AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2023: ಒಂದು ವಾರ ಇಂಗ್ಲೆಂಡ್-ಆಸ್ಟ್ರೇಲಿಯಾ ಆಟಗಾರರಿಗೆ ರೆಸ್ಟ್..!

England vs Australia: ಲೀಡ್ಸ್​ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿ ಇಂಗ್ಲೆಂಡ್ ತಂಡವು 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

Ashes 2023: ಒಂದು ವಾರ ಇಂಗ್ಲೆಂಡ್-ಆಸ್ಟ್ರೇಲಿಯಾ ಆಟಗಾರರಿಗೆ ರೆಸ್ಟ್..!
Ashes 2023
TV9 Web
| Edited By: |

Updated on: Jul 10, 2023 | 4:25 PM

Share

Ashes 2023: ಆ್ಯಶಸ್ ಟೆಸ್ಟ್​ ಸರಣಿಯ ಮೂರು ಪಂದ್ಯಗಳು ಮುಕ್ತಾಯವಾಗಿದೆ. ಇನ್ನುಳಿದಿರುವುದು ಕೇವಲ 2 ಪಂದ್ಯಗಳು ಮಾತ್ರ. ಆದರೆ ಜುಲೈ 9 ರಂದು ಮುಕ್ತಾಯಗೊಂಡ ಮೂರನೇ ಟೆಸ್ಟ್ ಬಳಿಕ ಇಂಗ್ಲೆಂಡ್-ಆಸ್ಟ್ರೇಲಿಯಾ (England vs Australia) ಆಟಗಾರರಿಗೆ ದೀರ್ಘಾವಧಿಯ ವಿಶ್ರಾಂತಿ ದೊರೆಕಿದೆ. ಅಂದರೆ 4ನೇ ಟೆಸ್ಟ್ ಪಂದ್ಯವು ಆರಂಭವಾಗುವುದು ಜುಲೈ 19 ರಿಂದ. ಅದರಂತೆ ಇನ್ನೊಂದು ವಾರ ಉಭಯ ತಂಡಗಳ ಆಟಗಾರರು ಸಂಪೂರ್ಣ ವಿಶ್ರಾಂತಿಯಲ್ಲಿರಲಿದ್ದಾರೆ.

ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ಈ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ 2 ವಿಕೆಟ್​ ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು. ಇನ್ನು ಲಾರ್ಡ್ಸ್​​ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ತಂಡವು 43 ರನ್​ಗಳಿಂದ ಗೆಲುವು ದಾಖಲಿಸಿತ್ತು. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದ ಮೂಲಕ ಸರಣಿಯನ್ನು ವಶಪಡಿಸಿಕೊಳ್ಳುವ ಉತ್ತಮ ಅವಕಾಶ ಆಸೀಸ್ ಮುಂದಿತ್ತು.

ಆದರೆ ಲೀಡ್ಸ್​ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿ ಇಂಗ್ಲೆಂಡ್ ತಂಡವು 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ ಸರಣಿಯು 2-1 ಆಗಿದೆ.

ಇನ್ನುಳಿದಿರುವ 2 ಪಂದ್ಯಗಳು ಉಭಯ ತಂಡಗಳ ಪಾಲಿಗೂ ನಿರ್ಣಾಯಕ. ಏಕೆಂದರೆ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು. ಒಂದು ವೇಳೆ ಇಂಗ್ಲೆಂಡ್ ಗೆಲುವು ದಾಖಲಿಸಿದರೆ ಸರಣಿಯು 2-2 ಅಂತರದಿಂದ ಸಮಬಲಗೊಳ್ಳಲಿದೆ. ಹೀಗಾದರೆ ಕೊನೆಯ ಟೆಸ್ಟ್ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಡಲಿದೆ.

ಇದನ್ನೂ ಓದಿ: Ashes 2023: ಆ್ಯಶಸ್ ಸರಣಿಯ 3ನೇ ಟೆಸ್ಟ್​ನಲ್ಲಿ 5 ದಾಖಲೆಗಳು ನಿರ್ಮಾಣ

ಹೀಗಾಗಿಯೇ ಮ್ಯಾಚೆಂಸ್ಟರ್​ನಲ್ಲಿ ನಡೆಯಲಿರುವ 4ನೇ ಟೆಸ್ಟ್​ ಪಂದ್ಯ ಕೂಡ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಜುಲೈ 19 ರಿಂದ ಓಲ್ಡ್​ ಟ್ರಾಫರ್ಡ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ ಸರಣಿ ಸಮಬಲವಾಗಲಿದ್ದು, ಆಸ್ಟ್ರೇಲಿಯಾ ಜಯಿಸಿದರೆ ಸರಣಿ ಆಸೀಸ್ ಪಾಲಾಗಲಿದೆ. ಅದರಂತೆ ಮ್ಯಾಂಚೆಸ್ಟರ್​ನಲ್ಲಿ ಮತ್ತೊಂದು ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ