AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಲ್ ಕ್ರಿಕೆಟ್​ಗೆ ‘ವೇದಿಕೆ’ ನಿರ್ಮಿಸುವ ಪಿಚ್ ಮಲ್ಲೇಶ್​ರ ಶ್ರಮ ಮತ್ತು ಸವಾಲು

ಕ್ರಿಕೆಟ್ ಪಂದ್ಯ ಎಲ್ಲಿಯೇ ನಡೆಯಲಿ ಪಿಚ್ ಇಲ್ಲದೆ ಆಟ ನಡೆಯಲು ಸಾಧ್ಯವೇ ಇಲ್ಲ. ಭಾರತದಲ್ಲಿ ಕ್ರಿಕೆಟ್ ಎಂಬುದು ಧರ್ಮವೇ ಆಗಿಬಿಟ್ಟಿದೆ. ಭಾರತದ ಮೂಲೆ-ಮೂಲೆಯಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆಯುತ್ತಲೇ ಇರುತ್ತವೆ. ಮೊದಲೆಲ್ಲ ಇಂಥಹಾ ಟೂರ್ನಿಗಳ ಪಿಚ್​ನ ಗುಣಮಟ್ಟದ ಬಗ್ಗೆ ಹೆಚ್ಚು ತಲೆಕೆಡೆಸಿಕೊಳ್ಳುತ್ತಿರಲಿಲ್ಲ. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಪಿಚ್ ಕ್ಯುರೇಟರ್​ಗಳನ್ನು ಕರೆಸಿ ಗುಣಮಟ್ಟದ ಪಿಚ್ ತಯಾರಿಸಿಕೊಳ್ಳಲಾಗುತ್ತಿದೆ. ಅಂಥಹಾ ಪಿಚ್ ಕ್ಯುರೇಟರ್ ಒಬ್ಬರ ಪರಿಚಯ, ಅವರ ಕೆಲಸದ ವಿಧಾನ, ಶ್ರಮ, ಸವಾಲುಗಳು ಇನ್ನಿತರೆ ಮಾಹಿತಿ ಇಲ್ಲಿದೆ.

ಲೋಕಲ್ ಕ್ರಿಕೆಟ್​ಗೆ ‘ವೇದಿಕೆ’ ನಿರ್ಮಿಸುವ ಪಿಚ್ ಮಲ್ಲೇಶ್​ರ ಶ್ರಮ ಮತ್ತು ಸವಾಲು
ಮಂಜುನಾಥ ಸಿ.
|

Updated on: Jul 19, 2024 | 12:36 PM

Share

ಇತ್ತೀಚೆಗಷ್ಟೆ ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದಿತು. ಕಪ್ ಗೆದ್ದ ಬಳಿಕ ನಾಯಕ ರೋಹಿತ್ ಶರ್ಮಾ ಪಂದ್ಯ ನಡೆದ ವೆಸ್ಟ್ ಇಂಡೀಸ್​ನ ಬಾರ್ಬಡೋಸ್ ಕ್ರೀಡಾಂಗಣದ ಪಿಚ್​ ಬದಿ ಕುಳಿತು ಪಿಚ್​ನ ಮಣ್ಣನ್ನು ಬಾಯಿಗೆ ಹಾಕಿಕೊಂಡು ಸಂಭ್ರಮಿಸಿದರು. ಅದಾದ ಬಳಿ ಪ್ರಧಾನಿ ಮೋದಿವರೊಂದಿಗಿನ ಅಭಿನಂದನಾ ಸಭೆಯಲ್ಲಿಯೂ ರೋಹಿತ್ ಶರ್ಮಾ, ಬಾರ್ಬೊಡೋಸ್​ನ ಪಿಚ್​ನ ಬಗ್ಗೆ ಮಾತನಾಡಿದರು. 2011 ರಲ್ಲಿ ಭಾರತ ತಂಡ ವಾಂಖಡೆಯಲ್ಲಿ ವಿಶ್ವಕಪ್ ಗೆದ್ದಾಗಲೂ ಸಹ ಭಾರತ ತಂಡ ಪಿಚ್ ಕ್ಯುರೇಟರ್​ಗಳನ್ನು ಅಪ್ಪಿಕೊಂಡು ಸಂಭ್ರಮಿಸಿತ್ತು. ಬಿಸಿಸಿಐ, ವಾಂಖಡೆ ಪಿಚ್​ ಸಿದ್ಧ ಪಡಿಸಿದ್ದ ಕ್ಯುರೇಟರ್ ಹಾಗೂ ಸಹಾಯಕ ಸಿಬ್ಬಂದಿಗೆ ನಗದು ಪ್ರಶಸ್ತಿಗಳನ್ನು ಘೋಷಿಸಿತ್ತು. ಒಂದು ಕ್ರಿಕೆಟ್ ಪಂದ್ಯಕ್ಕೆ ಪಿಚ್ ಅದೆಷ್ಟು ಅವಶ್ಯಕ ಎಂಬುದಕ್ಕೆ ಈ ಎರಡು ಉದಾಹರಣೆಗಳು ಸಾಕ್ಷಿ. ಕ್ರಿಕೆಟ್ ಪಂದ್ಯ ಎಲ್ಲಿಯೇ ನಡೆಯಲಿ ಪಿಚ್ ಇಲ್ಲದೆ ಆಟ ನಡೆಯಲು ಸಾಧ್ಯವೇ ಇಲ್ಲ. ಭಾರತದಲ್ಲಿ ಕ್ರಿಕೆಟ್ ಎಂಬುದು ಧರ್ಮವೇ ಆಗಿಬಿಟ್ಟಿದೆ. ಭಾರತದ ಮೂಲೆ-ಮೂಲೆಯಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆಯುತ್ತಲೇ ಇರುತ್ತವೆ. ಈ ಯೂಟ್ಯೂಬ್ ಕಾಲದಲ್ಲಿ ಸ್ಥಳೀಯ ಟೂರ್ನಮೆಂಟ್​ಗಳನ್ನೂ ಲೈವ್ ಮಾಡಲಾಗುತ್ತಿದೆ, ಅವಕ್ಕೆ ಲಕ್ಷಾಂತರ ವೀವ್ಸ್ ದೊರೆಯುತ್ತಿವೆ. ಲಕ್ಷಾಂತರ ರೂಪಾಯಿ ಬಹುಮಾನವಿಟ್ಟು ಪಂದ್ಯಾವಳಿಗಳನ್ನು ಆಯೋಜಿಸಲಾಗುತ್ತಿದೆ. ಎಲ್ಲ ಊರುಗಳಲ್ಲಿಯೂ ಅಚ್ಚುಕಟ್ಟಾದ ಮೈದಾನಗಳು ಇರುವುದಿಲ್ಲ. ಬಹುತೇಕ ಊರುಗಳಲ್ಲಿ ಪಂದ್ಯಾವಳಿಗಳು ಒಣಗಿದ ಕೆರೆಯಲ್ಲಿಯೋ, ಖಾಲಿ ಬಿಟ್ಟಿರುವ ಜಮೀನುಗಳಲ್ಲಿಯೋ ನಡೆಯುತ್ತವೆ. ಮೊದಲೆಲ್ಲ ಇಂಥಹಾ ಟೂರ್ನಿಗಳ ಪಿಚ್​ಗಳಿಗೆ ಅಷ್ಟೋಂದು ಪ್ರಾಧಾನ್ಯತೆ ನೀಡಲಾಗುತ್ತಿರಲಿಲ್ಲ. ಆಟಗಾರರೆ ಪೊರಕೆ ಹಿಡಿದು ಗುಡಿಸಿ ಅದನ್ನೇ ಪಿಚ್ ಎಂದು ಕರೆದು ಆಟವಾಡುತ್ತಿದ್ದರು. ಆದರೆ ಈಗ ಇಂಥಹಾ ಸ್ಥಳೀಯ ಟೂರ್ನಮೆಂಟ್​ಗಳಿಗೂ ಪಿಚ್​ ತಯಾರು ಮಾಡಿಕೊಡುವ...

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ