AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಮ್ಯಾಂಚೆಸ್ಟರ್‌ ಟೆಸ್ಟ್​ಗೂ ಮುನ್ನ ಟೀಂ ಇಂಡಿಯಾ ಸ್ಟಾರ್ ವೇಗಿಗೆ ಇಂಜುರಿ

Arshdeep Singh Injury: ಲಾರ್ಡ್ಸ್‌ನಲ್ಲಿ ಸೋಲನುಭವಿಸಿದ ಭಾರತ ಕ್ರಿಕೆಟ್ ತಂಡ ಮ್ಯಾಂಚೆಸ್ಟರ್‌ನಲ್ಲಿ ನಡೆಯುವ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ತಯಾರಿ ನಡೆಸುತ್ತಿದೆ. ಆದರೆ, ವೇಗದ ಬೌಲರ್ ಅರ್ಶ್ದೀಪ್ ಸಿಂಗ್ ಅವರ ಬೆರಳಿಗೆ ಗಾಯವಾಗಿರುವುದು ತಂಡಕ್ಕೆ ಆತಂಕ ತಂದಿದೆ. ಗಾಯ ಎಷ್ಟು ಗಂಭೀರವಾಗಿದೆ ಎಂಬುದು ಖಚಿತವಾಗಿಲ್ಲದಿದ್ದರೂ ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ.

IND vs ENG: ಮ್ಯಾಂಚೆಸ್ಟರ್‌ ಟೆಸ್ಟ್​ಗೂ ಮುನ್ನ ಟೀಂ ಇಂಡಿಯಾ ಸ್ಟಾರ್ ವೇಗಿಗೆ ಇಂಜುರಿ
Team India
ಪೃಥ್ವಿಶಂಕರ
|

Updated on: Jul 17, 2025 | 9:00 PM

Share

ಗೆಲುವಿನ ಸಮೀಪ ಬಂದು ಲಾರ್ಡ್ಸ್ ಟೆಸ್ಟ್‌ನಲ್ಲಿ ಸೋತಿದ್ದ ಟೀಂ ಇಂಡಿಯಾ, ಈಗ ಮುಂದಿನ ಟೆಸ್ಟ್ ಪಂದ್ಯದ ಮೇಲೆ ಕಣ್ಣಿಟ್ಟಿದೆ. ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಜುಲೈ 23 ರಿಂದ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಪ್ರಾರಂಭವಾಗಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಗಿಲ್ ಪಡೆ ಸರಣಿಯನ್ನು ಜೀವಂತವಾಗಿರಿಸಲು ಪ್ರಯತ್ನಿಸಲಿದೆ. ಆದರೆ ಈ ಪಂದ್ಯಕ್ಕೆ ಆಡುವ ಹನ್ನೊಂದರ ಬಳಗವನ್ನು ಆಯ್ಕೆ ಮಾಡುವ ಸವಾಲನ್ನು ಎದುರಿಸುತ್ತಿರುವ ಟೀಂ ಇಂಡಿಯಾಕ್ಕೆ ಇದೀಗ ಸ್ಟಾರ್ ಆಟಗಾರನ ಗಾಯ ದೊಡ್ಡ ತಲೆನೋವು ತಂದೊಡ್ಡಿದೆ.ಎಡಗೈ ವೇಗದ ಬೌಲರ್ ಅರ್ಶ್‌ದೀಪ್ ಸಿಂಗ್ (Arshdeep Singh) ತಮ್ಮ ಎಡಗೈ ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮ್ಯಾಂಚೆಸ್ಟರ್‌ ಟೆಸ್ಟ್ ಗೆಲ್ಲುವ ಸಲುವಾಗಿ ಟೀಂ ಇಂಡಿಯಾ ಈಗಾಗಲೇ ಅಭ್ಯಾಸದಲ್ಲಿ ನಿರತವಾಗಿದೆ. ಕೋಚ್ ಗೌತಮ್ ಗಂಭೀರ್ ಅವರ ಮೇಲ್ವಿಚಾರಣೆಯಲ್ಲಿ ತಂಡವು ನೆಟ್ಸ್​ನಲ್ಲಿ ಬೆವರು ಹರಿಸುತ್ತಿದೆ. ಲಂಡನ್ ಬಳಿಯ ಬೆಕೆನ್‌ಹ್ಯಾಮ್‌ನಲ್ಲಿ ಟೀಮ್ ಇಂಡಿಯಾ ಅಭ್ಯಾಸ ಮಾಡುತ್ತಿದ್ದು, ಈ ವೇಳೆ ತಂಡದ ವೇಗಿ ಅರ್ಶ್‌ದೀಪ್ ಗಾಯ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ,.

ಅರ್ಶ್​ದೀಪ್ ಕೈಗೆ ಗಾಯ

ವರದಿಯ ಪ್ರಕಾರ, ಟೀಂ ಇಂಡಿಯಾ ಅಭ್ಯಾಸದ ಸಮಯದಲ್ಲಿ ಅರ್ಶ್​ದೀಪ್ ಸಿಂಗ್ ಅವರ ಎಡಗೈಗೆ ಗಾಯವಾಗಿದೆ. ಅರ್ಷ್‌ದೀಪ್ ಸಿಂಗ್ ನೆಟ್ಸ್‌ನಲ್ಲಿ ಸಾಯಿ ಸುದರ್ಶನ್ ಅವರಿಗೆ ಬೌಲಿಂಗ್ ಮಾಡುತ್ತಿದ್ದಾಗ, ಸುದರ್ಶನ್ ಬಾರಿಸಿದ ಚೆಂಡನ್ನು ತಡೆಯಲು ಪ್ರಯತ್ನಿಸುವಾಗ ಅರ್ಶ್​ದೀಪ್ ಅವರ ಎಡಗೈಗೆ ಗಾಯವಾಗಿದೆ. ಅಲ್ಲದೆ ಕೈಯಿಂದ ರಕ್ತ ಕೂಡ ಚಿಮ್ಮಿದೆ. ಕೂಡಲೇ ವೈದ್ಯಕೀಯ ಸಿಬ್ಬಂದಿ ಅರ್ಶ್​ದೀಪ್​ಗೆ ಚಿಕಿತ್ಸೆ ನೀಡಿದ್ದಾರೆ. ಆದಾಗ್ಯೂ ಅವರು ಬೌಲಿಂಗ್ ಮಾಡುವ ಕೈಗೆ ಗಾಯವಾಗಿರುವುದರಿಂದ ಅವರು ಸರಣಿಯಲ್ಲಿ ಆಡುವ ಬಗ್ಗೆ ಅನುಮಾನ ಮೂಡಿದೆ. ಆದಾಗ್ಯೂ ಅರ್ಶ್​ದೀಪ್ ಅವರ ಗಾಯ ಎಷ್ಟು ಗಂಭೀರವಾಗಿದೆ ಎಂಬುದು ಇದುವರೆಗೆ ತಿಳಿದುಬಂದಿಲ್ಲ.

IND vs ENG: ಮ್ಯಾಂಚೆಸ್ಟರ್ ಟೆಸ್ಟ್ ಆಡ್ತಾರಾ ಜಸ್ಪ್ರೀತ್ ಬುಮ್ರಾ? ಹೊರಬಿತ್ತು ಖಚಿತ ಮಾಹಿತಿ

ನಾಲ್ಕನೇ ಟೆಸ್ಟ್ ಆಡುವ ಸಾಧ್ಯತೆಗಳಿವೆ

ವಾಸ್ತವವಾಗಿ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಬೌಲಿಂಗ್ ವಿಭಾಗದಲ್ಲಿ ಬದಲಾವಣೆಗಳಾಗಬಹುದು ಎಂದು ಹೇಳಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಅರ್ಶ್​ದೀಪ್ ಗಾಯಕ್ಕೆ ತುತ್ತಾಗಿದ್ದಾರೆ. ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅರ್ಶ್​ದೀಪ್ ಗಾಯಗೊಂಡಿರುವುದು ತಂಡದಲ್ಲಿ ಆತಂಕ ಮೂಡಿಸಿದೆ. ಅರ್ಶ್​ದೀಪ್ ಇನ್ನೂ ಟೆಸ್ಟ್‌ಗೆ ಪಾದಾರ್ಪಣೆ ಮಾಡಿಲ್ಲ. ಆದಾಗ್ಯೂ, ಸರಣಿ ಮುಗಿಯುವ ಮೊದಲು ಕನಿಷ್ಠ ಒಂದು ಪಂದ್ಯದಲ್ಲಾದರೂ ಅವರಿಗೆ ಅವಕಾಶ ಸಿಗುವ ಭರವಸೆ ಇದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ