AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ತೆಂಡೂಲ್ಕರ್ ಮಾರಕ ದಾಳಿ; ಮೊದಲ ಪಂದ್ಯದಲ್ಲೇ ಗೆದ್ದ ಗೋವಾ

Goa Wins Vijay Hazare Trophy Opener: ಗೋವಾ ತಂಡವು ವಿಜಯ್ ಹಜಾರೆ ಟ್ರೋಫಿಯಲ್ಲಿ ಒಡಿಶಾವನ್ನು 27 ರನ್​ಗಳಿಂದ ಸೋಲಿಸಿ ಶುಭಾರಂಭ ಮಾಡಿದೆ. ಅರ್ಜುನ್ ತೆಂಡೂಲ್ಕರ್ 3 ವಿಕೆಟ್ ಪಡೆದು ತಂಡಕ್ಕೆ ಪ್ರಮುಖ ಕೊಡುಗೆ ನೀಡಿದರು. ಇಶಾನ್ ಗಡೇಕರ್ ಅತ್ಯಧಿಕ 93 ರನ್ ಗಳಿಸಿದರು. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ಅರ್ಜುನ್ ಈ ಪಂದ್ಯದಲ್ಲಿ ಅದ್ಭುತವಾದ ಕಮ್‌ಬ್ಯಾಕ್ ಮಾಡಿದ್ದಾರೆ.

ಅರ್ಜುನ್ ತೆಂಡೂಲ್ಕರ್ ಮಾರಕ ದಾಳಿ; ಮೊದಲ ಪಂದ್ಯದಲ್ಲೇ ಗೆದ್ದ ಗೋವಾ
ಅರ್ಜುನ್ ತೆಂಡೂಲ್ಕರ್
ಪೃಥ್ವಿಶಂಕರ
|

Updated on: Dec 21, 2024 | 8:11 PM

Share

ವಿಜಯ್ ಹಜಾರೆ ಟ್ರೋಫಿಯಲ್ಲಿ ಗೋವಾ ತಂಡವು ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಗೋವಾ ತನ್ನ ಮೊದಲ ಪಂದ್ಯದಲ್ಲಿ ಒಡಿಶಾವನ್ನು 27 ರನ್​ಗಳಿಂದ ಸೋಲಿಸಿದೆ. ಜೈಪುರದ ಡಾ.ಸೋನಿ ಸ್ಟೇಡಿಯಂನಲ್ಲಿ ಉಭಯ ತಂಡಗಳ ನಡುವೆ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗೋವಾ 371 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಒಡಿಶಾ 344 ರನ್​ಗಳಿಗೆ ಆಲೌಟ್ ಆಯಿತು. ಒಡಿಶಾ ತಂಡವನ್ನು ಆಲೌಟ್ ಮಾಡುವಲ್ಲಿ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಅವರ ಪಾತ್ರ ಪ್ರಮುಖವಾಗಿತ್ತು. ಈ ಪಂದ್ಯದಲ್ಲಿ 10 ಓವರ್ ಬೌಲ್ ಮಾಡಿದ ಅರ್ಜುನ್ 61 ರನ್ ಬಿಟ್ಟುಕೊಟ್ಟರಾದರೂ ಪ್ರಮುಖ 3 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು.

ಅರ್ಜುನ್ ಮ್ಯಾಜಿಕಲ್ ಸ್ಪೆಲ್

ಈ ಪಂದ್ಯದಲ್ಲಿ ಟಾಸ್ ಸೋತ ಮೊದಲು ಬ್ಯಾಟಿಂಗ್ ಮಾಡಿದ ಗೋವಾ ಪರ ತಂಡದ ಬ್ಯಾಟ್ಸ್‌ಮನ್‌ಗಳು ದಿಟ್ಟ ಪ್ರದರ್ಶನ ನೀಡಿ 50 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 371 ರನ್‌ ಗಳಿಸಿದರು. ತಂಡದ ಪರ ಇಶಾನ್ ಗಡೇಕರ್ 93 ರನ್​ಗಳ ಅತ್ಯಧಿಕ ಇನ್ನಿಂಗ್ಸ್ ಆಡಿದರೆ, ನಾಯಕ ದರ್ಶನ್ ಮಿಸಾಲ್ 79 ರನ್ ಮತ್ತು ಸುಯಶ್ ಪ್ರಭುದೇಸಾಯಿ 74 ರನ್ ಕೊಡುಗೆ ನೀಡಿದರು. ಸ್ನೇಹಲ್ ಕೌತಾಂಕರ್ ಕೂಡ 67 ರನ್ ಕಲೆಹಾಕಿದರು. ಈ ಇನ್ನಿಂಗ್ಸ್‌ನಲ್ಲಿ ಅರ್ಜುನ್ ತೆಂಡೂಲ್ಕರ್‌ಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗದಿದ್ದರೂ, ಬೌಲಿಂಗ್​ನಲ್ಲಿ ಮಾತ್ರ ತಮ್ಮ ಚಮತ್ಕಾರ ತೋರಿದರು.

ಗೋವಾ ಪರ ಬೌಲಿಂಗ್ ಆರಂಭಿಸಿದ ಅರ್ಜುನ್ ತೆಂಡೂಲ್ಕರ್ ತಂಡಕ್ಕೆ ಉತ್ತಮ ಆರಂಭ ನೀಡಿದರು. ಆರಂಭಿಕ ಓವರ್‌ಗಳಲ್ಲಿ ಕರಾರುವಕ್ಕಾದ ದಾಳಿ ನಡೆಸಿದ ಅರ್ಜುನ್ ಇದರ ನಂತರ ತಮ್ಮ ಎರಡನೇ ಸ್ಪೆಲ್‌ನಲ್ಲಿ ವಿಕೆಟ್​ಗಳ ಬೇಟೆ ಆರಂಭಿಸಿದರು. ಒಬ್ಬರ ನಂತರ ಒಬ್ಬರಂತೆ 3 ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್​ಗಟ್ಟಿದರು. ಅರ್ಜುನ್ ತೆಂಡೂಲ್ಕರ್ 10 ಓವರ್‌ಗಳಲ್ಲಿ 6.10 ಎಕಾನಮಿ ದರದಲ್ಲಿ 61 ರನ್ ನೀಡಿ ಒಟ್ಟು 3 ವಿಕೆಟ್ ಪಡೆದರು. ಅವರು ಕಾರ್ತಿಕ್ ಬಿಸ್ವಾಲ್, ಅಭಿಷೇಕ್ ರಾವುತ್ ಮತ್ತು ರಾಜೇಶ್ ಮೊಹಂತಿ ಅವರ ವಿಕೆಟ್ ಉರುಳಿಸಿದರು. ಅರ್ಜುನ್ ಹೊರತಾಗಿ ಶುಭಂ ತಾರಿ ಮತ್ತು ಮೋಹಿತ್ ರೆಡ್ಕರ್ ಕೂಡ ತಲಾ 2 ವಿಕೆಟ್ ಪಡೆದು ತಂಡದ ಗೆಲುವಿಗೆ ಕಾರಣರಾದರು.

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ವಿಫಲ

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅರ್ಜುನ್ ತೆಂಡೂಲ್ಕರ್ ಅವರ ಪ್ರದರ್ಶನ ತೀರಾ ಕಳಪೆಯಾಗಿತ್ತು. ಒಟ್ಟು 3 ಪಂದ್ಯಗಳನ್ನು ಆಡುವ ಅವಕಾಶ ಪಡೆದಿದ್ದ ಅರ್ಜುನ್ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದರು. ಇದರ ನಂತರ ಅವರನ್ನು ತಂಡದಿಂದ ಹೊರಗಿಡಲಾಗಿತ್ತು. ಇದೀಗ ಅರ್ಜುನ್ ತಂಡಕ್ಕೆ ಭರ್ಜರಿ ಕಂಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು