AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs PBKS, IPL 2025 Final: 1 W 1 W 1 W…: ಕೊನೆಯ ಓವರ್‌ನಲ್ಲಿ ಬೆಂಕಿಯ ಚೆಂಡೆಸೆದ ಅರ್ಶ್‌ದೀಪ್ ಸಿಂಗ್

Arshdeep Singh Last Over: ಪಂಜಾಬ್ ಕಿಂಗ್ಸ್ ಪರ ಕೊನೆಯ ಓವರ್ ಬೌಲ್ ಮಾಡಲು ಬಂದ ಅರ್ಶ್‌ದೀಪ್ ಸಿಂಗ್ ಮೊದಲು ರೊಮಾರಿಯೊ ಶೆಫರ್ಡ್ ಅವರನ್ನು ಔಟ್ ಮಾಡಿದರು. ರೊಮಾರಿಯೊ ಹಿಂದಿನ ಓವರ್ನಲ್ಲಿ ಅಪಾಯಕಾರಿಯಾಗಿ ಕಂಡುಬಂದಿದ್ದರು. ಆದರೆ ಅರ್ಶ್‌ದೀಪ್ ತಮ್ಮ ನಿಖರವಾದ ಬೌಲಿಂಗ್ ಮೂಲಕ ಅವರನ್ನು ಎಲ್ ಬಿಡಬ್ಲ್ಯೂ ಮಾಡುವ ಮೂಲಕ ತಂಡಕ್ಕೆ ನೆರವಾದರು.

RCB vs PBKS, IPL 2025 Final: 1 W 1 W 1 W...: ಕೊನೆಯ ಓವರ್‌ನಲ್ಲಿ ಬೆಂಕಿಯ ಚೆಂಡೆಸೆದ ಅರ್ಶ್‌ದೀಪ್ ಸಿಂಗ್
Arshdeep Singh (1)
Vinay Bhat
|

Updated on: Jun 03, 2025 | 11:10 PM

Share

ಬೆಂಗಳೂರು (ಜೂ. 03): ಐಪಿಎಲ್ 2025 ರ (IPL 2025 Final) ಅಂತಿಮ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ವೇಗಿ ಅರ್ಶ್‌ದೀಪ್ ಸಿಂಗ್ ತಮ್ಮ ಮಾರಕ ಬೌಲಿಂಗ್ ಮೂಲಕ ಪಂದ್ಯದ ಗತಿಯನ್ನೇ ಬದಲಾಯಿಸಿದರು. ಮುಖ್ಯವಾಗಿ ಇನ್ನಿಂಗ್ಸ್​ನ ಕೊನೆಯ ಓವರ್​ನಲ್ಲಿ, ಅರ್ಶ್‌ದೀಪ್ ಕೇವಲ 3 ರನ್ ಗಳಿಗೆ 3 ವಿಕೆಟ್ ಕಬಳಿಸಿ ಮಿಂಚಿನ ಬೌಲಿಂಗ್ ಮಾಡಿದರು. ಐಪಿಎಲ್ ಫೈನಲ್ ನಲ್ಲಿ ಅರ್ಶ್‌ದೀಪ್ ಕೊನೆಯ ಓವರ್ ಎಸೆದ ರೀತಿ ಅದ್ಭುತವಾಗಿತ್ತು. ಇವರ ಬೌಲಿಂಗ್ ದಾಳಿಯಿಂದಾಗಿ ಆರ್​ಸಿಬಿ ತಂಡ 200 ರನ್ ಗಳ ಗಡಿ ದಾಟಲು ಸಾಧ್ಯವಾಗಲಿಲ್ಲ. ಆರ್​ಸಿಬಿ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿತು.

ಪಂಜಾಬ್ ಕಿಂಗ್ಸ್ ಪರ ಕೊನೆಯ ಓವರ್ ಬೌಲ್ ಮಾಡಲು ಬಂದ ಅರ್ಶ್‌ದೀಪ್ ಸಿಂಗ್ ಮೊದಲು ರೊಮಾರಿಯೊ ಶೆಫರ್ಡ್ ಅವರನ್ನು ಔಟ್ ಮಾಡಿದರು. ರೊಮಾರಿಯೊ ಹಿಂದಿನ ಓವರ್​ನಲ್ಲಿ ಅಪಾಯಕಾರಿಯಾಗಿ ಕಂಡುಬಂದಿದ್ದರು. ಆದರೆ ಅರ್ಶ್‌ದೀಪ್ ತಮ್ಮ ನಿಖರವಾದ ಬೌಲಿಂಗ್ ಮೂಲಕ ಅವರನ್ನು ಎಲ್ ಬಿಡಬ್ಲ್ಯೂ ಮಾಡುವ ಮೂಲಕ ತಂಡಕ್ಕೆ ನೆರವಾದರು. ಇದಾದ ನಂತರ, ಭುವನೇಶ್ವರ್ ಕುಮಾರ್ 1 ರನ್ ಗಳಿಸುವ ಮೂಲಕ ಕ್ರೀಸ್ ಬದಲಾಯಿಸಿದರು ಮತ್ತು ಕೃನಾಲ್ ಪಾಂಡ್ಯಗೆ ಸ್ಟ್ರೈಕ್ ನೀಡಿದರು, ಆದರೆ ಮುಂದಿನ ಎಸೆತದಲ್ಲಿ ಅರ್ಶ್‌ದೀಪ್ ಕೃನಾಲ್ ವಿಕೆಟ್ ಪಡೆದರು.

ನಂತರ ಹೊಸ ಬ್ಯಾಟ್ಸ್‌ಮನ್ ಯಶ್ ದಯಾಳ್ ಕೂಡ ಒಂದು ರನ್ ತೆಗೆದುಕೊಂಡು ಭುವನೇಶ್ವರ್‌ಗೆ ಸ್ಟ್ರೈಕ್ ನೀಡಿದರು. ಈ ಸಂದರ್ಭ ಮತ್ತೊಮ್ಮೆ ಅರ್ಶ್‌ದೀಪ್ ಕೊನೆಯ ಎಸೆತದಲ್ಲಿ ವಿಕೆಟ್ ಪಡೆದು ತಮ್ಮ ಓವರ್ ಅನ್ನು ಅದ್ಭುತವಾಗಿ ಕೊನೆಗೊಳಿಸಿದರು. ಈ ಓವರ್‌ಗೆ ಮೊದಲು, ಅರ್ಶ್ದೀಪ್ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ.

ಇದನ್ನೂ ಓದಿ
Image
ಐಪಿಎಲ್ ಫೈನಲ್​ನಲ್ಲಿ CSK ದಾಖಲೆ ಪುಡಿಗಟ್ಟಿ ಇತಿಹಾಸ ನಿರ್ಮಿಸಿದ RCB
Image
ಕೊನೆಯ 19 ರನ್​ಗೆ ಆರ್​ಸಿಬಿಯ 4 ವಿಕೆಟ್‌ಗಳು ಪತನ: ಗೆಲ್ಲಲು 190 ರನ್ ಸಾಕೇ?
Image
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
Image
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!

RCB vs PBKS, IPL 2025: ಐಪಿಎಲ್ ಫೈನಲ್​ನಲ್ಲಿ ಸಿಎಸ್​ಕೆ ದಾಖಲೆ ಪುಡಿಗಟ್ಟಿ ಇತಿಹಾಸ ನಿರ್ಮಿಸಿದ ಆರ್​ಸಿಬಿ

ಪಂಜಾಬ್ ಪರ ಕೈಲ್ ಜೇಮಿಸನ್ ಕೂಡ ಅದ್ಭುತ ಪ್ರದರ್ಶನ ನೀಡಿದರು

ಪಂಜಾಬ್ ಕಿಂಗ್ಸ್ ಪರ ಕೈಲ್ ಜೇಮಿಸನ್ ಕೂಡ ಬೌಲಿಂಗ್ ನಲ್ಲಿ ಅದ್ಭುತ ಆಟ ಪ್ರದರ್ಶಿಸಿದರು. ತಂಡದ ಪರ ಕೈಲ್ ಜೇಮಿಸನ್ 4 ಓವರ್ ಗಳಲ್ಲಿ 48 ರನ್ ನೀಡಿದರೂ 3 ಪ್ರಮುಖ ವಿಕೆಟ್ ಪಡೆದರು. ಅರ್ಶ್‌ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ಹೊರತುಪಡಿಸಿ, ಪಂಜಾಬ್ ಕಿಂಗ್ಸ್ ಪರ ಯುಜ್ವೇಂದ್ರ ಚಾಹಲ್, ವಿಜಯ್ ಕುಮಾರ್ ಮತ್ತು ಅಜ್ಮತುಲ್ಲಾ ತಲಾ ಒಂದು ವಿಕೆಟ್ ಪಡೆದರು.

ವಿರಾಟ್ ಕೊಹ್ಲಿ ಗರಿಷ್ಠ ಸ್ಕೋರರ್:

ಪಂಜಾಬ್ ಕಿಂಗ್ಸ್ ವಿರುದ್ಧದ ಅಂತಿಮ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆರ್ ಸಿಬಿ ಪರ ಗರಿಷ್ಠ ಸ್ಕೋರರ್ ಆಗಿದ್ದರು. ಓಪನರ್ ಆಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದರು. ಅವರ ಇನ್ನಿಂಗ್ಸ್ ನಲ್ಲಿ ಮೂರು ಬೌಂಡರಿಗಳು ಮೂಡಿಬಂತು. ಇದರ ಹೊರತಾಗಿ, ನಾಯಕ ರಜತ್ ಪಾಟಿದಾರ್ 26 ರನ್ ಗಳ ಇನ್ನಿಂಗ್ಸ್ ಆಡಿದರೆ, ಲಿಯಾಮ್ ಲಿವಿಂಗ್ ಸ್ಟೋನ್ 25 ರನ್ ಗಳಿಸಿದರು. ಜಿತೇಶ್ ಶರ್ಮಾ 24 ರನ್ ಗಳ ಕೊಡುಗೆ ನೀಡಿದರು. ಅಂತಿಮವಾಗಿ ಬೆಂಗಳೂರು ತಂಡ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ