AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2025: ಆಸ್ಟ್ರೇಲಿಯಾ ತಂಡಕ್ಕೆ ಹೊಸ ಆರಂಭಿಕ ದಾಂಡಿಗ ಎಂಟ್ರಿ

Australia vs England: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಪ್ರತಿಷ್ಠಿತ ಆ್ಯಶಸ್ ಸರಣಿಯು ನವೆಂಬರ್ 21 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಜೇಕ್​ ವೆದರಾಲ್ಡ್ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಆಸ್ಟ್ರೇಲಿಯಾ ತಂಡದ ಆರಂಭಿಕನಾಗಿ ಕಾಣಿಸಿಕೊಂಡಿದ್ದ ಸ್ಯಾಮ್​ ಕೊನ್​ಸ್ಟಾಸ್ ಈ ಸರಣಿಗೆ ಆಯ್ಕೆಯಾಗಿಲ್ಲ.

Ashes 2025: ಆಸ್ಟ್ರೇಲಿಯಾ ತಂಡಕ್ಕೆ ಹೊಸ ಆರಂಭಿಕ ದಾಂಡಿಗ ಎಂಟ್ರಿ
Jake Weatherald
ಝಾಹಿರ್ ಯೂಸುಫ್
|

Updated on: Nov 10, 2025 | 12:20 PM

Share

ಆಸ್ಟ್ರೇಲಿಯಾ ತಂಡದ ಸ್ಟಾರ್ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (David Warner) ಟೆಸ್ಟ್​ಗೆ ವಿದಾಯ ಹೇಳಿ ವರ್ಷಗಳಾಗುತ್ತಾ ಬಂದಿದೆ. ಇದಾಗ್ಯೂ ಆಸೀಸ್ ಪಡೆಗೆ ಬದಲಿ ಆರಂಭಿಕ ಆಟಗಾರ ಸಿಕ್ಕಿಲ್ಲ. ವಾರ್ನರ್ ನಿವೃತ್ತಿ ಬೆನ್ನಲ್ಲೇ ಸ್ಟೀವ್ ಸ್ಮಿತ್ ಅವರನ್ನು ಓಪನರ್ ಆಗಿ ಕಣಕ್ಕಿಳಿಸಲಾಗಿತ್ತು. ಆದರೆ ಈ ಪ್ರಯೋಗ ಕೈ ಕೊಟ್ಟಿದ್ದರಿಂದ ನಾಥನ್ ಮೆಕ್​ಸ್ವೀನಿ ಅವರನ್ನು ಆರಂಭಿಕನಾಗಿ ಪರಿಚಯಿಸಲಾಯಿತು.

ಮೆಕ್​ಸ್ವೀನಿ ಕಡೆಯಿಂದಲೂ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಟೀಮ್ ಇಂಡಿಯಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಸ್ಯಾಮ್ ಕೊನ್​ಸ್ಟಾಸ್ ಅವರನ್ನು ಕಣಕ್ಕಿಳಿಸಲಾಯಿತು. ಕೊನ್​ಸ್ಟಾಸ್ ಮೊದಲ ಪಂದ್ಯದಲ್ಲಿ ಅಬ್ಬರಿಸಿದರೂ ಆ ಬಳಿಕ ಸತತ ವೈಫಲ್ಯ ಅನುಭವಿಸಿದರು. ಹೀಗಾಗಿಯೇ ಆ್ಯಶಸ್ ಸರಣಿಯಿಂದ ಸ್ಯಾಮ್​ ಕೊನ್​ಸ್ಟಾಸ್ ಅವರನ್ನು ಕೈ ಬಿಡಲಾಗಿದೆ.

ಅವರ ಬದಲಿಗೆ ಅನುಭವಿ ಆಟಗಾರ ಜೇಕ್ ವೆದರಾಲ್ಡ್ ಅವರನ್ನು ಆಯ್ಕೆ ಮಾಡಿದ್ದಾರೆ. ಅದರಂತೆ ಈ ಬಾರಿಯ ಆ್ಯಶಸ್ ಸರಣಿಯಲ್ಲಿ ಆಸೀಸ್ ಪರ ವೆದರಾಲ್ಡ್ ಹಾಗೂ ಉಸ್ಮಾನ್ ಖ್ವಾಜಾ ಆರಂಭಿಕರಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ.

31 ವರ್ಷದ ಜೇಕ್ ವೆದರಾಲ್ಡ್ ಆಸ್ಟ್ರೇಲಿಯಾ ದೇಶೀಯ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ಅವರನ್ನು ಚೊಚ್ಚಲ ಬಾರಿ ಆಸೀಸ್ ಪಡೆಗೆ ಆಯ್ಕೆ ಮಾಡಲಾಗಿದೆ. ಈ ಆಯ್ಕೆಯೊಂದಿಗೆ ಜೇಕ್ ಪರ್ತ್​ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಪಂದ್ಯದಲ್ಲಿ ಜೇಕ್ ವೆದರಾಲ್ಡ್ ಯಶಸ್ವಿಯಾದರೆ ಉಳಿದ 4 ಮ್ಯಾಚ್​ಗಳಿಗೂ ಅವರನ್ನು ಮುಂದುವರೆಸಲಾಗುತ್ತದೆ. ಒಂದು ವೇಳೆ ವೈಫಲ್ಯ ಅನುಭಸಿದರೆ, ಆಸ್ಟ್ರೇಲಿಯಾ ತಂಡದ ಆರಂಭಿಕ ಜೋಡಿಯ ಪ್ರಯೋಗ ಮುಂದುವರೆಯಲಿದೆ.

ಆಸ್ಟ್ರೇಲಿಯಾ ಟೆಸ್ಟ್ ತಂಡ (ಮೊದಲ ಪಂದ್ಯಕ್ಕೆ): ಸ್ಟೀವ್ ಸ್ಮಿತ್ (ನಾಯಕ), ಶಾನ್ ಅಬಾಟ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಬ್ರೆಂಡನ್ ಡಾಗೆಟ್, ಕ್ಯಾಮರೋನ್ ಗ್ರೀನ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಮಿಚೆಲ್ ಸ್ಟಾರ್ಕ್, ಜೇಕ್ ವೆದರಾಲ್ಡ್, ಬ್ಯೂ ವೆಬ್‌ಸ್ಟರ್.

ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಹ್ಯಾರಿ ಬ್ರೂಕ್ (ಉಪನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಶೋಯೆಬ್ ಬಶೀರ್, ಜೇಕಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಓಲಿ ಪೋಪ್, ಮ್ಯಾಥ್ಯೂ ಪಾಟ್ಸ್, ಜೋ ರೂಟ್, ಜೇಮಿ ಸ್ಮಿತ್, ಜೋಶ್ ಟಂಗ್, ಮಾರ್ಕ್ ವುಡ್.

ಇದನ್ನೂ ಓದಿ: ಮಿಲಿಂದ್ ಆರ್ಭಟಕ್ಕೆ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಉಡೀಸ್

ಆ್ಯಶಸ್ ಸರಣಿ ವೇಳಾಪಟ್ಟಿ:

  • ಮೊದಲ ಟೆಸ್ಟ್: ಶುಕ್ರವಾರ ನವೆಂಬರ್ 21 – ನವೆಂಬರ್ 25 (ಬೆಳಿಗ್ಗೆ 2.30) – ಆಪ್ಟಸ್ ಕ್ರೀಡಾಂಗಣ, ಪರ್ತ್
  • ಎರಡನೇ ಟೆಸ್ಟ್: ಗುರುವಾರ ಡಿಸೆಂಬರ್ 4 – ಡಿಸೆಂಬರ್ 8 (ಬೆಳಿಗ್ಗೆ 4.30) – ದಿ ಗಬ್ಬಾ, ಬ್ರಿಸ್ಬೇನ್
  • ಮೂರನೇ ಟೆಸ್ಟ್: ಬುಧವಾರ ಡಿಸೆಂಬರ್ 17 – ಡಿಸೆಂಬರ್ 21 (ಬೆಳಿಗ್ಗೆ 12) – ಅಡಿಲೇಡ್ ಓವಲ್
  • ನಾಲ್ಕನೇ ಟೆಸ್ಟ್: ಗುರುವಾರ ಡಿಸೆಂಬರ್ 25 – ಡಿಸೆಂಬರ್ 29 (ರಾತ್ರಿ 11.30) – ಮೆಲ್ಬೋರ್ನ್ ಕ್ರಿಕೆಟ್ ಮೈದಾನ
  • ಐದನೇ ಟೆಸ್ಟ್: ಜನವರಿ 3 ಭಾನುವಾರ – ಜನವರಿ 7  (ರಾತ್ರಿ 11.30) – ಸಿಡ್ನಿ ಕ್ರಿಕೆಟ್ ಮೈದಾನ.
Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?