾಯಿತು. ಪರಿಣಾಮ 20 ಓವರ್​ಗಳಲ್ಲಿ ಕೇವಲ 144 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದರು.

ಈ ಪಂದ್ಯದಲ್ಲಿ 3 ಓವರ್​ಗಳನ್ನು ಎಸೆದ ಅರ್ಜುನ್ ತೆಂಡೂಲ್ಕರ್ ಒಂದು ಓವರ್ ಮೇಡನ್ ಮಾಡಿದ್ದರು. ಅಲ್ಲದೆ ಮೂರು ಓವರ್​​ಗಳಲ್ಲಿ ನೀಡಿದ್ದು ಕೇವಲ 11 ರನ್​ಗಳು ಮಾತ್ರ. ಹಾಗೆಯೇ ಈ  3 ವಿಕೆಟ್ ಕಬಳಿಸುವಲ್ಲಿಯೂ ಯಶಸ್ವಿಯಾಗಿದ್ದರು.

ಬ್ಯಾಟಿಂಗ್​ನಲ್ಲೂ ಮಿಂಚಿಂಗ್:

145 ರನ್‌ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ಅಂಧೇರಿ ತಂಡಕ್ಕೆ ಅರ್ಜುನ್ ತೆಂಡೂಲ್ಕರ್ ಬ್ಯಾಟಿಂಗ್‌ನಲ್ಲೂ ಆಸರೆಯಾದರು. ಈ ಬಾರಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅರ್ಜುನ್ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಅಲ್ಲದೆ ಯುವ ದಾಂಡಿಗ ಮುಶೀರ್ ಖಾನ್ (54*) ಅವರ ಜೊತೆಗೂಡಿ ಎರಡನೇ ವಿಕೆಟ್‌ಗೆ 116 ರನ್‌ಗಳ ಅಜೇಯ ಜೊತೆಯಾಟವಾಡಿದರು. ಈ ಮೂಲಕ ಕೇವಲ 13.5 ಓವರ್‌ಗಳಲ್ಲೇ ತಂಡವನ್ನು ಗೆಲುವಿನ ದಡ ಸೇರಿಸಿ ಆರ್ಕ್ಸ್ ಅಂಧೇರಿ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟರು.

ಅರ್ಜುನ್ ಆಲ್​ರೌಂಡರ್:

  • ಬೌಲಿಂಗ್​ನಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ ಅರ್ಜುನ್ ತೆಂಡೂಲ್ಕರ್ 3 ಓವರ್​ಗಳಲ್ಲಿ ಕೇವಲ 11 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದ್ದರು.
  • ಬ್ಯಾಟಿಂಗ್​ನಲ್ಲಿ 34 ಎಸೆತಗಳನ್ನು ಎದುರಿಸಿದ ಅರ್ಜುನ್, 5 ಭರ್ಜರಿ ಸಿಕ್ಸರ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 66 ರನ್ ಬಾರಿಸಿದ್ದರು.
  • ಈ ಭರ್ಜರಿ ಆಲ್​ರೌಂಡರ್ ಪ್ರದರ್ಶನಕ್ಕೆ ಅರ್ಜುನ್ ತೆಂಡೂಲ್ಕರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

ಇದನ್ನೂ ಓದಿ: ಬರೋಬ್ಬರಿ 3,542 ಕೋಟಿ ರೂ! ಕಿಂಗ್​​ ಖಾನ್​ನ ಹಿಂದಿಕ್ಕಿದ ಕಿಂಗ್ ಕೊಹ್ಲಿ

ಐಪಿಎಲ್​ನಲ್ಲಿ ಒಂದೇ ಚಾನ್ಸ್​:

ಐಪಿಎಲ್​ ಸೀಸನ್-19 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಅರ್ಜುನ್ ತೆಂಡೂಲ್ಕರ್ ಅವರನ್ನು ಕೇವಲ ಒಂದು ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಸಲಾಗಿತ್ತು. ಅದು ಕೂಡ ಎಲ್​ಎಸ್​ಜಿ ತಂಡದ ಕೊನೆಯ ಮ್ಯಾಚ್​ನಲ್ಲಿ. ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿದಿದ್ದ ಅರ್ಜುನ್ 4 ಓವರ್​ಗಳಲ್ಲಿ 36 ರನ್ ನೀಡಿ ಒಂದು ವಿಕೆಟ್ ಮಾತ್ರ ಕಬಳಿಸಿದ್ದರು.

Published On - 8:54 am, Tue, 9 June 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ